ಯಳಂದೂರು : ತಾಲ್ಲೂಕಿನ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತುಂಬಲಾಗುತ್ತಿದೆ. ಅಕ್ರಮಕ್ಕೆ ಕಡಿವಾಣ ಹಾಕಿಬೇಕಿದ್ದ ಇಲಾಖೆಗಳು ಕಣ್ಮುಚ್ಚಿ ಕುಳಿತಿವೆ. ಮಣ್ಣು ಮಾಫಿಯಾ ತಡೆಗಟ್ಟಬೇಕಿದ್ದ ಭೂ ಮತ್ತು ಗಣಿ ಇಲಾಖೆ, ಕಂದಾಯ ಹಾಗೂ ನೀರಾವರಿ ಇಲಾಖೆಗಳು ಜಾಣ ಮೌನ ವಹಿಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ತಾಲ್ಲೂಕಿನ ಅಂಬಳೆ, ವೈ.ಕೆ.ಮೋಳೆ, ಗುಂಬಳ್ಳಿ, ಯರಗಂಬಳ್ಳಿ, ಕೃಷ್ಣಾಪುರ, ವಡಗೆರೆ, ಗೌಡಹಳ್ಳಿ, ಮಲಾರಪಾಳ್ಯ ಸುತ್ತಮುತ್ತಲಿನ ಕೆರೆಗಳಲ್ಲಿ ಜೆಸಿಬಿ ಯಂತ್ರದ ಮೂಲಕ ನೂರಾರು ಟ್ರಾಕ್ಟರ್ಗಳಲ್ಲಿ ಮಣ್ಣನ್ನು ತುಂಬಿಕೊಂಡು ರಾಜಾರೋಷವಾಗಿ ಸಾಗಾಣಿಕೆ ಮಾಡಲಾಗುತ್ತಿದೆ. ಇದಕ್ಕಾಗಿಯೇ ಕೆಲವರು ಇದನ್ನು ದಂಧೆ ಮಾಡಿಕೊಂಡು ಕೆರೆಗಳ ಗರ್ಭವನ್ನು ಅಗೆದು ಲಕ್ಷಾಂತರ ರೂ. ಲಾಭವನ್ನು ಮಾಡಿಕೊಳ್ಳುತ್ತಿದ್ದಾರೆ.
ತಾಲ್ಲೂಕಿನ ಕೃಷ್ಣಾಪುರ, ಯರಗಂಬಳ್ಳಿ, ವಡಗೆರೆ, ಗೌಡಹಳ್ಳಿ ಕೆರೆಗಳಲ್ಲಿ ಸಿಗುವ ಮಣ್ಣು ಗ್ರಾವೆಲ್ ಆಗಿದೆ. ಇದನ್ನು ಕಟ್ಟಡಗಳ ನಿರ್ಮಾಣದ ಅಡಿಪಾಯ ಹಾಗೂ ನೆಲ ಮಹಡಿಗಳಿಗೆ ಭರ್ತಿ ಹಾಕಲು ಬಳಸಲಾಗುತ್ತದೆ. ಪ್ರಸ್ತುತ ಇದಕ್ಕೆ ಹೆಚ್ಚಿನ ಬೇಡಿಕೆ ಇದೆ. ಟ್ರಾಕ್ಟರ್ಗೆ 1,300 ರೂ.ನಿಂದ 2,500 ಸಾವಿರ ರೂ.ವರೆಗೆ ಇದನ್ನು ಮಾರಾಟ ಮಾಡಲಾಗುತ್ತದೆ. ಇದನ್ನು ತುಂಬುವ ಉದ್ದೇಶದಿಂದ ಕೆರೆಗಳಲ್ಲಿ ಹತ್ತಾರು ಅಡಿ ಆಳದ ಹಳ್ಳಗಳೂ ಆಗಿವೆ. ಕೆಲ ಕೆರೆಗಳು ಬಿಆರ್ಟಿ ಹುಲಿ ರಕ್ಷಿತ ಪ್ರದೇಶದ ಕಾಡಂಚಿನಲ್ಲೂ ಇವೆ. ಇಲ್ಲಿಗೆ ನೀರನ್ನರಸಿ ಬರುವ ಕಾಡು ಪ್ರಾಣಿಗಳು ಮಣ್ಣು ತೋಡಿರುವ ಆಳವಾದ ಕಂದಕ್ಕೆ ಬೀಳುವ ಅಪಾಯವನ್ನೂ ತಳ್ಳಿ ಹಾಕುವಂತಿಲ್ಲ. ಇದರಿಂದ ಕೆರೆಯಲ್ಲಿನ ಜಲಚರಗಳಿಗೂ ತೊಂದರೆಯಾಗುವ ಅಪಾಯವೂ ಇದೆ. ಇದನ್ನು ಪರಿಗಣಿಸಿ ಸಂಬಂಧಪಟ್ಟವರು ಕ್ರಮ ವಹಿಸಬೇಕಿದೆ.
ಈ ಬಗ್ಗೆ ಆಂದೋಲನದೊಂದಿಗೆ ಮಾತನಾಡಿರುವ ತಾಹಶೀಲ್ದಾರ್ ನಯನ ಅವರು, ಕೆರೆಗಳಲ್ಲಿ ಅನುಮತಿ ಇಲ್ಲದೆ ಅಕ್ರಮವಾಗಿ, ಅವೈಜ್ಞಾನಿಕವಾಗಿ ಮಣ್ಣು ಎತ್ತುತ್ತಿರುವ ವಿಷಯ ನನ್ನ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ಯಾರೂ ಕೂಡ ದೂರು ನೀಡಿಲ್ಲ. ಸಂಬಂಧಪಟ್ಟವರಿಂದ ಈ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು, ಅಕ್ರಮ ಎಸಗಿದವರ ವಿರುದ್ಧ ಕಾನೂನು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಮಂಡ್ಯ: ಬೇಸಿಗೆ ರಜೆ ಹಾಗೂ ವೀಕೆಂಡ್ ಹಿನ್ನೆಲೆಯಲ್ಲಿ ಮಂಡ್ಯ ಭಾಗದ ಪ್ರವಾಸಿ ತಾಣಗಳಾದ ಬಲಮುರಿ ಮತ್ತು ಎಡಮುರಿ ತಾಣಗಳಿಗೆ ನಿಷೇಧ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮೇವು ನೀರು ಅರಸಿ ಜಮೀನಿನತ್ತ ಬಂದಿದ್ದ ಜಿಂಕೆಯೊಂದರ ಮೇಲೆ ಬೀದಿ…
ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆಯಲ್ಲಿ ೩೫ರಿಂದ ೪೦ ಡಿಗ್ರಿ ಉಷ್ಣಾಂಶ, ಬಿಸಿಗಾಳಿಗೆ ಹೈರಾಣಾದ ಜನರು ಗುಂಡ್ಲುಪೇಟೆ: ಬೇಸಿಗೆಯ ಬಿಸಿಲಿನ ತಾಪ ದಿನೇದಿನೇ…
ಮಧುಕರ ಮಳವಳ್ಳಿ (ಈ ಲೇಖನಕ್ಕೆ ಕೃತಕ ಬುದ್ಧಿಮತ್ತೆಯ ಚಿತ್ರ ಬಳಸಲಾಗಿದೆ) ಹಬ್ಬಕ್ಕೆ ಯಾರಿಗೆ ತಾನೆ ಹೊಸ ಬಟ್ಟೆ ಇಷ್ಟ ಇಲ್ಲ…
ಭಾರತಿ ಬಿ.ವಿ. ಅವನೆದುರು ಮಾನ ತೆಗೆದ ಸೈಕಲ್ಲಿನ ಸಹವಾಸ ನನಗೆ ಮತ್ತೆ ಬೇಕೆನ್ನಿಸಲಿಲ್ಲ ನಾವೆಲ್ಲ ‘ನಟರಾಜ ಸರ್ವೀಸ್’ನಲ್ಲೇ ಬದುಕು ಕಳೆದವರು.…