ಚಾಮರಾಜನಗರ

ವೀಕೆಂಡ್‌ ಖುಷಿಯಲ್ಲಿದ್ದವರಿಗೆ ಕಾವೇರಿ ನದಿಯಲ್ಲಿ ಯಮ ದರ್ಶನ: ಏನಾಯ್ತು ಗೊತ್ತಾ.?

ಚಾಮರಾಜನಗರ: ವೀಕೆಂಡ್‌ ಖುಷಿಯಲ್ಲಿದ್ದ ಪ್ರವಾಸಿಗರು ಅರ್ಧ ತಾಸು ಯಮ ದರ್ಶನ ಕಂಡು ಬಳಿಕ ಬದುಕಿದೆ ಬಡಜೀವ ಎಂಬಂತೆ ಪಾರಾಗಿದ್ದಾರೆ.

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಶಿವನಸಮುದ್ರದ ಕಾವೇರಿ ನದಿಯಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನ ಐವರು ಭರಚುಕ್ಕಿ ಜಲಪಾತಕ್ಕೆ ಬಂದಿದ್ದರು. ಅದಾದ ಬಳಿಕ ಶಿವನಸಮುದ್ರ ಮಧ್ಯರಂಗನಾಥ ದೇವಸ್ಥಾನದ ಹಿಂಭಾಗದ ವಿದ್ಯುತ್‌ ಉತ್ಪಾದನೆ ಕೇಂದ್ರಕ್ಕೆ ನೀರು ಒದಗಿಸುವ ಸ್ಥಳದಲ್ಲಿ ಕುಳಿತಿದ್ದಾಗ ಯಮ ದರ್ಶನವನ್ನೇ ಕಂಡು ಪಾರಾಗಿ ಬಂದಿದ್ದಾರೆ.

ನೀರಿನಲ್ಲಿ ಆಟವಾಡಲು ಕುಟುಂಬ ಸಮೇತ ಜೀರೋ ಪಾಯಿಂಟ್‌ನ ನೀರು ಹರಿಯುವ ಬಂಡೆಗಳ ಮೇಲೆ ಹೋಗಿದ್ದಾರೆ. ವಿದ್ಯುತ್‌ ಉತ್ಪಾದನಾ ಕೇಂದ್ರದಿಂದ ಶೇಖರಿಸಿದ್ದ ನೀರನ್ನು ದಿಢೀರನೇ ನದಿಗೆ ಬಿಟ್ಟ ಪರಿಣಾಮ ದಡಕ್ಕೆ ಬರಲಾಗದೇ ಬಂಡೆಗಳ ನಡುವೆ ಸಿಲುಕಿದ್ದಾರೆ. ಅಪಾಯದ ಮುನ್ಸೂಚನೆ ಎಂದು ತಿಳಿದು ತೆಪ್ಪ ನಡೆಸುವವರು ನಡುನೀರಿನಲ್ಲಿ ಇದ್ದವರನ್ನು ದಡಕ್ಕೆ ಕರೆತಂದು ಪಾರು ಮಾಡಿದ್ದಾರೆ.

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.25 ಸೋಮವಾರ

2 hours ago

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

19 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

22 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

23 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

24 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

1 day ago