ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ ಜೆಎಂಎಫ್ಸಿ ನ್ಯಾಯಾಲಯದ ಅಪರ ಸಿವಿಲ್ ನ್ಯಾಯಾಧೀಶರಾದ ರಂಜಿತ್ ಕುಮಾರ್ ಎಂ ತಿಳಿಸಿದರು.
ತಾಲೂಕಿನ ಮಂಗಲ ಪ್ರೌಢಶಾಲೆಯಲ್ಲಿ ಹನೂರು ಬಫರ್ ವಲಯ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ವನ್ಯಜೀವಿ ದಿನ ಕಾರ್ಯಕ್ರಮ ಉದ್ಘಾಟನೆ ಮಾಡಿ ನಂತರ ಮಾತನಾಡಿದರು.
ಕಾಡಿನಲ್ಲಿ ವಾಸ ಮಾಡುವಂತಹ ವನ್ಯ ಪ್ರಾಣಿಗಳಿಗೆ ನಾವು ಯಾವುದೇ ತೊಂದರೆ ಕೊಡಬಾರದು. ಅಂತಹ ಪ್ರಾಣಿಗಳಿಗೆ ಕಂಟಕವಾಗುತ್ತಿರುವ ಬಗ್ಗೆ ಇತ್ತೀಚಿನ ದಿನಗಳಲ್ಲಿ ನಾವು ವರದಿಗಳನ್ನು ಗಮನಿಸುತ್ತಿದ್ದೇವೆ. ಆ ರೀತಿಯ ತೊಂದರೆಗಳು ಕಂಡುಬಂದಲ್ಲಿ ಅಂತಹ ಅಪರಾಧಿಗಳಿಗೆ ಶಿಕ್ಷೆಯನ್ನು ಸಹ ವಿಧಿಸಲಾಗುತ್ತದೆ. ಹಾಗಾಗಿ ಅಂತಹ ಘಟನೆಗಳಿಗೆ ಯಾರು ಸಹ ಕಾರಣರಾಗಬಾರದು. ಪ್ರಕೃತಿಯಲ್ಲಿ ನಮ್ಮ ಪ್ರೀತಿಯಲ್ಲಿ ಪ್ರಾಣಿಗಳು ಸಹ ಬದುಕಲು ದೇವರು ಅವಕಾಶ ಕಲ್ಪಿಸಿದ್ದಾನೆ. ಹಾಗಾಗಿ ಅವುಗಳು ಸಹ ತಮ್ಮಷ್ಟಕ್ಕೆ ತಾವು ತಮ್ಮ ಪ್ರಾಣಿ ಸಂಕುಲವನ್ನು ಹೆಚ್ಚಳ ಮಾಡಿಕೊಳ್ಳಲು ಮುಂದಾಗುತ್ತಿವೆ ಎಂದರು.
ಡಿಸಿಎಫ್ ಭಾಸ್ಕರ್ ಮಾತನಾಡಿ, ಪ್ರಕೃತಿಯಲ್ಲಿ ಸಿಗುವಂತಹ ಶುಭಗಂಧ ನೋಡಿ ಆನಂದ ಪಡಬೇಕು ವಿನಹ ಪ್ರಕೃತಿಯನ್ನು ನಾಶ ಮಾಡಲು ನಾವು ಪಣತೊಡಬಾರದು. ಇತ್ತೀಚಿನ ದಿನಗಳಲ್ಲಿ ಮಾನವ ಪ್ರಕೃತಿಯ ವಿನಾಶಕ್ಕೆ ಕಾರಣವಾಗುತ್ತಿದ್ದು ಪ್ರಾಣಿಗಳ ವಿನಾಶಕ್ಕೆ ಕಾರಣವಾಗುತ್ತಿದ್ದು, ಅಂತಹ ಕೃತ್ಯಗಳಿಗೆ ಕಡಿವಾಣ ಆಗಬೇಕಾಗಿದೆ. ಮಕ್ಕಳ ಬಿಸಿಯಲ್ಲಿ ತಾವೆಲ್ಲರೂ ಕೂಡ ಪ್ರಾಣಿ ಪ್ರಿಯರಾಗಬೇಕು ವನ್ಯಜೀವಿಗಳ ಸಂರಕ್ಷಣೆಗೆ ನಿಮ್ಮದೇ ಆದಂತಹ ಕೊಡುಗೆಗಳನ್ನು ನೀಡಬೇಕು ಎಂದರು.
ಜಾಥಾ ಕಾರ್ಯಕ್ರಮ: ವಿಶ್ವ ವನ್ಯಜೀವಿ ದಿನಾಚರಣೆಯ ಪ್ರಯುಕ್ತ ಶಾಲಾ ಮಕ್ಕಳ ಜೊತೆಗೂಡಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಗೌರವಾನ್ವಿತ ನ್ಯಾಯಾಧೀಶರು ಕೂಡ ಜಾಥಾ ಕಾರ್ಯಕ್ರಮದಲ್ಲಿ ಹೆಜ್ಜೆ ಹಾಕುವ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಿದರು.
ಇದೇ ಸಂದರ್ಭದಲ್ಲಿ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಡಿಸಿಎಫ್ ಭಾಸ್ಕರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ವಿರಾಜ್ ಶ್ರೀ ಕಾಂತ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಹನೂರು ಬಫರ್ ವಲಯದ ಅರಣ್ಯ ಅಧಿಕಾರಿ ಜಿತೇಂದ್ರ, ಮಂಗಳ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರು ಮಕ್ಕಳು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಕಳ್ಳರ ಹಾವಳಿ ಮಿತಿಮೀರಿದ್ದು, ಕಳ್ಳನನ್ನು ಹಿಡಿಯಲು ಹೋದ ಜನರಿಗೆ ಚಾಕು ತೋರಿಸಿ ಪರಾರಿಯಾಗಿರುವ ಘಟನೆ…
ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆ ಪ್ರಶ್ನಿಸಿ ಶಾಸಕ…
ಬೆಂಗಳೂರು: ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಪರಿಣಾಮ ತಗ್ಗಿಸಲು ಕರ್ನಾಟಕ ರಾಜ್ಯ ಕ್ರಿಯಾ ಯೋಜನೆ ರೂಪಿಸಲಾಗಿದ್ದು, ಇದರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಲೆ ಮಹದೇಶ್ವರ ವನ್ಯಧಾಮದ ಪಿ.ಜಿ.ಪಾಳ್ಯ ವಲಯ ವ್ಯಾಪ್ತಿಯಲ್ಲಿ ಸಫಾರಿ ವೇಳೆ…
ಮುಂಬೈ: ನಿಮ್ಮ ಧರ್ಮ ಯಾವುದು ಎಂದು ಕೇಳಿ ಇಬ್ಬರು ಭದ್ರತಾ ಸಿಬ್ಬಂದಿಗಳಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆ ದೇಶದ ವಾಣಿಜ್ಯ…