ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ವಿಭಾಗದ ಗೋಪಿನಾಥಂನ ಮೈಲುಮಲೈ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 15 ಕ್ಕೂ ಹೆಚ್ಚು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿಯ ಕೆನ್ನಾಲಿಗೆ ಆವರಿಸಿದೆ.
ಬೆಂಕಿ ಕಾಣಿಸಿಕೊಂಡಿದ್ದ ಬಗ್ಗೆ ಗಸ್ತಿನಲ್ಲಿದ್ದ ಸಿಬ್ಬಂದಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಬೆಂಕಿ ನಂದಿಸಲು ಮುಂದಾದರು. ಬಳಿಕ ಆಗಮಿಸಿದ ಅರಣ್ಯಾಧಿಕಾರಿಗಳು ಹಾಗೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡು ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ.
ಈ ಬಗ್ಗೆ ಕಾವೇರಿ ವನ್ಯಧಾಮದ ಎಸಿಎಫ್ ಅಂಕರಾಜು ಪ್ರತಿಕ್ರಿಯಿಸಿ, ಮೈಲುಮಲೈ ಅರಣ್ಯದಲ್ಲಿ ಬೇಸಿಗೆಯಲ್ಲೂ ಹಸಿರಿನಿಂದ ಕೂಡಿರುವ ಪ್ರದೇಶವಾಗಿದೆ. ಈ ಭಾಗದಲ್ಲಿ ಏಳು ವರ್ಷದ ನಂತರ ಬೆಂಕಿ ಬಿದ್ದಿದ್ದೆ. ಈಗಾಗಲೇ ಬೆಂಕಿ ನಂದಿಸಲಾಗಿದೆ. ಮುನ್ನಚ್ಚರಿಕೆ ಕ್ರಮವಾಗಿ 20ಕ್ಕೂ ಸಿಬ್ಬಂದಿ ಅರಣ್ಯ ಪ್ರದೇಶದಲ್ಲೇ ಬೀಡು ಬಿಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…
ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…
ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…
ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…
ಬೆಂಗಳೂರು : ವಿಆರ್ ಗ್ರೂಪ್ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…
ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…