ಜಿಲ್ಲೆಗಳು

ನಾಳೆ ಚಾ.ನಗರದಲ್ಲಿ ಗಣಪತಿ ವಿಸರ್ಜನೆ; ಬಿಗಿ ಭದ್ರತೆ

ಚಾಮರಾಜನಗರ: ಇಲ್ಲಿನ ಶ್ರೀ ವಿದ್ಯಾಗಣಪತಿ ಮಂಡಳಿ ವತಿಯಿಂದ ಗುರುನಂಜನಶೆಟ್ಟರ ಛತ್ರದ ಮುಂಭಾಗ ಪೂಜಿಸಲಾಗಿರುವ ಧರ್ಮರಕ್ಷಣಾ ಗಣಪತಿಯ ವಿಸರ್ಜನಾ ಮಹೋತ್ಸವ ನಾನಾ ಕಲಾತಂಡಗಳ ಅದ್ದೂರಿ ಮೆರವಣಿಗೆಯೊಂದಿಗೆ ಶನಿವಾರ ನಡೆಯಲಿದೆ.

ಇದು ೬೦ನೇ ವರ್ಷದ ಗಣೇಶ ವಿಸರ್ಜನೆ. ಗೌರಿಗಣೇಶ ಹಬ್ಬದಂದು ಪ್ರತಿಷ್ಠಾಪಿಸಲಾಗಿತ್ತು. ವಿಸರ್ಜನಾ ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಬೆಳಿಗ್ಗೆ ೧೦.೩೦ಕ್ಕೆ ಚಾಲನೆ ನೀಡಲಿದ್ದಾರೆ. ನಂತರ ಕರ್ನಾಟಕ, ಕೇರಳದ ಹೆಸರಾಂತ ಕಲಾತಂಡಗಳೊoದಿಗೆ ಮೆರವಣಿಗೆ ಮುಂದಡಿ ಇಡಲಿದೆ.
ಹಲವು ಬೀದಿಗಳಲ್ಲಿ ಸಾಗಿ ಅಂತಿಮವಾಗಿ ತಡರಾತ್ರಿ ದೊಡ್ಡ ಅರಸನ ಕೊಳದಲ್ಲಿ ಗಣಪತಿ ವಿಸರ್ಜಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಕೊಳದ ಸುತ್ತಲೂ ವೈಭವವಾಗಿ ದೀಪಾಲಂಕಾರ ಮಾಡಲಾಗಿದೆ. ಭಾರಿ ಬಿಗಿಭದ್ರತೆಯೊಂದಿಗೆ ವಿಸರ್ಜನೆ ನಡೆಯುವುದರಿಂದ ಪೊಲೀಸ್ ಗಣಪತಿ ಎಂದೇ ಕರೆಯಲಾಗುತ್ತದೆ. ಮೆರವಣಿಗೆ ವೇಳೆ ಕಟ್ಟಡ-ಮಹಡಿ ಏರುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಪ್ರತಿ ವರ್ಷವೂ ಒಂದೊoದು ಹೆಸರಿನಲ್ಲಿ ಗಣಪತಿ ಪ್ರತಿಷ್ಠಾಪಿಸುತ್ತಾ ಬರಲಾಗಿದೆ. ಅಂತೆಯೇ ಈ ಬಾರಿ ಧರ್ಮರಕ್ಷಣಾ ಗಣಪತಿ ಎಂದು ಹೆಸರಿಡಲಾಗಿದೆ. ಪ್ರತಿಷ್ಠಾಪಿಸಿದ ೫೫ ದಿನಗಳಿಗೆ ಸರಿಯಾಗಿ ವಿಸರ್ಜಿಸಲಾಗುತ್ತಿದೆ ಎಂದು ಶ್ರೀ ವಿದ್ಯಾಗಣಪತಿಮಂಡಳಿ ಅಧ್ಯಕ್ಷ ಮನೋಜ್ ಪಟೇಲ್ ಪತ್ರಿಕೆಗೆ ತಿಳಿಸಿದರು.
ಮೆರವಣಿಗೆ ಸಾಗುವ ಬೀದಿಗಳಲ್ಲಿ ಹಳ್ಳಕೊಳ್ಳಗಳನ್ನು ಮುಚ್ಚುವ, ಸ್ವಚ್ಚತೆ ಮಾಡುವ ಕಾರ್ಯ ನಗರಸಭೆಯಿಂದ ಶುಕ್ರವಾರ ಭರದಿಂದ ನಡೆಯಿತು.
ಕಳೆದ ೧ ವಾರದಿಂದ ದಿನಾಲು ಮಳೆಯಾಗುತ್ತಿದ್ದು ವಿಸರ್ಜನೆ ವೇಳೆ ಮಳೆಯಾಗದಿದ್ದರೆ ಸಮಸ್ಯೆ ಇಲ್ಲ. ಬಿದ್ದರೆ ವಿಸರ್ಜನೆ ವಿಳಂಬ ಆಗಲಿದೆ.

andolanait

Recent Posts

ಕಾರು ಚಾಲಕನ ಪುತ್ರನಿಗೆ ಟಿಕೆಟ್‌ ನೀಡಿ ಗೆಲ್ಲಿಸಿಕೊಂಡು ಬಂದ ದಳಪತಿ ವಿಜಯ್‌!

ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್‌ ಅವರ ಕಾರು ಚಾಲಕನ…

8 hours ago

ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು : ಮೈಸೂರಲ್ಲಿ ಸಂಭ್ರಮಾಚರಣೆ

ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…

9 hours ago

ವಿಜಯ್‌ ಭೇಟಿಯಾಗಿ ತ್ರಿಶಾ ಅಭಿನಂದನೆ

ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…

9 hours ago

ತಮಿಳುನಾಡು| ಸಿಎಂ ಎಂ.ಕೆ.ಸ್ಟಾಲಿನ್‌ಗೆ ಸೋಲು

ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್‌ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…

12 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ: ಕೈ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ

ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…

12 hours ago

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ…

13 hours ago