ಚಾಮರಾಜನಗರ: ಯೋಗಪಟುವೊಬ್ಬರು ಯೋಗ ಮಾಡುತ್ತಲೇ ನೀರಿನಲ್ಲಿ ಪ್ರಾಣ ಬಿಟ್ಟಿರುವ ಘಟನೆ ಚಾಮರಾಜನಗರದ ಕೊಳ್ಳೇಗಾಲದ ದಾಸನಪುರ ಬಳಿ ಹರಿಯುವ ಕಾವೇರಿ ನದಿಯಲ್ಲಿ ನಡೆದಿದೆ.
ಕೊಳ್ಳೇಗಾಲ ಪಟ್ಟಣದಲ್ಲಿರುವ ಲಕ್ಷ್ಮೀನಾರಾಯಣ ದೇವಸ್ಥಾನದ ಬಡಾವಣೆಯ ನಾಗರಾಜು ಎಂಬುವವರೇ ಮೃತಪಟ್ಟ ದುರ್ದೈವಿಯಾಗಿದ್ದಾರೆ.
ನಾಗರಾಜು ಅವರು ತೀರ್ಥ ಸ್ನಾನ ಮಾಡಲೆಂದು ನದಿಗೆ ಇಳಿದಿದ್ದರು. ನದಿ ನೀರಿನಲ್ಲಿ ತೇಲುತ್ತಾ ಯೋಗ ಮಾಡುತ್ತಿದ್ದರು. ಎಷ್ಟು ಹೊತ್ತಾದರೂ ತೇಲುವ ಸ್ಥಿತಿಯಲ್ಲಿಯೇ ಇದ್ದರು. ಈ ವೇಳೆ ಜೊತೆಗೆ ಬಂದಿದ್ದವರು ಅನುಮಾನಗೊಂಡು ಹತ್ತಿರ ಹೋಗಿ ನೋಡಿದಾಗ ಅವರು ಮೃತಪಟ್ಟಿರುವುದು ಗೊತ್ತಾಗಿದೆ.
ಘಟನಾ ಸ್ಥಳಕ್ಕಾಗಮಿಸಿದ ಸ್ಥಳೀಯರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ ರವಾನಿಸಿದ್ದು, ವರದಿ ಬಂದ ಬಳಿಕವೇ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್ಆರ್ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…