ಜಿಲ್ಲೆಗಳು

ನಾಳೆ ಚಾ.ನಗರದಲ್ಲಿ ಗಣಪತಿ ವಿಸರ್ಜನೆ; ಬಿಗಿ ಭದ್ರತೆ

ಚಾಮರಾಜನಗರ: ಇಲ್ಲಿನ ಶ್ರೀ ವಿದ್ಯಾಗಣಪತಿ ಮಂಡಳಿ ವತಿಯಿಂದ ಗುರುನಂಜನಶೆಟ್ಟರ ಛತ್ರದ ಮುಂಭಾಗ ಪೂಜಿಸಲಾಗಿರುವ ಧರ್ಮರಕ್ಷಣಾ ಗಣಪತಿಯ ವಿಸರ್ಜನಾ ಮಹೋತ್ಸವ ನಾನಾ ಕಲಾತಂಡಗಳ ಅದ್ದೂರಿ ಮೆರವಣಿಗೆಯೊಂದಿಗೆ ಶನಿವಾರ ನಡೆಯಲಿದೆ.

ಇದು ೬೦ನೇ ವರ್ಷದ ಗಣೇಶ ವಿಸರ್ಜನೆ. ಗೌರಿಗಣೇಶ ಹಬ್ಬದಂದು ಪ್ರತಿಷ್ಠಾಪಿಸಲಾಗಿತ್ತು. ವಿಸರ್ಜನಾ ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಬೆಳಿಗ್ಗೆ ೧೦.೩೦ಕ್ಕೆ ಚಾಲನೆ ನೀಡಲಿದ್ದಾರೆ. ನಂತರ ಕರ್ನಾಟಕ, ಕೇರಳದ ಹೆಸರಾಂತ ಕಲಾತಂಡಗಳೊoದಿಗೆ ಮೆರವಣಿಗೆ ಮುಂದಡಿ ಇಡಲಿದೆ.
ಹಲವು ಬೀದಿಗಳಲ್ಲಿ ಸಾಗಿ ಅಂತಿಮವಾಗಿ ತಡರಾತ್ರಿ ದೊಡ್ಡ ಅರಸನ ಕೊಳದಲ್ಲಿ ಗಣಪತಿ ವಿಸರ್ಜಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಕೊಳದ ಸುತ್ತಲೂ ವೈಭವವಾಗಿ ದೀಪಾಲಂಕಾರ ಮಾಡಲಾಗಿದೆ. ಭಾರಿ ಬಿಗಿಭದ್ರತೆಯೊಂದಿಗೆ ವಿಸರ್ಜನೆ ನಡೆಯುವುದರಿಂದ ಪೊಲೀಸ್ ಗಣಪತಿ ಎಂದೇ ಕರೆಯಲಾಗುತ್ತದೆ. ಮೆರವಣಿಗೆ ವೇಳೆ ಕಟ್ಟಡ-ಮಹಡಿ ಏರುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಪ್ರತಿ ವರ್ಷವೂ ಒಂದೊoದು ಹೆಸರಿನಲ್ಲಿ ಗಣಪತಿ ಪ್ರತಿಷ್ಠಾಪಿಸುತ್ತಾ ಬರಲಾಗಿದೆ. ಅಂತೆಯೇ ಈ ಬಾರಿ ಧರ್ಮರಕ್ಷಣಾ ಗಣಪತಿ ಎಂದು ಹೆಸರಿಡಲಾಗಿದೆ. ಪ್ರತಿಷ್ಠಾಪಿಸಿದ ೫೫ ದಿನಗಳಿಗೆ ಸರಿಯಾಗಿ ವಿಸರ್ಜಿಸಲಾಗುತ್ತಿದೆ ಎಂದು ಶ್ರೀ ವಿದ್ಯಾಗಣಪತಿಮಂಡಳಿ ಅಧ್ಯಕ್ಷ ಮನೋಜ್ ಪಟೇಲ್ ಪತ್ರಿಕೆಗೆ ತಿಳಿಸಿದರು.
ಮೆರವಣಿಗೆ ಸಾಗುವ ಬೀದಿಗಳಲ್ಲಿ ಹಳ್ಳಕೊಳ್ಳಗಳನ್ನು ಮುಚ್ಚುವ, ಸ್ವಚ್ಚತೆ ಮಾಡುವ ಕಾರ್ಯ ನಗರಸಭೆಯಿಂದ ಶುಕ್ರವಾರ ಭರದಿಂದ ನಡೆಯಿತು.
ಕಳೆದ ೧ ವಾರದಿಂದ ದಿನಾಲು ಮಳೆಯಾಗುತ್ತಿದ್ದು ವಿಸರ್ಜನೆ ವೇಳೆ ಮಳೆಯಾಗದಿದ್ದರೆ ಸಮಸ್ಯೆ ಇಲ್ಲ. ಬಿದ್ದರೆ ವಿಸರ್ಜನೆ ವಿಳಂಬ ಆಗಲಿದೆ.

andolanait

Recent Posts

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

5 hours ago

ಕಾಂಗೋದಲ್ಲಿ ಎಬೋಲಾ ಅಟ್ಟಹಾಸ: 1000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…

7 hours ago

ಗಾಣಾಳು ಜಲಪಾತದಲ್ಲಿ ಈಜಲು ಹೋದ ಯುವಕ ಸಾವು

ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…

7 hours ago

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

8 hours ago

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

8 hours ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

9 hours ago