ಚಾಮರಾಜನಗರ: ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯದಲ್ಲಿ ಸೋಮವಾರ ಕಾಡ್ತಿಚ್ಚು ಕಾಣಿಸಿಕೊಂಡು ಹತ್ತಾರು ಎಕರೆ ಅರಣ್ಯ ಸುಟ್ಟು ಹೋಗಿದೆ.
ಪುಣಜನೂರಿನಿಂದ ಬೇಡಗುಳಿಗೆ ಹೋಗುವ ರಸ್ತೆಯ ವ್ಯಾಪ್ತಿಯ ಕುರಿದುಂದೆ, ಕುಂಬಳಕಾಯಿ ಗುಡ್ಡ ಪ್ರದೇಶದ 3-4 ಕಡೆಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಆರಿಸಲು ಅರಣ್ಯ ಇಲಾಖೆ ಸಿಬ್ಬಂದಿ ಕ್ರಮ ವಹಿಸಿದ್ದಾರೆ.
ಬೆಳಿಗ್ಗೆಯೇ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಸಂಜೆಯಾದರೂ ನಂದಿಸಲು ಸಾಧ್ಯವಾಗಿಲ್ಲ. ಕಾಡು ಒಣಗಿದ್ದು, ಗಾಳಿ ಹಾಗೂ ಬಿಸಿಲಿನಿಂದಾಗಿ ಬೆಂಕಿ ವೇಗವಾಗಿ ಹರಡುತ್ತಿದೆ. ಕನಿಷ್ಠ 50 ಎಕರೆಗೂ ಹೆಚ್ಚು ಕಾಡು ಬೆಂಕಿಗೆ ಆಹುತಿಯಾಗಿದೆ ಎಂದು ಅರಣ್ಯ ಅಧಿಕಾರಿಗಳು ಹೇಳುತ್ತಿದ್ದಾರೆ.
ಕೋರ್ ಅರಣ್ಯ ವಲಯದಲ್ಲಿ ಬೆಂಕಿ ಬಿದ್ದಿರುವುದರಿಂದ ಅಂದಾಜು ಸಿಗುತ್ತಿಲ್ಲ. ಆದರೆ, ದಟ್ಟ ಹೊಗೆ, ಹೊರದಿಂದಲೇ ಕಾಣಿಸುತ್ತಿದೆ. ಕನಿಷ್ಠ 50 ಎಕರೆ ಅರಣ್ಯ ಬೆಂದು ಹೋಗಿರಬಹುದು. ನೆಲ ಬೆಂಕಿಯಾಗಿದ್ದು, ಎತ್ತರಕ್ಕೆ ವ್ಯಾಪಿಸಿಲ್ಲ. ಬೆಂಕಿ ನಂದಿಸಲು ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಹುಲಿ ಸಂರಕ್ಷಿತ ಪ್ರದೇಶದ ಡಿಸಿಎಫ್ ದೀಪ್ ಜೆ.ಕಂಟ್ರ್ಯಾಕ್ಟರ್ ತಿಳಿಸಿದ್ದಾರೆ. ಕಾಡ್ತಿಚ್ಚು ಕಾಣಿಸಿಕೊಂಡಿದೆಯೇ ಅಥವಾ ಸ್ಥಳೀಯರೇ ಬೆಂಕಿ ಹಾಕಿರಬಹುದೇ ಎಂಬ ಬಗ್ಗೆ ಅನುಮಾನವಿದೆ. ಈ ಕುರಿತು ಪ್ರಕರಣ ದಾಖಲಿಸಿ ತನಿಖೆ ನಡೆಸಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…