ಹನೂರು : ಬೆಳ್ಳಂಬೆಳಗ್ಗೆ ಎರಡು ಕಾಡಾನೆಗಳು ಜಮೀನುಗಳಲ್ಲಿ ಓಡಾಡಿ ಆತಂಕ ಸೃಷ್ಟಿಸಿದ ಘಟನೆ ಹನೂರು ತಾಲೂಕಿನ ಗುಂಡಾಪುರ ಗ್ರಾಮದಲ್ಲಿ ಶನಿವಾರ ಜರುಗಿದೆ.
ಗುಂಡಾಪುರ, ಬೂದುಬಾಳು ಜಮೀನುಗಳಲ್ಲಿ ಆಹಾರ, ನೀರು ಹರಸಿ ಬಂದಿರುವ ಕಾಡಾನೆಗಳು ಜಮೀನುಗಳಲ್ಲಿ ದಿಕ್ಕ ಪಾಲಾಗಿ ಓಡಾಡಿದ್ದು ಆನೆಗಳನ್ನು ಕಂಡ ರೈತರು ಕೂಲಿ ಕಾರ್ಮಿಕರು ಭಯಗೊಂಡಿದ್ದಾರೆ.
ರೈತ ಮುಖಂಡರು ಮಾತನಾಡಿ, ಕಾಡಾನೆಗಳು ರಾತ್ರಿ ವೇಳೆ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಕೃಷಿ ಪರಿಕರಗಳನ್ನು ನಾಶ ಮಾಡುತ್ತಿದ್ದವು ಇದೀಗ ಬೆಳಗಿನ ವೇಳೆಗೆ ಜಮೀನುಗಳಲ್ಲಿ ಆನೆಗಳು ಹೋರಾಟ ನಡೆಸುತ್ತಿರುವುದರಿಂದ ರೈತರಿಗೆ ಮತ್ತಷ್ಟು ಆತಂಕವನ್ನುಂಟು ಮಾಡಿದೆ ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಕಾಡಾನೆಗಳು, ಜಮೀನಿಗೆ ಬಾರದಂತೆ ಸೂಕ್ತ ಕ್ರಮ ವಹಿಸಬೇಕು, ಮುಂದಿನ ದಿನಗಳಲ್ಲಿ ನಿಯಂತ್ರಣ ಮಾಡದಿದ್ದರೆ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಕಾಡಾನೆ ಓಡಾಟದ ವಿಡಿಯೋವನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…