ಜಿಲ್ಲೆಗಳು

ನಾಳೆ ಚಾ.ನಗರದಲ್ಲಿ ಗಣಪತಿ ವಿಸರ್ಜನೆ; ಬಿಗಿ ಭದ್ರತೆ

ಚಾಮರಾಜನಗರ: ಇಲ್ಲಿನ ಶ್ರೀ ವಿದ್ಯಾಗಣಪತಿ ಮಂಡಳಿ ವತಿಯಿಂದ ಗುರುನಂಜನಶೆಟ್ಟರ ಛತ್ರದ ಮುಂಭಾಗ ಪೂಜಿಸಲಾಗಿರುವ ಧರ್ಮರಕ್ಷಣಾ ಗಣಪತಿಯ ವಿಸರ್ಜನಾ ಮಹೋತ್ಸವ ನಾನಾ ಕಲಾತಂಡಗಳ ಅದ್ದೂರಿ ಮೆರವಣಿಗೆಯೊಂದಿಗೆ ಶನಿವಾರ ನಡೆಯಲಿದೆ.

ಇದು ೬೦ನೇ ವರ್ಷದ ಗಣೇಶ ವಿಸರ್ಜನೆ. ಗೌರಿಗಣೇಶ ಹಬ್ಬದಂದು ಪ್ರತಿಷ್ಠಾಪಿಸಲಾಗಿತ್ತು. ವಿಸರ್ಜನಾ ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಬೆಳಿಗ್ಗೆ ೧೦.೩೦ಕ್ಕೆ ಚಾಲನೆ ನೀಡಲಿದ್ದಾರೆ. ನಂತರ ಕರ್ನಾಟಕ, ಕೇರಳದ ಹೆಸರಾಂತ ಕಲಾತಂಡಗಳೊoದಿಗೆ ಮೆರವಣಿಗೆ ಮುಂದಡಿ ಇಡಲಿದೆ.
ಹಲವು ಬೀದಿಗಳಲ್ಲಿ ಸಾಗಿ ಅಂತಿಮವಾಗಿ ತಡರಾತ್ರಿ ದೊಡ್ಡ ಅರಸನ ಕೊಳದಲ್ಲಿ ಗಣಪತಿ ವಿಸರ್ಜಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಕೊಳದ ಸುತ್ತಲೂ ವೈಭವವಾಗಿ ದೀಪಾಲಂಕಾರ ಮಾಡಲಾಗಿದೆ. ಭಾರಿ ಬಿಗಿಭದ್ರತೆಯೊಂದಿಗೆ ವಿಸರ್ಜನೆ ನಡೆಯುವುದರಿಂದ ಪೊಲೀಸ್ ಗಣಪತಿ ಎಂದೇ ಕರೆಯಲಾಗುತ್ತದೆ. ಮೆರವಣಿಗೆ ವೇಳೆ ಕಟ್ಟಡ-ಮಹಡಿ ಏರುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಪ್ರತಿ ವರ್ಷವೂ ಒಂದೊoದು ಹೆಸರಿನಲ್ಲಿ ಗಣಪತಿ ಪ್ರತಿಷ್ಠಾಪಿಸುತ್ತಾ ಬರಲಾಗಿದೆ. ಅಂತೆಯೇ ಈ ಬಾರಿ ಧರ್ಮರಕ್ಷಣಾ ಗಣಪತಿ ಎಂದು ಹೆಸರಿಡಲಾಗಿದೆ. ಪ್ರತಿಷ್ಠಾಪಿಸಿದ ೫೫ ದಿನಗಳಿಗೆ ಸರಿಯಾಗಿ ವಿಸರ್ಜಿಸಲಾಗುತ್ತಿದೆ ಎಂದು ಶ್ರೀ ವಿದ್ಯಾಗಣಪತಿಮಂಡಳಿ ಅಧ್ಯಕ್ಷ ಮನೋಜ್ ಪಟೇಲ್ ಪತ್ರಿಕೆಗೆ ತಿಳಿಸಿದರು.
ಮೆರವಣಿಗೆ ಸಾಗುವ ಬೀದಿಗಳಲ್ಲಿ ಹಳ್ಳಕೊಳ್ಳಗಳನ್ನು ಮುಚ್ಚುವ, ಸ್ವಚ್ಚತೆ ಮಾಡುವ ಕಾರ್ಯ ನಗರಸಭೆಯಿಂದ ಶುಕ್ರವಾರ ಭರದಿಂದ ನಡೆಯಿತು.
ಕಳೆದ ೧ ವಾರದಿಂದ ದಿನಾಲು ಮಳೆಯಾಗುತ್ತಿದ್ದು ವಿಸರ್ಜನೆ ವೇಳೆ ಮಳೆಯಾಗದಿದ್ದರೆ ಸಮಸ್ಯೆ ಇಲ್ಲ. ಬಿದ್ದರೆ ವಿಸರ್ಜನೆ ವಿಳಂಬ ಆಗಲಿದೆ.

andolanait

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

4 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

6 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

7 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

9 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

15 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

21 hours ago