ಚಾಮರಾಜನಗರ

ಯಳಂದೂರು | ಕೆರೆಗಳಿಂದ ಅಕ್ರಮ ಮಣ್ಣು ಸಾಗಾಟ ; ಅಧಿಕಾರಿಗಳ ಜಾಣಮೌನ

ಯಳಂದೂರು : ತಾಲ್ಲೂಕಿನ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತುಂಬಲಾಗುತ್ತಿದೆ. ಅಕ್ರಮಕ್ಕೆ ಕಡಿವಾಣ ಹಾಕಿಬೇಕಿದ್ದ ಇಲಾಖೆಗಳು ಕಣ್ಮುಚ್ಚಿ ಕುಳಿತಿವೆ. ಮಣ್ಣು ಮಾಫಿಯಾ ತಡೆಗಟ್ಟಬೇಕಿದ್ದ ಭೂ ಮತ್ತು ಗಣಿ ಇಲಾಖೆ, ಕಂದಾಯ ಹಾಗೂ ನೀರಾವರಿ ಇಲಾಖೆಗಳು ಜಾಣ ಮೌನ ವಹಿಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ತಾಲ್ಲೂಕಿನ ಅಂಬಳೆ, ವೈ.ಕೆ.ಮೋಳೆ, ಗುಂಬಳ್ಳಿ, ಯರಗಂಬಳ್ಳಿ, ಕೃಷ್ಣಾಪುರ, ವಡಗೆರೆ, ಗೌಡಹಳ್ಳಿ, ಮಲಾರಪಾಳ್ಯ ಸುತ್ತಮುತ್ತಲಿನ ಕೆರೆಗಳಲ್ಲಿ ಜೆಸಿಬಿ ಯಂತ್ರದ ಮೂಲಕ ನೂರಾರು ಟ್ರಾಕ್ಟರ್‌ಗಳಲ್ಲಿ ಮಣ್ಣನ್ನು ತುಂಬಿಕೊಂಡು ರಾಜಾರೋಷವಾಗಿ ಸಾಗಾಣಿಕೆ ಮಾಡಲಾಗುತ್ತಿದೆ. ಇದಕ್ಕಾಗಿಯೇ ಕೆಲವರು ಇದನ್ನು ದಂಧೆ ಮಾಡಿಕೊಂಡು ಕೆರೆಗಳ ಗರ್ಭವನ್ನು ಅಗೆದು ಲಕ್ಷಾಂತರ ರೂ. ಲಾಭವನ್ನು ಮಾಡಿಕೊಳ್ಳುತ್ತಿದ್ದಾರೆ.

ತಾಲ್ಲೂಕಿನ ಕೃಷ್ಣಾಪುರ, ಯರಗಂಬಳ್ಳಿ, ವಡಗೆರೆ, ಗೌಡಹಳ್ಳಿ ಕೆರೆಗಳಲ್ಲಿ ಸಿಗುವ ಮಣ್ಣು ಗ್ರಾವೆಲ್ ಆಗಿದೆ. ಇದನ್ನು ಕಟ್ಟಡಗಳ ನಿರ್ಮಾಣದ ಅಡಿಪಾಯ ಹಾಗೂ ನೆಲ ಮಹಡಿಗಳಿಗೆ ಭರ್ತಿ ಹಾಕಲು ಬಳಸಲಾಗುತ್ತದೆ. ಪ್ರಸ್ತುತ ಇದಕ್ಕೆ ಹೆಚ್ಚಿನ ಬೇಡಿಕೆ ಇದೆ. ಟ್ರಾಕ್ಟರ್‌ಗೆ 1,300 ರೂ.ನಿಂದ 2,500 ಸಾವಿರ ರೂ.ವರೆಗೆ ಇದನ್ನು ಮಾರಾಟ ಮಾಡಲಾಗುತ್ತದೆ. ಇದನ್ನು ತುಂಬುವ ಉದ್ದೇಶದಿಂದ ಕೆರೆಗಳಲ್ಲಿ ಹತ್ತಾರು ಅಡಿ ಆಳದ ಹಳ್ಳಗಳೂ ಆಗಿವೆ. ಕೆಲ ಕೆರೆಗಳು ಬಿಆರ್‌ಟಿ ಹುಲಿ ರಕ್ಷಿತ ಪ್ರದೇಶದ ಕಾಡಂಚಿನಲ್ಲೂ ಇವೆ. ಇಲ್ಲಿಗೆ ನೀರನ್ನರಸಿ ಬರುವ ಕಾಡು ಪ್ರಾಣಿಗಳು ಮಣ್ಣು ತೋಡಿರುವ ಆಳವಾದ ಕಂದಕ್ಕೆ ಬೀಳುವ ಅಪಾಯವನ್ನೂ ತಳ್ಳಿ ಹಾಕುವಂತಿಲ್ಲ. ಇದರಿಂದ ಕೆರೆಯಲ್ಲಿನ ಜಲಚರಗಳಿಗೂ ತೊಂದರೆಯಾಗುವ ಅಪಾಯವೂ ಇದೆ. ಇದನ್ನು ಪರಿಗಣಿಸಿ ಸಂಬಂಧಪಟ್ಟವರು ಕ್ರಮ ವಹಿಸಬೇಕಿದೆ.

ಈ ಬಗ್ಗೆ ಆಂದೋಲನದೊಂದಿಗೆ ಮಾತನಾಡಿರುವ ತಾಹಶೀಲ್ದಾರ್ ನಯನ ಅವರು, ಕೆರೆಗಳಲ್ಲಿ ಅನುಮತಿ ಇಲ್ಲದೆ ಅಕ್ರಮವಾಗಿ, ಅವೈಜ್ಞಾನಿಕವಾಗಿ ಮಣ್ಣು ಎತ್ತುತ್ತಿರುವ ವಿಷಯ ನನ್ನ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ಯಾರೂ ಕೂಡ ದೂರು ನೀಡಿಲ್ಲ. ಸಂಬಂಧಪಟ್ಟವರಿಂದ ಈ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು, ಅಕ್ರಮ ಎಸಗಿದವರ ವಿರುದ್ಧ ಕಾನೂನು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ವಿಧಾನಪರಿಷತ್‌ ಚುನಾವಣೆ: ಹರಿಪ್ರಸಾದ್‌ ಸೇರಿ ನಾಲ್ವರಿಗೆ ಕಾಂಗ್ರೆಸ್‌ ಟಿಕೆಟ್‌

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್‌ ನಾಲ್ಕು ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಒಟ್ಟು ಏಳು ಸ್ಥಾನಗಳು ಖಾಲಿ ಇದ್ದು, 4…

8 hours ago

ನೂತನ ಸಿಎಂ ಡಿ.ಕೆ.ಶಿವಕುಮಾರ್‌ಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ

ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಿದ ಡಿ.ಕೆ.ಶಿವಕುಮಾರ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ…

9 hours ago

ಡಿಸಿಎಂ ಆಗಿ ಪರಮೇಶ್ವರ್‌ ಮತ್ತು 12 ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಅವರಿಂದು ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ 13 ಮಂದಿ ಶಾಸಕರು(ಓರ್ವ ಎಂಎಲ್‌ಸಿ…

10 hours ago

ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕಾರ್ಯಕರ್ತರ ಹರ್ಷೋದ್ಘಾರ ಮುಗಿಲು ಮುಟ್ಟಿದ ಸಂಭ್ರಮದ ನಡುವೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರು ರಾಜ್ಯದ 25ನೇ…

11 hours ago

ಸೋನಿಯಾ ಗಾಂಧಿ ನನ್ನ ಮೇಲೆ ಇಟ್ಟಿರುವ ನಂಬಿಕೆ ಉಳಿಸಿಕೊಳ್ಳುವೆ: ಡಿಕೆಶಿ

ಬೆಂಗಳೂರು: ಸೋನಿಯಾ ಗಾಂಧಿ ಅವರು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುತ್ತೇನೆ ಎಂದು ಡಿಕೆಶಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ…

12 hours ago

ದೇವೇಗೌಡರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆಶಿ

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರಿಂದು ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನಿಸಿದ್ದಾರೆ.…

13 hours ago