ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ ಜೆಎಂಎಫ್ಸಿ ನ್ಯಾಯಾಲಯದ ಅಪರ ಸಿವಿಲ್ ನ್ಯಾಯಾಧೀಶರಾದ ರಂಜಿತ್ ಕುಮಾರ್ ಎಂ ತಿಳಿಸಿದರು.
ತಾಲೂಕಿನ ಮಂಗಲ ಪ್ರೌಢಶಾಲೆಯಲ್ಲಿ ಹನೂರು ಬಫರ್ ವಲಯ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ವನ್ಯಜೀವಿ ದಿನ ಕಾರ್ಯಕ್ರಮ ಉದ್ಘಾಟನೆ ಮಾಡಿ ನಂತರ ಮಾತನಾಡಿದರು.
ಕಾಡಿನಲ್ಲಿ ವಾಸ ಮಾಡುವಂತಹ ವನ್ಯ ಪ್ರಾಣಿಗಳಿಗೆ ನಾವು ಯಾವುದೇ ತೊಂದರೆ ಕೊಡಬಾರದು. ಅಂತಹ ಪ್ರಾಣಿಗಳಿಗೆ ಕಂಟಕವಾಗುತ್ತಿರುವ ಬಗ್ಗೆ ಇತ್ತೀಚಿನ ದಿನಗಳಲ್ಲಿ ನಾವು ವರದಿಗಳನ್ನು ಗಮನಿಸುತ್ತಿದ್ದೇವೆ. ಆ ರೀತಿಯ ತೊಂದರೆಗಳು ಕಂಡುಬಂದಲ್ಲಿ ಅಂತಹ ಅಪರಾಧಿಗಳಿಗೆ ಶಿಕ್ಷೆಯನ್ನು ಸಹ ವಿಧಿಸಲಾಗುತ್ತದೆ. ಹಾಗಾಗಿ ಅಂತಹ ಘಟನೆಗಳಿಗೆ ಯಾರು ಸಹ ಕಾರಣರಾಗಬಾರದು. ಪ್ರಕೃತಿಯಲ್ಲಿ ನಮ್ಮ ಪ್ರೀತಿಯಲ್ಲಿ ಪ್ರಾಣಿಗಳು ಸಹ ಬದುಕಲು ದೇವರು ಅವಕಾಶ ಕಲ್ಪಿಸಿದ್ದಾನೆ. ಹಾಗಾಗಿ ಅವುಗಳು ಸಹ ತಮ್ಮಷ್ಟಕ್ಕೆ ತಾವು ತಮ್ಮ ಪ್ರಾಣಿ ಸಂಕುಲವನ್ನು ಹೆಚ್ಚಳ ಮಾಡಿಕೊಳ್ಳಲು ಮುಂದಾಗುತ್ತಿವೆ ಎಂದರು.
ಡಿಸಿಎಫ್ ಭಾಸ್ಕರ್ ಮಾತನಾಡಿ, ಪ್ರಕೃತಿಯಲ್ಲಿ ಸಿಗುವಂತಹ ಶುಭಗಂಧ ನೋಡಿ ಆನಂದ ಪಡಬೇಕು ವಿನಹ ಪ್ರಕೃತಿಯನ್ನು ನಾಶ ಮಾಡಲು ನಾವು ಪಣತೊಡಬಾರದು. ಇತ್ತೀಚಿನ ದಿನಗಳಲ್ಲಿ ಮಾನವ ಪ್ರಕೃತಿಯ ವಿನಾಶಕ್ಕೆ ಕಾರಣವಾಗುತ್ತಿದ್ದು ಪ್ರಾಣಿಗಳ ವಿನಾಶಕ್ಕೆ ಕಾರಣವಾಗುತ್ತಿದ್ದು, ಅಂತಹ ಕೃತ್ಯಗಳಿಗೆ ಕಡಿವಾಣ ಆಗಬೇಕಾಗಿದೆ. ಮಕ್ಕಳ ಬಿಸಿಯಲ್ಲಿ ತಾವೆಲ್ಲರೂ ಕೂಡ ಪ್ರಾಣಿ ಪ್ರಿಯರಾಗಬೇಕು ವನ್ಯಜೀವಿಗಳ ಸಂರಕ್ಷಣೆಗೆ ನಿಮ್ಮದೇ ಆದಂತಹ ಕೊಡುಗೆಗಳನ್ನು ನೀಡಬೇಕು ಎಂದರು.
ಜಾಥಾ ಕಾರ್ಯಕ್ರಮ: ವಿಶ್ವ ವನ್ಯಜೀವಿ ದಿನಾಚರಣೆಯ ಪ್ರಯುಕ್ತ ಶಾಲಾ ಮಕ್ಕಳ ಜೊತೆಗೂಡಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಗೌರವಾನ್ವಿತ ನ್ಯಾಯಾಧೀಶರು ಕೂಡ ಜಾಥಾ ಕಾರ್ಯಕ್ರಮದಲ್ಲಿ ಹೆಜ್ಜೆ ಹಾಕುವ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಿದರು.
ಇದೇ ಸಂದರ್ಭದಲ್ಲಿ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಡಿಸಿಎಫ್ ಭಾಸ್ಕರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ವಿರಾಜ್ ಶ್ರೀ ಕಾಂತ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಹನೂರು ಬಫರ್ ವಲಯದ ಅರಣ್ಯ ಅಧಿಕಾರಿ ಜಿತೇಂದ್ರ, ಮಂಗಳ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರು ಮಕ್ಕಳು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…