ಚಾಮರಾಜನಗರ: ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯದಲ್ಲಿ ಸೋಮವಾರ ಕಾಡ್ತಿಚ್ಚು ಕಾಣಿಸಿಕೊಂಡು ಹತ್ತಾರು ಎಕರೆ ಅರಣ್ಯ ಸುಟ್ಟು ಹೋಗಿದೆ.
ಪುಣಜನೂರಿನಿಂದ ಬೇಡಗುಳಿಗೆ ಹೋಗುವ ರಸ್ತೆಯ ವ್ಯಾಪ್ತಿಯ ಕುರಿದುಂದೆ, ಕುಂಬಳಕಾಯಿ ಗುಡ್ಡ ಪ್ರದೇಶದ 3-4 ಕಡೆಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಆರಿಸಲು ಅರಣ್ಯ ಇಲಾಖೆ ಸಿಬ್ಬಂದಿ ಕ್ರಮ ವಹಿಸಿದ್ದಾರೆ.
ಬೆಳಿಗ್ಗೆಯೇ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಸಂಜೆಯಾದರೂ ನಂದಿಸಲು ಸಾಧ್ಯವಾಗಿಲ್ಲ. ಕಾಡು ಒಣಗಿದ್ದು, ಗಾಳಿ ಹಾಗೂ ಬಿಸಿಲಿನಿಂದಾಗಿ ಬೆಂಕಿ ವೇಗವಾಗಿ ಹರಡುತ್ತಿದೆ. ಕನಿಷ್ಠ 50 ಎಕರೆಗೂ ಹೆಚ್ಚು ಕಾಡು ಬೆಂಕಿಗೆ ಆಹುತಿಯಾಗಿದೆ ಎಂದು ಅರಣ್ಯ ಅಧಿಕಾರಿಗಳು ಹೇಳುತ್ತಿದ್ದಾರೆ.
ಕೋರ್ ಅರಣ್ಯ ವಲಯದಲ್ಲಿ ಬೆಂಕಿ ಬಿದ್ದಿರುವುದರಿಂದ ಅಂದಾಜು ಸಿಗುತ್ತಿಲ್ಲ. ಆದರೆ, ದಟ್ಟ ಹೊಗೆ, ಹೊರದಿಂದಲೇ ಕಾಣಿಸುತ್ತಿದೆ. ಕನಿಷ್ಠ 50 ಎಕರೆ ಅರಣ್ಯ ಬೆಂದು ಹೋಗಿರಬಹುದು. ನೆಲ ಬೆಂಕಿಯಾಗಿದ್ದು, ಎತ್ತರಕ್ಕೆ ವ್ಯಾಪಿಸಿಲ್ಲ. ಬೆಂಕಿ ನಂದಿಸಲು ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಹುಲಿ ಸಂರಕ್ಷಿತ ಪ್ರದೇಶದ ಡಿಸಿಎಫ್ ದೀಪ್ ಜೆ.ಕಂಟ್ರ್ಯಾಕ್ಟರ್ ತಿಳಿಸಿದ್ದಾರೆ. ಕಾಡ್ತಿಚ್ಚು ಕಾಣಿಸಿಕೊಂಡಿದೆಯೇ ಅಥವಾ ಸ್ಥಳೀಯರೇ ಬೆಂಕಿ ಹಾಕಿರಬಹುದೇ ಎಂಬ ಬಗ್ಗೆ ಅನುಮಾನವಿದೆ. ಈ ಕುರಿತು ಪ್ರಕರಣ ದಾಖಲಿಸಿ ತನಿಖೆ ನಡೆಸಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…