ಜಿಲ್ಲೆಗಳು

ಚಾ.ನಗರ : ನಗರಸಭೆಯಿಂದ ಹರಿದ, ಏರುಪೇರು ಅಳತೆಯ ತ್ರಿವರ್ಣ ಧ್ವಜಗಳ ಪೂರೈಕೆ

ಚಾಮರಾಜನಗರ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನದ ಪ್ರಯುಕ್ತ ರಾಷ್ಟ್ರಧ್ವಜಗಳನ್ನು ಹಾರಿಸಲು ಮುಂದಾದ ನಗರದ ವರ್ತಕರಿಗೆ ನಗರಸಭೆ ಕಳಪೆ ರಾಷ್ಟ್ರಧ್ವಜ ಪೂರೈಸಿದೆ ಎಂದು ವರ್ತಕ ಚಿದಾನಂದ ಗಣೇಶ್ ತಿಳಿಸಿದರು.

ಚಾಮರಾಜನಗರ ವರ್ತಕರ ಸಂಘದಿಂದ 5 ಸಾವಿರ ಹಣ ಕೊಟ್ಟು 200ಕ್ಕೂ ಹೆಚ್ಚು ಧ್ವಜವನ್ನು ಚಾಮರಾಜನಗರ ನಗರಸಭೆಯಿಂದ ತರಿಸಿಕೊಳ್ಳಲಾಗಿದೆ. ಆದರೆ ಹರಿದ, ಅಳತೆ ಏರುಪಾರಾಗಿರುವ, ಬಣ್ಣ ಮಾಸಿದ ತ್ರಿವರ್ಣ ಧ್ವಜಗಳನ್ನು ಪೂರೈಸಿ ವರ್ತಕರ ಕೆಂಗಣ್ಣಿಗೆ ಗುರಿಯಾಗಿದೆ.

ಈ ಸಂಬಂಧ ವರ್ತಕರ ಸಂಘದ ಚಿದಾನಂದ ಗಣೇಶ್ ಮಾತನಾಡಿ, ನಗರಸಭೆಯಿಂದ ಎಲ್ಲಾ ವರ್ತಕರಿಗೆ‌‌ ವಿತರಿಸಲು 200ಕ್ಕೂ ಹೆಚ್ಚು ರಾಷ್ಟ್ರಧ್ವಜಗಳನ್ನು ಖರೀದಿಸಿದ್ದೆವು.‌

ಆದರೆ‌‌ 200ರಲ್ಲಿ 15 ರಿಂದ 20 ಧ್ವಜಗಳು ಮಾತ್ರ ಹಾರಿಸಲು ಯೋಗ್ಯವಾಗಿವೆ. ನಗರಸಭೆ ಸಿಬ್ಬಂದಿ ಹೇಗೆ ತಂದರೋ, ಧ್ವಜ ನಿರ್ಮಾಣ ಮಾಡುವವರು ಎಷ್ಟು ನಿರ್ಲಕ್ಷ್ಯ ವಹಿಸಿದ್ದಾರೋ ಎಂದು ಆಕ್ರೋಶ ಹೊರಹಾಕಿದರು.

 

andolanait

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

2 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

3 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

4 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

4 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

4 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

4 hours ago