ಜಿಲ್ಲೆಗಳು

ಚಾಮರಾಜನಗರದಲ್ಲಿ ವಿಜೃಂಭಣೆಯ ಹನುಮ ಜಯಂತ್ಯೋತ್ಸವ

ಸಾಂಸ್ಕೃತಿಕ ಕಲಾತಂಡಗಳ ಶ್ರೀಆಂಜನೇಯಸ್ವಾಮಿ ವಿಗ್ರಹ ಮೂರ್ತಿ  ಮೆರವಣಿಗೆ

 ಚಾಮರಾಜನಗರ: ಶ್ರೀ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ   ಹನುಮ ಜಯಂತಿಯ ಪ್ರಯುಕ್ತ  ನಗರದಲ್ಲಿ ಶ್ರೀಆಂಜನೇಯ ಸ್ವಾಮಿ ವಿಗ್ರಹಮೂರ್ತಿ ಯನ್ನು ಸಾಂಸ್ಕೃತಿಕ ಕಲಾತಂಡಗಳೊಂದಿಗೆ ವಿಜೃಂಭಣೆಯಿಂದ ಮೆರವಣಿಗೆ ನಡೆಯುತು.

ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದಲ್ಲಿರುವ   ಶ್ರೀ ಅಭಯ ಕಾರ್ಯಸಿದ್ದಿ ಆಂಜನೇಯ ದೇವಸ್ಥಾನದಲ್ಲಿ ಬೆಳಿಗ್ಗೆ ವಿಶೇಷ ಪೂಜೆ , ಹೋಮಹವನ ನಡೆದು ಮಧ್ಯಾಹ್ನ ಮಹಾ ಮಂಗಳಾರತಿ  ನೆರವೇರಿತ್ತು. ತದನಂತರ ಪ್ರಸಾದ ವಿತರಿಸಲಾಯಿತು.

ಮಧ್ಯಾಹ್ನ 3 ಗಂಟೆಯಲ್ಲಿ ಹನುಮ ಉತ್ಸವ ಮೂರ್ತಿಗೆ  ಪೂಜೆ ಸಲ್ಲಿಸಿ  ಉಪವಿಭಾಗಾಧಿಕಾರಿ ಗೀತಾ ಉಡೆದಾಲ ಹಾಗೂ ತಹಸೀಲ್ದಾರ್ ಬಸವರಾಜು ಪುಪ್ಷಾರ್ಚನೆ ಮಾಡುವ ಮೂಲಕ  ಚಾಲನೆ ನೀಡಿದರು.

ಕಲಾತಂಡಗಳಾದ ನಂದಿಧ್ವಜ, ವೀರಗಾಸೆ, ಚೆಂಡೆವಾದ್ಯ, ಡೊಳ್ಳುಕುಣಿತ, ಗಾಡಿಗೊಂಬೆ ಸೇರಿ ನಾನಾ ಕಲಾತಂಡಗಳೊಂದಿಗೆ ಯುವಕರು ಕೇಸರ ಧ್ವಜಾ ಹಿಡಿದು ಜೈ ಶ್ರೀರಾಮ್, ಜೈ ಹನುಮ ಘೋಷಣೆ ಕೂಗಿ  ಸಂಭ್ರಮಿಸಿದರು.

ಶ್ರೀ ಅಭಯ ಕಾರ್ಯಸಿದ್ದಿ ಆಂಜಜನೇಯ ದೇವಸ್ಥಾನದ ಮುಂಬಾಗದಿಂದ ಹೊರಟ ಮೆರವಣಿಗೆ ತರಕಾರಿ ಮಾರುಕಟ್ಟೆ ರಸ್ತೆ, ಚಿಕ್ಕಂಗಡಿ ಬೀದಿ, ಸಂತೇಮರಹಳ್ಳಿ ವೃತ್ತ, ಡಿವಿಯೇಷನ್ ರಸ್ತೆ , ಭುವನೇಶ್ವರಿ ವೃತ್ತ, ಕೆಎಸ್ಆರ್ ಟಿ ಸಿ ಬಸ್ ನಿಲ್ದಾಣ ರಸ್ತೆ, ವಾಣಿಯರ್ ರಸ್ತೆ, ಗುಂಡ್ಕುಪೇಟೆ ವೃತ್ತ, ದೊಡ್ಡಂಗಡಿ ಬೀದಿ, ರಥದಬೀದಿ ಮಾರ್ಗವಾಗಿ ಆಂಜನೇಯಸ್ವಾಮಿ ದೇವಸ್ಥಾನ ಬಳಿ ಸಮಾಪ್ತಿಗೊಂಡಿತು.

ಮೆರವಣೆಗೆಯಲ್ಲಿ  ಜಯಂತ್ಯೋತ್ಸವ ಸಮಿತಿ ಸಂಚಾಲಕರಾದ ಶಿವುವಿರಾಟ್,  ಪ್ರವೀಣ್,   ಮುಖಂಡರಾದ.  ಕೆಲ್ಲಂಬಳ್ಳಿ ಸೋಮನಾಯಕ,  ಎಪಿಎಂಸಿ ಅಧ್ಯಕ್ಷ  ಮನೋಜ್ ಪಟೇಲ್, ಅಮ್ಮನಪುರಮಲ್ಲೇಶ್, ಜಿ.ಪಂಮಾಜಿ ಅಧ್ಯಕ್ಷೆ  ನಾಗಶ್ರೀ ಪ್ರತಾಪ್,  ನಗರಸಭಾ ಮಾಜಿ ಅಧ್ಯಕ್ಷ  ಸುರೇಶ್ ನಾಯಕ, ನಿಜಗುಣರಾಜು,  ಡಿ ವೈಎಸ್ ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ಸಮಿತಿಯ ಸದಸ್ಯರಾದ ಮಹೇಶ್, ಮಧು, ಹರ್ಷತ್‌ಗೌಡ, ಮಹೇಂದ್ರ, ಸಿ.ವಿ.ಮಣಿಕಂಠ ಇತರರು ಭಾಗವಹಿಸಿದ್ದರು.

andolanait

Recent Posts

ಸೆಸ್ಕ್‌ನಲ್ಲಿ ಅರ್ಥಗರ್ಭಿತ ಲೈನ್‌ಮ್ಯಾನ್ ದಿವಸ್‌ ಆಚರಣೆ

‌ಮೈಸೂರು: ಗ್ರಾಹಕರಿಗೆ ನಿರಂತರ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಲು ಸಿಬ್ಬಂದಿ ಸುರಕ್ಷತೆ ಮತ್ತು ಎಚ್ಚರಿಕೆಯ ಕೆಲಸ ಅತ್ಯಂತ ಮುಖ್ಯವಾಗಿದೆ…

32 seconds ago

ಸಾಮರಸ್ಯ ಮತ್ತು ಸಮಾನತೆ ಭಾವನೆಯ ಮೂಲಕ ಮಾದರಿ ಸಮಾಜ ನಿರ್ಮಾಣ ಮಾಡೋಣ: ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯ: ಎಲ್ಲರೂ ಸಾಮರಸ್ಯದಿಂದ ಮತ್ತು ಸಮಾನತೆಯಿಂದ ಬದುಕಬೇಕು ಮತ್ತು ನಾವೆಲ್ಲರೂ ಒಂದೇ ಎಂಬ ಭಾವನೆಯಿಂದ ಬಾಳಬೇಕು. ಇದರಿಂದ ಮಾದರಿ ಸಮಾಜ…

10 mins ago

ಕೇಂದ್ರದ ಸಾಲದ ನೀತಿ ಟೀಕಿಸಿದ ಸಿಎಂ ಸಿದ್ದರಾಮಯ್ಯ.

ಮೈಸೂರು: ರಾಜ್ಯದ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯದ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ, ವಿತ್ತೀಯ ಹೊಣೆಗಾರಿಕೆ ಕಾಯ್ದೆಯ ಮಾನದಂಡಗಳ ಮಿತಿಯಲ್ಲೇ…

44 mins ago

ಸಿಎಂ ಬದಲಾವಣೆ ವಿಚಾರ: ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ: ಸಿಎಂ ಸಿದ್ದರಾಮಯ್ಯ ಪುನರುಚ್ಛಾರ

ಮೈಸೂರು: ಹೈಕಮಾಂಡ್ ಇರು ಎಂದರೆ ಇರುತ್ತೇನೆ. ಮುಂದುವರೆಯಿರಿ ಎಂದರೇ ಮುಂದುವರೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ. ಸಿಎಂ ಬದಲಾವಣೆ ವಿಚಾರಕ್ಕೆ…

1 hour ago

ಹನೂರು| ಕಗ್ಗತ್ತಲ್ಲಿನಲ್ಲಿದ್ದ ಎರಡು ಬಡ ಕುಟುಂಬಗಳಿಗೆ ಆಸರೆಯಾದ ಪೇದೆ ಕುಮಾರಸ್ವಾಮಿ: ಸಾರ್ವಜನಿಕರಿಂದ ಮೆಚ್ಚುಗೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಸ್ವಾತಂತ್ರ ಬಂದು 78 ವರ್ಷ ಪೂರ್ಣಗೊಂಡಿದ್ದರು ವಿದ್ಯುತ್ ಬೆಳಕು ನೋಡದೆ…

3 hours ago

ರಾಜ್ಯ ಬಜೆಟ್‌ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತೊಮ್ಮೆ ಟೀಕೆ

ಮಂಡ್ಯ: ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್‌ ಬಗ್ಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ. ಈ ಕುರಿತು…

3 hours ago