ಚಾಮರಾಜನಗರ: ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯದಲ್ಲಿ ಸೋಮವಾರ ಕಾಡ್ತಿಚ್ಚು ಕಾಣಿಸಿಕೊಂಡು ಹತ್ತಾರು ಎಕರೆ ಅರಣ್ಯ ಸುಟ್ಟು ಹೋಗಿದೆ.
ಪುಣಜನೂರಿನಿಂದ ಬೇಡಗುಳಿಗೆ ಹೋಗುವ ರಸ್ತೆಯ ವ್ಯಾಪ್ತಿಯ ಕುರಿದುಂದೆ, ಕುಂಬಳಕಾಯಿ ಗುಡ್ಡ ಪ್ರದೇಶದ 3-4 ಕಡೆಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಆರಿಸಲು ಅರಣ್ಯ ಇಲಾಖೆ ಸಿಬ್ಬಂದಿ ಕ್ರಮ ವಹಿಸಿದ್ದಾರೆ.
ಬೆಳಿಗ್ಗೆಯೇ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಸಂಜೆಯಾದರೂ ನಂದಿಸಲು ಸಾಧ್ಯವಾಗಿಲ್ಲ. ಕಾಡು ಒಣಗಿದ್ದು, ಗಾಳಿ ಹಾಗೂ ಬಿಸಿಲಿನಿಂದಾಗಿ ಬೆಂಕಿ ವೇಗವಾಗಿ ಹರಡುತ್ತಿದೆ. ಕನಿಷ್ಠ 50 ಎಕರೆಗೂ ಹೆಚ್ಚು ಕಾಡು ಬೆಂಕಿಗೆ ಆಹುತಿಯಾಗಿದೆ ಎಂದು ಅರಣ್ಯ ಅಧಿಕಾರಿಗಳು ಹೇಳುತ್ತಿದ್ದಾರೆ.
ಕೋರ್ ಅರಣ್ಯ ವಲಯದಲ್ಲಿ ಬೆಂಕಿ ಬಿದ್ದಿರುವುದರಿಂದ ಅಂದಾಜು ಸಿಗುತ್ತಿಲ್ಲ. ಆದರೆ, ದಟ್ಟ ಹೊಗೆ, ಹೊರದಿಂದಲೇ ಕಾಣಿಸುತ್ತಿದೆ. ಕನಿಷ್ಠ 50 ಎಕರೆ ಅರಣ್ಯ ಬೆಂದು ಹೋಗಿರಬಹುದು. ನೆಲ ಬೆಂಕಿಯಾಗಿದ್ದು, ಎತ್ತರಕ್ಕೆ ವ್ಯಾಪಿಸಿಲ್ಲ. ಬೆಂಕಿ ನಂದಿಸಲು ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಹುಲಿ ಸಂರಕ್ಷಿತ ಪ್ರದೇಶದ ಡಿಸಿಎಫ್ ದೀಪ್ ಜೆ.ಕಂಟ್ರ್ಯಾಕ್ಟರ್ ತಿಳಿಸಿದ್ದಾರೆ. ಕಾಡ್ತಿಚ್ಚು ಕಾಣಿಸಿಕೊಂಡಿದೆಯೇ ಅಥವಾ ಸ್ಥಳೀಯರೇ ಬೆಂಕಿ ಹಾಕಿರಬಹುದೇ ಎಂಬ ಬಗ್ಗೆ ಅನುಮಾನವಿದೆ. ಈ ಕುರಿತು ಪ್ರಕರಣ ದಾಖಲಿಸಿ ತನಿಖೆ ನಡೆಸಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಕೆಮಿಕಲ್ ಘಟಕದಲ್ಲಿ ಲೇಬಲ್ ಇಲ್ಲದ ಖಾಲಿ ಬಾಟಲ್ಗಳನ್ನು…
ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…
ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…
ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…
ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…