ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿತು. ಆ ಮೂಲಕ ಯುಗಾದಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು.
ಸಾಲೂರು ಬೃಹನ್ಮಠದ ಪೀಠಾಧಿಪತಿಗಳಾದ ಡಾ. ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಜಿ ನೇತೃತ್ವದಲ್ಲಿ ದೇಗುಲದಲ್ಲಿ ಬೆಳಗಿನ ಜಾವ 4ರಿಂದ 5ರವರೆಗೆ ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ.ಶ್ರೀಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಸಮ್ಮುಖದಲ್ಲಿ ಏಕವಾರು ರುದ್ರಾಭಿಷೇಕ, ಬಿಲ್ವಾರ್ಚನೆ, ಪಂಚಾಮೃತ ಅಭಿಷೇಕ ನೆರವೇರಿಸಿದ ಬಳಿಕ ಮಹಾಮಂಗಳಾರತಿ ಬೆಳಗಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಬಳಿಕ ಬೇಡಗಂಪಣ ಅರ್ಚಕರು ಮೊದಲು ಬ್ರಹ್ಮ ದಾರದ ಪೂಜೆ ನೆರವೇರಿಸಿ ತೇರಿನ ಸುತ್ತ ಪ್ರದಕ್ಷಿಣೆ ಹಾಕಿ ಅರಿಶಿಣ ದಾರವನ್ನು ಕಟ್ಟಲಾಯಿತು. ಸಂಪ್ರದಾಯದಂತೆ ತಳಿಗೆ ಮನೆಯ ಪೂಜೆ ನೆರವೇರಿಸಿ ಲಾಯಿತು. ದೇವರ ಮೂರ್ತಿಯನ್ನು ಬಿಳೆಕುದುರೆ ವಾಹನ ದಲ್ಲಿ ಕೂರಿಸಿ ಛತ್ರಿ, ಚಾಮರ ಹಾಗೂ ಮಂಗಳವಾದ್ಯ ದೊಂದಿಗೆ ದೇಗುಲ ಹಾಗೂ ತೇರಿನ ಸುತ್ತಲು 3 ಬಾರಿ ಪ್ರದಕ್ಷಿಣೆ ಹಾಕಲಾಯಿತು.
ಸಂಪ್ರದಾಯದಂತೆ ಮಹಾರಥೋತ್ಸವಕ್ಕೂ ಮುನ್ನಾ ಸಾಲೂರು ಶ್ರೀಗಳ ಪಾದಪೂಜೆಯನ್ನು ಬೇಡಗಂಪಣ ಅರ್ಚಕರು ನೇರವೇರಿಸಿದರು. ಬೇಡಗಂಪಣ ಸಮುದಾಯದ 108 ಮಕ್ಕಳು ಬೆಲ್ಲದಾರತಿಯನ್ನು ಮಹಾರಥೋತ್ಸವಕ್ಕೆ ಸಮರ್ಪಿಸಿದರು.
ಮಹಾರಥೋತ್ಸವದ ನಂತರ ಸಾಲೂರು ಬೃಹನ್ಮಠದ ಶ್ರೀಗಳ ಗುರು ಬ್ರಹ್ಮೋತ್ಸವ ಜರುಗಿತು
ಗುರು ಬ್ರಹ್ಮೋತ್ಸವದ ನಂತರ ಅನ್ನ ಬ್ರಹ್ಮೋತ್ಸವವು ನಡೆಯಿತು. ಎಲ್ಲಾ ಧಾರ್ಮಿಕ ಪೂಜಾ ಕೈಂಕರ್ಯಗಳು ಸಂಪನ್ನಗೊಂಡ ನಂತರ ಸಾಲೂರು ಬೃಹನ್ಮಠದ ಪೀಠಾಧಿಪತಿಗಳಾದ ಡಾ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳವರು ಭಕ್ತರಿಗೆ ಬೇವು ಬೆಲ್ಲ ವಿತರಿಸಿದರು.
ಪ್ರಾಧಿಕಾರದ ಕಾರ್ಯದರ್ಶಿಗಳಾದ ಎಈ ರಘು ಮತ್ತು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಶಶಿಧರ್ ಮತ್ತು ಕೊಳ್ಳೇಗಾಲ ಉಪ ವಿಭಾಗದ ಉಪಾಧಿಕ್ಷಕರಾದ ಧರ್ಮೇಂದ್ರ ಹಾಗೂ ಬೇಡಗಂಪಣ ಸಮುದಾಯದ ಅರ್ಚಕರು ಮುಖಂಡರು ಶ್ರೀ ಕ್ಷೇತ್ರದ ಸದ್ಭಕ್ತರ ಸಮಕ್ಷಮದಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು.
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…
ಬೆಂಗಳೂರು: ಆನ್ಲೈನ್ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಿಶ್ರ…
ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…