ಚಾಮರಾಜನಗರ

ವೀಕೆಂಡ್‌ ಖುಷಿಯಲ್ಲಿದ್ದವರಿಗೆ ಕಾವೇರಿ ನದಿಯಲ್ಲಿ ಯಮ ದರ್ಶನ: ಏನಾಯ್ತು ಗೊತ್ತಾ.?

ಚಾಮರಾಜನಗರ: ವೀಕೆಂಡ್‌ ಖುಷಿಯಲ್ಲಿದ್ದ ಪ್ರವಾಸಿಗರು ಅರ್ಧ ತಾಸು ಯಮ ದರ್ಶನ ಕಂಡು ಬಳಿಕ ಬದುಕಿದೆ ಬಡಜೀವ ಎಂಬಂತೆ ಪಾರಾಗಿದ್ದಾರೆ.

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಶಿವನಸಮುದ್ರದ ಕಾವೇರಿ ನದಿಯಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನ ಐವರು ಭರಚುಕ್ಕಿ ಜಲಪಾತಕ್ಕೆ ಬಂದಿದ್ದರು. ಅದಾದ ಬಳಿಕ ಶಿವನಸಮುದ್ರ ಮಧ್ಯರಂಗನಾಥ ದೇವಸ್ಥಾನದ ಹಿಂಭಾಗದ ವಿದ್ಯುತ್‌ ಉತ್ಪಾದನೆ ಕೇಂದ್ರಕ್ಕೆ ನೀರು ಒದಗಿಸುವ ಸ್ಥಳದಲ್ಲಿ ಕುಳಿತಿದ್ದಾಗ ಯಮ ದರ್ಶನವನ್ನೇ ಕಂಡು ಪಾರಾಗಿ ಬಂದಿದ್ದಾರೆ.

ನೀರಿನಲ್ಲಿ ಆಟವಾಡಲು ಕುಟುಂಬ ಸಮೇತ ಜೀರೋ ಪಾಯಿಂಟ್‌ನ ನೀರು ಹರಿಯುವ ಬಂಡೆಗಳ ಮೇಲೆ ಹೋಗಿದ್ದಾರೆ. ವಿದ್ಯುತ್‌ ಉತ್ಪಾದನಾ ಕೇಂದ್ರದಿಂದ ಶೇಖರಿಸಿದ್ದ ನೀರನ್ನು ದಿಢೀರನೇ ನದಿಗೆ ಬಿಟ್ಟ ಪರಿಣಾಮ ದಡಕ್ಕೆ ಬರಲಾಗದೇ ಬಂಡೆಗಳ ನಡುವೆ ಸಿಲುಕಿದ್ದಾರೆ. ಅಪಾಯದ ಮುನ್ಸೂಚನೆ ಎಂದು ತಿಳಿದು ತೆಪ್ಪ ನಡೆಸುವವರು ನಡುನೀರಿನಲ್ಲಿ ಇದ್ದವರನ್ನು ದಡಕ್ಕೆ ಕರೆತಂದು ಪಾರು ಮಾಡಿದ್ದಾರೆ.

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

5 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

5 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

5 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

5 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

5 hours ago