ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ತಾಲ್ಲೂಕಿನ ಪಾಲಾರ್ ರಸ್ತೆಯಲ್ಲಿ ಮಂಗಳವಾರ ರಾತ್ರಿ ಕಾಡಾನೆಗಳು ರಸ್ತೆ ಬದಿಯಲ್ಲಿ ಓಡಾಟ ನಡೆಸಿದ್ದು, ವಾಹನ ಸವಾರರಿಗೆ ಭಯದ ವಾತಾವರಣ ಉಂಟುಮಾಡಿದೆ.
ವಾಹನ ಸವಾರರ ಮೊಬೈಲ್ ನಲ್ಲಿ ಕಾಡಾನೆಗಳ ಓಡಾಟದ ದೃಶ್ಯ ಸೆರೆಯಾಗಿದ್ದು, ಅರಣ್ಯಾಧಿಕಾರಿಗಳು ಮುಖ್ಯರಸ್ತೆಗೆ ಬರುತ್ತಿರುವ ಕಾಡಾನೆಗಳನ್ನು ಅರಣ್ಯ ಪ್ರದೇಶಕ್ಕೆ ಓಡಿಸಲು ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಮಾನವ ಪ್ರಾಣಿ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ ಎಂದು ಸ್ಥಳೀಯರು ಅಸಮಾಧಾನ ಹೊರಹಾಕಿದ್ದಾರೆ.
ಪಾಲಾರ್ ರಸ್ತೆಯಲ್ಲಿ ಎರಡು ಬದಿಯೂ ಕಾಡಾನೆಗಳು ಬೀಡು ಬಿಡುವುದರಿಂದ ವಾಹನ ಸವಾರರು ಪ್ರಾಣಭೀತಿಯಲ್ಲಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಗಾಯಗೊಂಡ ಆನೆ ದೃಶ್ಯ ಸೆರೆ: ಪಾಲಾರ್ ರಸ್ತೆಯಲ್ಲಿ ಆನೆಗಳು ಓಡಾಟ ನಡೆಸಿದ ಸಂದರ್ಭದಲ್ಲಿ ಆನೆಯೊಂದರ ಸೊಂಡಿಲಿಗೆ ಗಾಯಗೊಂಡಿರುವ ವಿಚಾರ ಬೆಳಕಿಗೆ ಬಂದಿದೆ.
ವಾಹನ ಸವಾರರು ಗಾಯಗೊಂಡ ಆನೆಯ ದೃಶ್ಯವನ್ನು ಸೆರೆ ಹಿಡಿದಿದ್ದು, ಸೊಂಡಿಲಿನ ಭಾಗದಲ್ಲಿ ಗಾಯಗಳಾಗಿದೆ. ಗಾಯಗೊಂಡ ಆನೆ ಮೇಲೆ ಅರಣ್ಯ ಇಲಾಖೆ ನಿಗಾ ಇಟ್ಟು ಸೂಕ್ತ ಚಿಕಿತ್ಸೆ ಕೊಡಿಸಬೇಕೆಂದು ಪರಿಸರ ಪ್ರೇಮಿಗಳು ಒತ್ತಾಯಿಸಿದ್ದಾರೆ.
ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…
ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…
ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…
ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…