ಚಾಮರಾಜನಗರ

ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆ ಸಂಭ್ರಮ

ಹನೂರು: ಪವಾಡ ಪುರುಷ ನೆಲೆಸಿರುವ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಯುಗಾದಿ ಜಾತ್ರೆಯ ಸಡಗರ ಮನೆಮಾಡಿದೆ.

ಇಂದಿನಿಂದ ಮೂರು ದಿನಗಳ ಕಾಲ ಬೆಟ್ಟದಲ್ಲಿ ಜಾತ್ರೆಯ ವಿಜೃಂಭಣೆಯಿಂದ ನಡೆಯಲಿದ್ದು, ಬೆಟ್ಟಕ್ಕೆ ದ್ವಿಚಕ್ರ ವಾಹನ ಹಾಗೂ ಆಟೋರಿಕ್ಷಾ, ಗೂಡ್ಸ್‌ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದೆ.

ಈ ಕುರಿತು ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಆದೇಶ ಹೊರಡಿಸಿದ್ದು, ಹನೂರು ತಾಲ್ಲೂಕಿನ ಕೌದಳ್ಳಿ ಬಳಿ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿದೆ.

ಇಂದು ಅಮಾವಾಸ್ಯೆ ಪೂಜೆಯ ಹಿನ್ನೆಲೆಯಲ್ಲಿ ಬೆಟ್ಟಕ್ಕೆ ಸಹಸ್ರಾರು ಜನರು ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿದೆ.

ಇನ್ನು ನಾಳೆ ಬೆಟ್ಟಕ್ಕೆ ಯುಗಾದಿ ರಥೋತ್ಸವ ನಡೆಯಲಿದ್ದು, ರಥೋತ್ಸವಕ್ಕೆ ರಾಜ್ಯ ಮಾತ್ರವಲ್ಲದೇ ನೆರೆ ರಾಜ್ಯಗಳಿಂದಲೂ ಲಕ್ಷಾಂತರ ಜನರು ಸೇರುವ ನಿರೀಕ್ಷೆಯಿದೆ.

ಬೆಟ್ಟಕ್ಕೆ ಬರುವ ಸಾರ್ವಜನಿಕರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿದ್ದು, ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಜಲಪುರಿ ಬಡಾವಣೆ ರಸ್ತೆ ದುರಸ್ತಿ ಮಾಡಿ

ಮೈಸೂರಿನ ಜಲಪುರಿ ಬಡಾವಣೆಯ  ಪೊಲೀಸ್ ಆಸ್ಪತ್ರೆ ಮುಂಭಾಗದ  ರಸ್ತೆ ತೀರಾ ಹದಗೆಟ್ಟಿದೆ.  ಕಾಳಿಕಾಂಬ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ಕೆಲವು…

53 mins ago

ಓದುಗರ ಪತ್ರ: ಐಪಿಎಲ್‌ನಲ್ಲಿ ಭಾರತೀಯ ಆಟಗಾರರೇ ಆಡಲಿ

೨೦೦೮ರಲ್ಲಿ ಭಾರತದಲ್ಲಿ ಶುರುವಾದ ‘ಇಂಡಿಯನ್ ಪ್ರೀಮಿಯರ್ ಲೀಗ್’  (ಐಪಿಎಲ್) ಕ್ರಿಕೆಟ್ ಆಟವು ಇಡೀ ದೇಶದ ಗಮನ ಸೆಳೆದಿದೆ.  ಐಪಿಎಲ್ ತಂಡಗಳಲ್ಲಿ …

56 mins ago

ಓದುಗರ ಪತ್ರ: ಮೆಟ್ರೋ ಪ್ರಯಾಣ ದರ ಏರಿಕೆ ಸಲ್ಲದು

ಬೆಂಗಳೂರಿನ ಜೀವನಾಡಿಯಾಗಿರುವ ಮೆಟ್ರೋ ರೈಲು ಪ್ರಯಾಣ ದರವನ್ನು ಹತ್ತು ತಿಂಗಳ ಅಲ್ಪಾವಽಯಲ್ಲಿ ಎರಡನೇ ಬಾರಿಗೆ ಏರಿಸಲು ಮುಂದಾಗಿರುವುದು ಅತ್ಯಂತ ಖಂಡನೀಯ. …

58 mins ago

ಓದುಗರ ಪತ್ರ: ರಾಮಕೃಷ್ಣನಗರದ ಮುಖ್ಯ ರಸ್ತೆಗೆ ಡಾಂಬರ್ ಹಾಕಿ

ಮೈಸೂರಿನ ರಾಮಕೃಷ್ಣ ನಗರದ ಒಳಚರಂಡಿಗೆ ಹೊಸದಾಗಿ  ಪೈಪ್‌ಗಳನ್ನು  ಅಳವಡಿಸಲು ರಸ್ತೆಯನ್ನು  ಅಗೆಯಲಾಗಿತ್ತು. ಪೈಪ್‌ಗಳನ್ನು ಅಳವಡಿಸಿ ತಿಂಗಳುಗಳೇ ಕಳೆದರೂ ರಸ್ತೆಗೆ ಡಾಂಬರ್…

1 hour ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸಂಸತ್ತಿನೊಳಗೆ ಪ್ರಧಾನಿಗೆ ‘ಬೆದರಿಕೆಯ ಗುಮ್ಮ

ಕರ್ನಾಟಕ ಮತ್ತು ತಮಿಳುನಾಡಿನ ರಾಜ್ಯಪಾಲರು ವಿಧಾನ ಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಸರ್ಕಾರದ ಗೊತ್ತು ಗುರಿಯ ಭಾಷಣವನ್ನು ಪೂರ್ಣವಾಗಿ ಓದದೆ…

1 hour ago

ಸಾವಿರಾರು ಸೈನಿಕರ ಜೀವನ್ಮರಣದ ಪ್ರಶ್ನೆಯಾಗಿತ್ತು

ಕೈಲಾಶ್ ಶ್ರೇಣಿಯ ರೇಚಿನ್ ಲಾ ಪಾಸ್‌ನತ್ತ ಮುನ್ನುಗ್ಗುತ್ತಿರುವ ಚೀನಾದ ಟ್ಯಾಂಕ್‌ಗಳನ್ನು ತಡೆಯಲು ಒಂದೇ ಒಂದು ಗುಂಡು ಹಾರಿಸಿದರೂ ಆ ದೇಶದೊಂದಿಗೆ…

4 hours ago