ಚಾಮರಾಜನಗರ

ಯಳಂದೂರು | ಕೆರೆಗಳಿಂದ ಅಕ್ರಮ ಮಣ್ಣು ಸಾಗಾಟ ; ಅಧಿಕಾರಿಗಳ ಜಾಣಮೌನ

ಯಳಂದೂರು : ತಾಲ್ಲೂಕಿನ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತುಂಬಲಾಗುತ್ತಿದೆ. ಅಕ್ರಮಕ್ಕೆ ಕಡಿವಾಣ ಹಾಕಿಬೇಕಿದ್ದ ಇಲಾಖೆಗಳು ಕಣ್ಮುಚ್ಚಿ ಕುಳಿತಿವೆ. ಮಣ್ಣು ಮಾಫಿಯಾ ತಡೆಗಟ್ಟಬೇಕಿದ್ದ ಭೂ ಮತ್ತು ಗಣಿ ಇಲಾಖೆ, ಕಂದಾಯ ಹಾಗೂ ನೀರಾವರಿ ಇಲಾಖೆಗಳು ಜಾಣ ಮೌನ ವಹಿಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ತಾಲ್ಲೂಕಿನ ಅಂಬಳೆ, ವೈ.ಕೆ.ಮೋಳೆ, ಗುಂಬಳ್ಳಿ, ಯರಗಂಬಳ್ಳಿ, ಕೃಷ್ಣಾಪುರ, ವಡಗೆರೆ, ಗೌಡಹಳ್ಳಿ, ಮಲಾರಪಾಳ್ಯ ಸುತ್ತಮುತ್ತಲಿನ ಕೆರೆಗಳಲ್ಲಿ ಜೆಸಿಬಿ ಯಂತ್ರದ ಮೂಲಕ ನೂರಾರು ಟ್ರಾಕ್ಟರ್‌ಗಳಲ್ಲಿ ಮಣ್ಣನ್ನು ತುಂಬಿಕೊಂಡು ರಾಜಾರೋಷವಾಗಿ ಸಾಗಾಣಿಕೆ ಮಾಡಲಾಗುತ್ತಿದೆ. ಇದಕ್ಕಾಗಿಯೇ ಕೆಲವರು ಇದನ್ನು ದಂಧೆ ಮಾಡಿಕೊಂಡು ಕೆರೆಗಳ ಗರ್ಭವನ್ನು ಅಗೆದು ಲಕ್ಷಾಂತರ ರೂ. ಲಾಭವನ್ನು ಮಾಡಿಕೊಳ್ಳುತ್ತಿದ್ದಾರೆ.

ತಾಲ್ಲೂಕಿನ ಕೃಷ್ಣಾಪುರ, ಯರಗಂಬಳ್ಳಿ, ವಡಗೆರೆ, ಗೌಡಹಳ್ಳಿ ಕೆರೆಗಳಲ್ಲಿ ಸಿಗುವ ಮಣ್ಣು ಗ್ರಾವೆಲ್ ಆಗಿದೆ. ಇದನ್ನು ಕಟ್ಟಡಗಳ ನಿರ್ಮಾಣದ ಅಡಿಪಾಯ ಹಾಗೂ ನೆಲ ಮಹಡಿಗಳಿಗೆ ಭರ್ತಿ ಹಾಕಲು ಬಳಸಲಾಗುತ್ತದೆ. ಪ್ರಸ್ತುತ ಇದಕ್ಕೆ ಹೆಚ್ಚಿನ ಬೇಡಿಕೆ ಇದೆ. ಟ್ರಾಕ್ಟರ್‌ಗೆ 1,300 ರೂ.ನಿಂದ 2,500 ಸಾವಿರ ರೂ.ವರೆಗೆ ಇದನ್ನು ಮಾರಾಟ ಮಾಡಲಾಗುತ್ತದೆ. ಇದನ್ನು ತುಂಬುವ ಉದ್ದೇಶದಿಂದ ಕೆರೆಗಳಲ್ಲಿ ಹತ್ತಾರು ಅಡಿ ಆಳದ ಹಳ್ಳಗಳೂ ಆಗಿವೆ. ಕೆಲ ಕೆರೆಗಳು ಬಿಆರ್‌ಟಿ ಹುಲಿ ರಕ್ಷಿತ ಪ್ರದೇಶದ ಕಾಡಂಚಿನಲ್ಲೂ ಇವೆ. ಇಲ್ಲಿಗೆ ನೀರನ್ನರಸಿ ಬರುವ ಕಾಡು ಪ್ರಾಣಿಗಳು ಮಣ್ಣು ತೋಡಿರುವ ಆಳವಾದ ಕಂದಕ್ಕೆ ಬೀಳುವ ಅಪಾಯವನ್ನೂ ತಳ್ಳಿ ಹಾಕುವಂತಿಲ್ಲ. ಇದರಿಂದ ಕೆರೆಯಲ್ಲಿನ ಜಲಚರಗಳಿಗೂ ತೊಂದರೆಯಾಗುವ ಅಪಾಯವೂ ಇದೆ. ಇದನ್ನು ಪರಿಗಣಿಸಿ ಸಂಬಂಧಪಟ್ಟವರು ಕ್ರಮ ವಹಿಸಬೇಕಿದೆ.

ಈ ಬಗ್ಗೆ ಆಂದೋಲನದೊಂದಿಗೆ ಮಾತನಾಡಿರುವ ತಾಹಶೀಲ್ದಾರ್ ನಯನ ಅವರು, ಕೆರೆಗಳಲ್ಲಿ ಅನುಮತಿ ಇಲ್ಲದೆ ಅಕ್ರಮವಾಗಿ, ಅವೈಜ್ಞಾನಿಕವಾಗಿ ಮಣ್ಣು ಎತ್ತುತ್ತಿರುವ ವಿಷಯ ನನ್ನ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ಯಾರೂ ಕೂಡ ದೂರು ನೀಡಿಲ್ಲ. ಸಂಬಂಧಪಟ್ಟವರಿಂದ ಈ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು, ಅಕ್ರಮ ಎಸಗಿದವರ ವಿರುದ್ಧ ಕಾನೂನು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

9 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

9 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

9 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

9 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

9 hours ago