ಸಾಂಸ್ಕೃತಿಕ ಕಲಾತಂಡಗಳ ಶ್ರೀಆಂಜನೇಯಸ್ವಾಮಿ ವಿಗ್ರಹ ಮೂರ್ತಿ ಮೆರವಣಿಗೆ
ಚಾಮರಾಜನಗರ: ಶ್ರೀ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಹನುಮ ಜಯಂತಿಯ ಪ್ರಯುಕ್ತ ನಗರದಲ್ಲಿ ಶ್ರೀಆಂಜನೇಯ ಸ್ವಾಮಿ ವಿಗ್ರಹಮೂರ್ತಿ ಯನ್ನು ಸಾಂಸ್ಕೃತಿಕ ಕಲಾತಂಡಗಳೊಂದಿಗೆ ವಿಜೃಂಭಣೆಯಿಂದ ಮೆರವಣಿಗೆ ನಡೆಯುತು.
ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದಲ್ಲಿರುವ ಶ್ರೀ ಅಭಯ ಕಾರ್ಯಸಿದ್ದಿ ಆಂಜನೇಯ ದೇವಸ್ಥಾನದಲ್ಲಿ ಬೆಳಿಗ್ಗೆ ವಿಶೇಷ ಪೂಜೆ , ಹೋಮಹವನ ನಡೆದು ಮಧ್ಯಾಹ್ನ ಮಹಾ ಮಂಗಳಾರತಿ ನೆರವೇರಿತ್ತು. ತದನಂತರ ಪ್ರಸಾದ ವಿತರಿಸಲಾಯಿತು.
ಮಧ್ಯಾಹ್ನ 3 ಗಂಟೆಯಲ್ಲಿ ಹನುಮ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ ಉಪವಿಭಾಗಾಧಿಕಾರಿ ಗೀತಾ ಉಡೆದಾಲ ಹಾಗೂ ತಹಸೀಲ್ದಾರ್ ಬಸವರಾಜು ಪುಪ್ಷಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.
ಕಲಾತಂಡಗಳಾದ ನಂದಿಧ್ವಜ, ವೀರಗಾಸೆ, ಚೆಂಡೆವಾದ್ಯ, ಡೊಳ್ಳುಕುಣಿತ, ಗಾಡಿಗೊಂಬೆ ಸೇರಿ ನಾನಾ ಕಲಾತಂಡಗಳೊಂದಿಗೆ ಯುವಕರು ಕೇಸರ ಧ್ವಜಾ ಹಿಡಿದು ಜೈ ಶ್ರೀರಾಮ್, ಜೈ ಹನುಮ ಘೋಷಣೆ ಕೂಗಿ ಸಂಭ್ರಮಿಸಿದರು.
ಶ್ರೀ ಅಭಯ ಕಾರ್ಯಸಿದ್ದಿ ಆಂಜಜನೇಯ ದೇವಸ್ಥಾನದ ಮುಂಬಾಗದಿಂದ ಹೊರಟ ಮೆರವಣಿಗೆ ತರಕಾರಿ ಮಾರುಕಟ್ಟೆ ರಸ್ತೆ, ಚಿಕ್ಕಂಗಡಿ ಬೀದಿ, ಸಂತೇಮರಹಳ್ಳಿ ವೃತ್ತ, ಡಿವಿಯೇಷನ್ ರಸ್ತೆ , ಭುವನೇಶ್ವರಿ ವೃತ್ತ, ಕೆಎಸ್ಆರ್ ಟಿ ಸಿ ಬಸ್ ನಿಲ್ದಾಣ ರಸ್ತೆ, ವಾಣಿಯರ್ ರಸ್ತೆ, ಗುಂಡ್ಕುಪೇಟೆ ವೃತ್ತ, ದೊಡ್ಡಂಗಡಿ ಬೀದಿ, ರಥದಬೀದಿ ಮಾರ್ಗವಾಗಿ ಆಂಜನೇಯಸ್ವಾಮಿ ದೇವಸ್ಥಾನ ಬಳಿ ಸಮಾಪ್ತಿಗೊಂಡಿತು.
ಮೆರವಣೆಗೆಯಲ್ಲಿ ಜಯಂತ್ಯೋತ್ಸವ ಸಮಿತಿ ಸಂಚಾಲಕರಾದ ಶಿವುವಿರಾಟ್, ಪ್ರವೀಣ್, ಮುಖಂಡರಾದ. ಕೆಲ್ಲಂಬಳ್ಳಿ ಸೋಮನಾಯಕ, ಎಪಿಎಂಸಿ ಅಧ್ಯಕ್ಷ ಮನೋಜ್ ಪಟೇಲ್, ಅಮ್ಮನಪುರಮಲ್ಲೇಶ್, ಜಿ.ಪಂಮಾಜಿ ಅಧ್ಯಕ್ಷೆ ನಾಗಶ್ರೀ ಪ್ರತಾಪ್, ನಗರಸಭಾ ಮಾಜಿ ಅಧ್ಯಕ್ಷ ಸುರೇಶ್ ನಾಯಕ, ನಿಜಗುಣರಾಜು, ಡಿ ವೈಎಸ್ ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ಸಮಿತಿಯ ಸದಸ್ಯರಾದ ಮಹೇಶ್, ಮಧು, ಹರ್ಷತ್ಗೌಡ, ಮಹೇಂದ್ರ, ಸಿ.ವಿ.ಮಣಿಕಂಠ ಇತರರು ಭಾಗವಹಿಸಿದ್ದರು.
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…
ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…
ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…