ಚಾಮರಾಜನಗರ: ವೀಕೆಂಡ್ ಖುಷಿಯಲ್ಲಿದ್ದ ಪ್ರವಾಸಿಗರು ಅರ್ಧ ತಾಸು ಯಮ ದರ್ಶನ ಕಂಡು ಬಳಿಕ ಬದುಕಿದೆ ಬಡಜೀವ ಎಂಬಂತೆ ಪಾರಾಗಿದ್ದಾರೆ.
ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಶಿವನಸಮುದ್ರದ ಕಾವೇರಿ ನದಿಯಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನ ಐವರು ಭರಚುಕ್ಕಿ ಜಲಪಾತಕ್ಕೆ ಬಂದಿದ್ದರು. ಅದಾದ ಬಳಿಕ ಶಿವನಸಮುದ್ರ ಮಧ್ಯರಂಗನಾಥ ದೇವಸ್ಥಾನದ ಹಿಂಭಾಗದ ವಿದ್ಯುತ್ ಉತ್ಪಾದನೆ ಕೇಂದ್ರಕ್ಕೆ ನೀರು ಒದಗಿಸುವ ಸ್ಥಳದಲ್ಲಿ ಕುಳಿತಿದ್ದಾಗ ಯಮ ದರ್ಶನವನ್ನೇ ಕಂಡು ಪಾರಾಗಿ ಬಂದಿದ್ದಾರೆ.
ನೀರಿನಲ್ಲಿ ಆಟವಾಡಲು ಕುಟುಂಬ ಸಮೇತ ಜೀರೋ ಪಾಯಿಂಟ್ನ ನೀರು ಹರಿಯುವ ಬಂಡೆಗಳ ಮೇಲೆ ಹೋಗಿದ್ದಾರೆ. ವಿದ್ಯುತ್ ಉತ್ಪಾದನಾ ಕೇಂದ್ರದಿಂದ ಶೇಖರಿಸಿದ್ದ ನೀರನ್ನು ದಿಢೀರನೇ ನದಿಗೆ ಬಿಟ್ಟ ಪರಿಣಾಮ ದಡಕ್ಕೆ ಬರಲಾಗದೇ ಬಂಡೆಗಳ ನಡುವೆ ಸಿಲುಕಿದ್ದಾರೆ. ಅಪಾಯದ ಮುನ್ಸೂಚನೆ ಎಂದು ತಿಳಿದು ತೆಪ್ಪ ನಡೆಸುವವರು ನಡುನೀರಿನಲ್ಲಿ ಇದ್ದವರನ್ನು ದಡಕ್ಕೆ ಕರೆತಂದು ಪಾರು ಮಾಡಿದ್ದಾರೆ.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…