ಜಿಲ್ಲೆಗಳು

ಚಾಮರಾಜನಗರದಲ್ಲಿ ವಿಜೃಂಭಣೆಯ ಹನುಮ ಜಯಂತ್ಯೋತ್ಸವ

ಸಾಂಸ್ಕೃತಿಕ ಕಲಾತಂಡಗಳ ಶ್ರೀಆಂಜನೇಯಸ್ವಾಮಿ ವಿಗ್ರಹ ಮೂರ್ತಿ  ಮೆರವಣಿಗೆ

 ಚಾಮರಾಜನಗರ: ಶ್ರೀ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ   ಹನುಮ ಜಯಂತಿಯ ಪ್ರಯುಕ್ತ  ನಗರದಲ್ಲಿ ಶ್ರೀಆಂಜನೇಯ ಸ್ವಾಮಿ ವಿಗ್ರಹಮೂರ್ತಿ ಯನ್ನು ಸಾಂಸ್ಕೃತಿಕ ಕಲಾತಂಡಗಳೊಂದಿಗೆ ವಿಜೃಂಭಣೆಯಿಂದ ಮೆರವಣಿಗೆ ನಡೆಯುತು.

ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದಲ್ಲಿರುವ   ಶ್ರೀ ಅಭಯ ಕಾರ್ಯಸಿದ್ದಿ ಆಂಜನೇಯ ದೇವಸ್ಥಾನದಲ್ಲಿ ಬೆಳಿಗ್ಗೆ ವಿಶೇಷ ಪೂಜೆ , ಹೋಮಹವನ ನಡೆದು ಮಧ್ಯಾಹ್ನ ಮಹಾ ಮಂಗಳಾರತಿ  ನೆರವೇರಿತ್ತು. ತದನಂತರ ಪ್ರಸಾದ ವಿತರಿಸಲಾಯಿತು.

ಮಧ್ಯಾಹ್ನ 3 ಗಂಟೆಯಲ್ಲಿ ಹನುಮ ಉತ್ಸವ ಮೂರ್ತಿಗೆ  ಪೂಜೆ ಸಲ್ಲಿಸಿ  ಉಪವಿಭಾಗಾಧಿಕಾರಿ ಗೀತಾ ಉಡೆದಾಲ ಹಾಗೂ ತಹಸೀಲ್ದಾರ್ ಬಸವರಾಜು ಪುಪ್ಷಾರ್ಚನೆ ಮಾಡುವ ಮೂಲಕ  ಚಾಲನೆ ನೀಡಿದರು.

ಕಲಾತಂಡಗಳಾದ ನಂದಿಧ್ವಜ, ವೀರಗಾಸೆ, ಚೆಂಡೆವಾದ್ಯ, ಡೊಳ್ಳುಕುಣಿತ, ಗಾಡಿಗೊಂಬೆ ಸೇರಿ ನಾನಾ ಕಲಾತಂಡಗಳೊಂದಿಗೆ ಯುವಕರು ಕೇಸರ ಧ್ವಜಾ ಹಿಡಿದು ಜೈ ಶ್ರೀರಾಮ್, ಜೈ ಹನುಮ ಘೋಷಣೆ ಕೂಗಿ  ಸಂಭ್ರಮಿಸಿದರು.

ಶ್ರೀ ಅಭಯ ಕಾರ್ಯಸಿದ್ದಿ ಆಂಜಜನೇಯ ದೇವಸ್ಥಾನದ ಮುಂಬಾಗದಿಂದ ಹೊರಟ ಮೆರವಣಿಗೆ ತರಕಾರಿ ಮಾರುಕಟ್ಟೆ ರಸ್ತೆ, ಚಿಕ್ಕಂಗಡಿ ಬೀದಿ, ಸಂತೇಮರಹಳ್ಳಿ ವೃತ್ತ, ಡಿವಿಯೇಷನ್ ರಸ್ತೆ , ಭುವನೇಶ್ವರಿ ವೃತ್ತ, ಕೆಎಸ್ಆರ್ ಟಿ ಸಿ ಬಸ್ ನಿಲ್ದಾಣ ರಸ್ತೆ, ವಾಣಿಯರ್ ರಸ್ತೆ, ಗುಂಡ್ಕುಪೇಟೆ ವೃತ್ತ, ದೊಡ್ಡಂಗಡಿ ಬೀದಿ, ರಥದಬೀದಿ ಮಾರ್ಗವಾಗಿ ಆಂಜನೇಯಸ್ವಾಮಿ ದೇವಸ್ಥಾನ ಬಳಿ ಸಮಾಪ್ತಿಗೊಂಡಿತು.

ಮೆರವಣೆಗೆಯಲ್ಲಿ  ಜಯಂತ್ಯೋತ್ಸವ ಸಮಿತಿ ಸಂಚಾಲಕರಾದ ಶಿವುವಿರಾಟ್,  ಪ್ರವೀಣ್,   ಮುಖಂಡರಾದ.  ಕೆಲ್ಲಂಬಳ್ಳಿ ಸೋಮನಾಯಕ,  ಎಪಿಎಂಸಿ ಅಧ್ಯಕ್ಷ  ಮನೋಜ್ ಪಟೇಲ್, ಅಮ್ಮನಪುರಮಲ್ಲೇಶ್, ಜಿ.ಪಂಮಾಜಿ ಅಧ್ಯಕ್ಷೆ  ನಾಗಶ್ರೀ ಪ್ರತಾಪ್,  ನಗರಸಭಾ ಮಾಜಿ ಅಧ್ಯಕ್ಷ  ಸುರೇಶ್ ನಾಯಕ, ನಿಜಗುಣರಾಜು,  ಡಿ ವೈಎಸ್ ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ಸಮಿತಿಯ ಸದಸ್ಯರಾದ ಮಹೇಶ್, ಮಧು, ಹರ್ಷತ್‌ಗೌಡ, ಮಹೇಂದ್ರ, ಸಿ.ವಿ.ಮಣಿಕಂಠ ಇತರರು ಭಾಗವಹಿಸಿದ್ದರು.

andolanait

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

8 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

12 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

13 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

14 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

14 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

14 hours ago