ಯಳಂದೂರು: ಪ್ರೀತಿಸಿ ಮದುವೆಯಾಗಿದ್ದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ತಾಲೂಕಿನ ಯರಿಯೂರು ಗ್ರಾಮದಲ್ಲಿ ನಡೆದಿದೆ.
ಯರಿಯೂರು ಗ್ರಾಮದ ಪುಟ್ಟಸ್ವಾಮಿ ಹಾಗೂ ವಿನಾಯಕ ಎಂಬ ಎರಡು ಕುಟುಂಬದವರೇ ಸಾಮಾಜಿಕ ಬಹಿಷ್ಕಾರಕ್ಕೆ ಒಳಗಾದವರು.
ಗ್ರಾಮದ ನಿವಾಸಿ ರವಿಕುಮಾರ್ ಎಂಬುವವರ ಸಹೋದರ 10 ವರ್ಷದಿಂದ ಓಡಿ ಹೋಗಿ ಮದುವೆ ಆಗಿದ್ದಾರೆ. ಇದಕ್ಕೆ ಗ್ರಾಮದ ಮುಖಂಡರು ಸುಮಾರು 50 ಸಾವಿರದಿಂದ 1 ಲಕ್ಷದವರೆಗೂ ದಂಡ ನೀಡುವಂತೆ ಒತ್ತಾಯಿಸಿದ್ದಾರೆ. ಕೊಡಲು ನಿರಾಕರಿಸಿದ್ದಕ್ಕಾಗಿ ಬಹಿಷ್ಕಾರ ಹಾಕಲಾಗಿದೆ ಎಂದು ದೂರಿದ್ದಾರೆ.
ಸುಮಾರು 3-4 ವರ್ಷಗಳಿಂದಲೂ ಬಹಿಷ್ಕಾರಕ್ಕೆ ಒಳಗಾಗಿ ನರಕಯಾತನೆ ಅನುಭವಿಸುತ್ತಿದ್ದು, ಬಹಿಷ್ಕಾರ ತೆಗೆದು ಹಾಕುವಂತೆ ಎಸ್ಪಿ ಡಾ.ಬಿ.ಟಿ ಕವಿತಾ ಅವರುಗೆ ದೂರು ನೀಡಲಾಗಿದೆ ಎಂದಿದ್ದಾರೆ.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…