ಚಾಮರಾಜನಗರ: ಇಲ್ಲಿನ ಶ್ರೀ ವಿದ್ಯಾಗಣಪತಿ ಮಂಡಳಿ ವತಿಯಿಂದ ಗುರುನಂಜನಶೆಟ್ಟರ ಛತ್ರದ ಮುಂಭಾಗ ಪೂಜಿಸಲಾಗಿರುವ ಧರ್ಮರಕ್ಷಣಾ ಗಣಪತಿಯ ವಿಸರ್ಜನಾ ಮಹೋತ್ಸವ ನಾನಾ ಕಲಾತಂಡಗಳ ಅದ್ದೂರಿ ಮೆರವಣಿಗೆಯೊಂದಿಗೆ ಶನಿವಾರ ನಡೆಯಲಿದೆ.
ಇದು ೬೦ನೇ ವರ್ಷದ ಗಣೇಶ ವಿಸರ್ಜನೆ. ಗೌರಿಗಣೇಶ ಹಬ್ಬದಂದು ಪ್ರತಿಷ್ಠಾಪಿಸಲಾಗಿತ್ತು. ವಿಸರ್ಜನಾ ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಬೆಳಿಗ್ಗೆ ೧೦.೩೦ಕ್ಕೆ ಚಾಲನೆ ನೀಡಲಿದ್ದಾರೆ. ನಂತರ ಕರ್ನಾಟಕ, ಕೇರಳದ ಹೆಸರಾಂತ ಕಲಾತಂಡಗಳೊoದಿಗೆ ಮೆರವಣಿಗೆ ಮುಂದಡಿ ಇಡಲಿದೆ.
ಹಲವು ಬೀದಿಗಳಲ್ಲಿ ಸಾಗಿ ಅಂತಿಮವಾಗಿ ತಡರಾತ್ರಿ ದೊಡ್ಡ ಅರಸನ ಕೊಳದಲ್ಲಿ ಗಣಪತಿ ವಿಸರ್ಜಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಕೊಳದ ಸುತ್ತಲೂ ವೈಭವವಾಗಿ ದೀಪಾಲಂಕಾರ ಮಾಡಲಾಗಿದೆ. ಭಾರಿ ಬಿಗಿಭದ್ರತೆಯೊಂದಿಗೆ ವಿಸರ್ಜನೆ ನಡೆಯುವುದರಿಂದ ಪೊಲೀಸ್ ಗಣಪತಿ ಎಂದೇ ಕರೆಯಲಾಗುತ್ತದೆ. ಮೆರವಣಿಗೆ ವೇಳೆ ಕಟ್ಟಡ-ಮಹಡಿ ಏರುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಪ್ರತಿ ವರ್ಷವೂ ಒಂದೊoದು ಹೆಸರಿನಲ್ಲಿ ಗಣಪತಿ ಪ್ರತಿಷ್ಠಾಪಿಸುತ್ತಾ ಬರಲಾಗಿದೆ. ಅಂತೆಯೇ ಈ ಬಾರಿ ಧರ್ಮರಕ್ಷಣಾ ಗಣಪತಿ ಎಂದು ಹೆಸರಿಡಲಾಗಿದೆ. ಪ್ರತಿಷ್ಠಾಪಿಸಿದ ೫೫ ದಿನಗಳಿಗೆ ಸರಿಯಾಗಿ ವಿಸರ್ಜಿಸಲಾಗುತ್ತಿದೆ ಎಂದು ಶ್ರೀ ವಿದ್ಯಾಗಣಪತಿಮಂಡಳಿ ಅಧ್ಯಕ್ಷ ಮನೋಜ್ ಪಟೇಲ್ ಪತ್ರಿಕೆಗೆ ತಿಳಿಸಿದರು.
ಮೆರವಣಿಗೆ ಸಾಗುವ ಬೀದಿಗಳಲ್ಲಿ ಹಳ್ಳಕೊಳ್ಳಗಳನ್ನು ಮುಚ್ಚುವ, ಸ್ವಚ್ಚತೆ ಮಾಡುವ ಕಾರ್ಯ ನಗರಸಭೆಯಿಂದ ಶುಕ್ರವಾರ ಭರದಿಂದ ನಡೆಯಿತು.
ಕಳೆದ ೧ ವಾರದಿಂದ ದಿನಾಲು ಮಳೆಯಾಗುತ್ತಿದ್ದು ವಿಸರ್ಜನೆ ವೇಳೆ ಮಳೆಯಾಗದಿದ್ದರೆ ಸಮಸ್ಯೆ ಇಲ್ಲ. ಬಿದ್ದರೆ ವಿಸರ್ಜನೆ ವಿಳಂಬ ಆಗಲಿದೆ.
ಮಂಚೇಗೌಡನಕೊಪ್ಪಲಿನ ಸ್ಮಶಾನ ಸರಿಪಡಿಸಲು ನಿವಾಸಿಗಳ ಆಗ್ರಹ ಎಚ್. ಎಸ್. ದಿನೇಶ್ಕುಮಾರ್ ಮೈಸೂರು : ದುರ್ವಾಸನೆ ಬೀರುವ ಶೌಚಾಲಯ.., ಎಲ್ಲೆಂದರಲ್ಲಿ ಹರಡಿಕೊಂಡಿರುವ…
ಮೈಸೂರಿನ ಜೆ.ಪಿ.ನಗರದ ಸಾಯಿಬಾಬಾ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ರಾತ್ರಿಯ ಹೊತ್ತಿನಲ್ಲಿ ಒಂದೇ ಸಮನೆ ಬೊಗಳುತ್ತಿರುತ್ತವೆ. ದ್ವಿಚಕ್ರವಾಹನ…
ಗುಂಡ್ಲುಪೇಟೆ : ತಾಲೂಕಿನ ಪಡಗೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಅಡವಿ ಮಠದ ಸಮೀಪವಿರುವ…
ಬೇಸಿಗೆ ಆರಂಭವಾಗುವುದೇ ತಡ ಪ್ರತಿಯೊಬ್ಬರಿಗೂ ಬಾಯಾರಿಕೆ ಹೆಚ್ಚಾಗಿ, ಜಾಸ್ತಿ ನೀರು ಕುಡಿಯಬೇಕಾಗುತ್ತದೆ. ಬಿಸಿಲಿನ ಬೇಗೆ ಹೆಚ್ಚಾಗುವುದರಿಂದ ಎಂತಹವರಿಗೂ ವಿವಿಧ ರೀತಿಯ…
ಈಗ ಶಾಲೆಯಲ್ಲಿ ಶಿಕ್ಷಕರು ಕೇವಲ ಪಠ್ಯ ಬೋಧಕರಾಗಿ ಮಾತ್ರ ಉಳಿದಿಲ್ಲ. ಬೋಧನೆಯ ಜೊತೆ ಜೊತೆಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳುವುದು, ಮಧ್ಯಾಹ್ನದ…
• ಆರೋಪ ಸಾಬೀತು ಮಾಡಲು ಕೇಂದ್ರ ವಿಫಲ • ಸುಪ್ರೀಂ ಮುಜುಗರದಿಂದ ಪಾರು? ಪರಿಸರ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಮಾಡಿದ…