ಚಾಮರಾಜನಗರ

ಉಗ್ರರ ದಾಳಿ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ; ನರೇಂದ್ರಮೋದಿ, ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಚಾಮರಾಜನಗರ: ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೇಂದ್ರ ಸಿ ಅವರ ನೇತೃತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿತರು. ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಹೊತ್ತು ರಸ್ತೆತಡೆ ನಡೆಸಿ, ಉಗ್ರರ ವಿರುದ್ಧ, ಬಿಜೆಪಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಅಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸಿ.ಯೋಗೇಂದ್ರ ಮಾತನಾಡಿ, ಜಮ್ಮು ಮತ್ತು ಕಾಶ್ಮೀರದ ಪಹಲ್ಯಾಮ್‌ನಲ್ಲಿ ಪ್ರವಾಸಿಗರ ಗುಂಪನ್ನು ಗುರುಯಾಗಿಸಿಕೊಂಡು ನಡೆದ ಭೀಕರ ಭಯೋತ್ಪಾದಕ ದಾಳಿಯಿಂದ ಸಾವಿನ ಸಂಖ್ಯೆ 25 ದಾಟಿದ್ದು, ಇದು ಇತ್ತೀಚಿನ ದಿನಗಳಲ್ಲಿ ನಡೆದ ಅತ್ಯಂತ ಮಾರಕ ದಾಳಿಗಳಲ್ಲಿ ಒಂದಾಗಿದೆ. ಈ ಕ್ರೂರ ಭಯೋತ್ಪದನಾ ಕೃತ್ಯವನ್ನು ಖಂಡಿಸಿ ಮೋದಿ ಸರ್ಕಾರ ಮತ್ತು ಗುಪ್ತಚರ ಸಂಸ್ಥೆಗಳ ವೈಫಲ್ಯವನ್ನು ಎತ್ತಿ ತೋರಿಸುತ್ತದೆ. ಅಮಾಯಕರ ನ್ಯಾಯಕ್ಕಾಗಿ ಒತ್ತಾಯಿಸಿ ಯುವ ಕಾಂಗ್ರೆಸ್ ಹೋರಾಟ ನಡೆಸುತ್ತಿದೆ ಎಂದರು.

ದೇಶದ ಪ್ರವಾಸಿಗರಿಗೆ ಭದ್ರತೆ ಕೊಡುವಲ್ಲಿ ವೈಫಲ್ಯವಾಗಿರುವ ದೇಶವ ನರೇಂದ್ರಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಖಾತೆ ಸಚಿವರು ತಮ್ಮ ಸ್ಥಾನಗಳಿಗೆ ನೈತಿಕತೆ ಹೊಣಿ ಹೊತ್ತು ರಾಜೀನಾಮೆ ನೀಡಬೇಕು ಎಂದು ಯೋಗೇಂದ್ರ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಸೈಯದ್ ಮುಸಾಯಿಬ್,  ಇಸ್ಮಾಯಿಲ್ , ಚಂದನ್, ಎನ್ ಎಸ್ ಯು ಐ ಜಿಲ್ಲಾಧ್ಯಕ್ಷ ಮೋಹನ್ ನಗು, ಮುಖಂಡ ನಾಗೇಂದ್ರನಾಯಕ,ಸೈಯದ್ ತೌಸೀಫ್, ಮುತ್ತುರಾಮ್, ಶಶಾಂಕ್, ಪ್ರದೀಪ್, ದರ್ಶನ,  ಜಿಲ್ಲಾ ಪ್ರಧಾನ‌ ಕಾರ್ಯದರ್ಶಿ ಅಪ್ಪು, ಆನಂತ್, ರಾಹುಲ್, ಕಾರ್ತಿಕ್, ನವೀನ್ ಇತರರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

6 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

7 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

8 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

9 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

12 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

13 hours ago