ಜಿಲ್ಲೆಗಳು

ಚಾ.ನಗರ : ನಗರಸಭೆಯಿಂದ ಹರಿದ, ಏರುಪೇರು ಅಳತೆಯ ತ್ರಿವರ್ಣ ಧ್ವಜಗಳ ಪೂರೈಕೆ

ಚಾಮರಾಜನಗರ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನದ ಪ್ರಯುಕ್ತ ರಾಷ್ಟ್ರಧ್ವಜಗಳನ್ನು ಹಾರಿಸಲು ಮುಂದಾದ ನಗರದ ವರ್ತಕರಿಗೆ ನಗರಸಭೆ ಕಳಪೆ ರಾಷ್ಟ್ರಧ್ವಜ ಪೂರೈಸಿದೆ ಎಂದು ವರ್ತಕ ಚಿದಾನಂದ ಗಣೇಶ್ ತಿಳಿಸಿದರು.

ಚಾಮರಾಜನಗರ ವರ್ತಕರ ಸಂಘದಿಂದ 5 ಸಾವಿರ ಹಣ ಕೊಟ್ಟು 200ಕ್ಕೂ ಹೆಚ್ಚು ಧ್ವಜವನ್ನು ಚಾಮರಾಜನಗರ ನಗರಸಭೆಯಿಂದ ತರಿಸಿಕೊಳ್ಳಲಾಗಿದೆ. ಆದರೆ ಹರಿದ, ಅಳತೆ ಏರುಪಾರಾಗಿರುವ, ಬಣ್ಣ ಮಾಸಿದ ತ್ರಿವರ್ಣ ಧ್ವಜಗಳನ್ನು ಪೂರೈಸಿ ವರ್ತಕರ ಕೆಂಗಣ್ಣಿಗೆ ಗುರಿಯಾಗಿದೆ.

ಈ ಸಂಬಂಧ ವರ್ತಕರ ಸಂಘದ ಚಿದಾನಂದ ಗಣೇಶ್ ಮಾತನಾಡಿ, ನಗರಸಭೆಯಿಂದ ಎಲ್ಲಾ ವರ್ತಕರಿಗೆ‌‌ ವಿತರಿಸಲು 200ಕ್ಕೂ ಹೆಚ್ಚು ರಾಷ್ಟ್ರಧ್ವಜಗಳನ್ನು ಖರೀದಿಸಿದ್ದೆವು.‌

ಆದರೆ‌‌ 200ರಲ್ಲಿ 15 ರಿಂದ 20 ಧ್ವಜಗಳು ಮಾತ್ರ ಹಾರಿಸಲು ಯೋಗ್ಯವಾಗಿವೆ. ನಗರಸಭೆ ಸಿಬ್ಬಂದಿ ಹೇಗೆ ತಂದರೋ, ಧ್ವಜ ನಿರ್ಮಾಣ ಮಾಡುವವರು ಎಷ್ಟು ನಿರ್ಲಕ್ಷ್ಯ ವಹಿಸಿದ್ದಾರೋ ಎಂದು ಆಕ್ರೋಶ ಹೊರಹಾಕಿದರು.

 

andolanait

Recent Posts

ಪಿಯುಸಿ ಪರೀಕ್ಷೆ ಅಕ್ರಮ ತಡೆಗೆ ವೆಬ್ ಕಾಸ್ಟಿಂಗ್ ಕಣ್ಗಾವಲು

ಕೆ.ಬಿ.ರಮೇಶನಾಯಕ ಮೈಸೂರು ಜಿಲ್ಲೆಯಲ್ಲಿ ೫೧ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ ಪರೀಕ್ಷಾ ಕೇಂದ್ರಗಳ ವೀಕ್ಷಣೆಗೆ ೧೦ ಉಪನ್ಯಾಸಕರ ತಂಡ ರಚನೆ…

4 mins ago

ವಾಹನ ಸವಾರರ ಗಮನಕ್ಕೆ ; ಏಪ್ರಿಲ್‌ 1 ರಿಂದ ಟೋಲ್‌ಗಳಲ್ಲಿ ಇಲ್ಲ ನಗದು ಪಾವತಿ

ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…

11 hours ago

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

13 hours ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

13 hours ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

13 hours ago