ಚಾಮರಾಜನಗರ: ಯೋಗಪಟುವೊಬ್ಬರು ಯೋಗ ಮಾಡುತ್ತಲೇ ನೀರಿನಲ್ಲಿ ಪ್ರಾಣ ಬಿಟ್ಟಿರುವ ಘಟನೆ ಚಾಮರಾಜನಗರದ ಕೊಳ್ಳೇಗಾಲದ ದಾಸನಪುರ ಬಳಿ ಹರಿಯುವ ಕಾವೇರಿ ನದಿಯಲ್ಲಿ ನಡೆದಿದೆ.
ಕೊಳ್ಳೇಗಾಲ ಪಟ್ಟಣದಲ್ಲಿರುವ ಲಕ್ಷ್ಮೀನಾರಾಯಣ ದೇವಸ್ಥಾನದ ಬಡಾವಣೆಯ ನಾಗರಾಜು ಎಂಬುವವರೇ ಮೃತಪಟ್ಟ ದುರ್ದೈವಿಯಾಗಿದ್ದಾರೆ.
ನಾಗರಾಜು ಅವರು ತೀರ್ಥ ಸ್ನಾನ ಮಾಡಲೆಂದು ನದಿಗೆ ಇಳಿದಿದ್ದರು. ನದಿ ನೀರಿನಲ್ಲಿ ತೇಲುತ್ತಾ ಯೋಗ ಮಾಡುತ್ತಿದ್ದರು. ಎಷ್ಟು ಹೊತ್ತಾದರೂ ತೇಲುವ ಸ್ಥಿತಿಯಲ್ಲಿಯೇ ಇದ್ದರು. ಈ ವೇಳೆ ಜೊತೆಗೆ ಬಂದಿದ್ದವರು ಅನುಮಾನಗೊಂಡು ಹತ್ತಿರ ಹೋಗಿ ನೋಡಿದಾಗ ಅವರು ಮೃತಪಟ್ಟಿರುವುದು ಗೊತ್ತಾಗಿದೆ.
ಘಟನಾ ಸ್ಥಳಕ್ಕಾಗಮಿಸಿದ ಸ್ಥಳೀಯರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ ರವಾನಿಸಿದ್ದು, ವರದಿ ಬಂದ ಬಳಿಕವೇ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…