ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಯ ಸಂಭ್ರಮ ಮನೆಮಾಡಿದೆ.
ಈ ಹಿನ್ನೆಲೆಯಲ್ಲಿ ಬೆಟ್ಟಕ್ಕೆ ಲಕ್ಷಾಂತರ ಮಂದಿ ಭೇಟಿ ನೀಡುತ್ತಿದ್ದು, ಮಾದಪ್ಪನ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.
ಇನ್ನು ಮಹದೇಶ್ವರ ಬೆಟ್ಟಕ್ಕೆ ಯುವಕರ ದಂಡೇ ಹರಿದು ಬರುತ್ತಿದ್ದು, ಇದಕ್ಕೆ ಪ್ರಮುಖ ಕಾರಣ ವಧುವಿನ ಹುಡುಕಾಟ ಎನ್ನಲಾಗುತ್ತಿದೆ.
ಕೊಳ್ಳೇಗಾಲ ತಾಲ್ಲೂಕಿನ ಹೊಸಮಾಲಂಗಿ ಗ್ರಾಮದ ಯುವಕರು ವಧು ಸಿಗಲೆಂದು ಹರಕೆ ಕಟ್ಟಿಕೊಂಡು ಬೆಟ್ಟಕ್ಕೆ ಬರಿಗಾಲು ಪಾದಯಾತ್ರೆ ಆರಂಭ ಮಾಡಿದ್ದಾರೆ.
ಗ್ರಾಮದಲ್ಲಿ 62ಕ್ಕೂ ಹೆಚ್ಚು ಯುವಕರಿದ್ದು, ಯಾರಿಗೂ ಕೂಡ ಮದುವೆಯಾಗಿಲ್ಲ. ಎಷ್ಟು ಹುಡುಕಿದರೂ ವಧು ಮಾತ್ರ ಸಿಗುತ್ತಿಲ್ಲ. ಹೀಗಾಗಿ ಯುವಕರು ಬರಿಗಾಲು ಪಾದಯಾತ್ರೆ ಆರಂಭಿಸಿದ್ದು, ಮಾದಪ್ಪ ಕರುಣೆ ತೋರಿಸಿ ಮದುವೆ ಮಾಡಿಸಲೆಂದು ಬೇಡಿಕೊಳ್ಳುತ್ತಿದ್ದಾರೆ.
ಇನ್ನು ಈ ಯುವಕರು ವರ್ಷ ವರ್ಷವೂ ಪಾದಯಾತ್ರೆ ನಡೆಸುತ್ತಿದ್ದು, ಮುಂದೊಂದು ದಿನ ಮಹದೇಶ್ವರ ಸ್ವಾಮಿ ನಮ್ಮೆಲ್ಲರ ಕೈಹಿಡಿಯುತ್ತಾನೆ ಎಂಬ ನಂಬಿಕೆ ಅವರಲ್ಲಿದೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…