ಚಾಮರಾಜನಗರ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನದ ಪ್ರಯುಕ್ತ ರಾಷ್ಟ್ರಧ್ವಜಗಳನ್ನು ಹಾರಿಸಲು ಮುಂದಾದ ನಗರದ ವರ್ತಕರಿಗೆ ನಗರಸಭೆ ಕಳಪೆ ರಾಷ್ಟ್ರಧ್ವಜ ಪೂರೈಸಿದೆ ಎಂದು ವರ್ತಕ ಚಿದಾನಂದ ಗಣೇಶ್ ತಿಳಿಸಿದರು.
ಚಾಮರಾಜನಗರ ವರ್ತಕರ ಸಂಘದಿಂದ 5 ಸಾವಿರ ಹಣ ಕೊಟ್ಟು 200ಕ್ಕೂ ಹೆಚ್ಚು ಧ್ವಜವನ್ನು ಚಾಮರಾಜನಗರ ನಗರಸಭೆಯಿಂದ ತರಿಸಿಕೊಳ್ಳಲಾಗಿದೆ. ಆದರೆ ಹರಿದ, ಅಳತೆ ಏರುಪಾರಾಗಿರುವ, ಬಣ್ಣ ಮಾಸಿದ ತ್ರಿವರ್ಣ ಧ್ವಜಗಳನ್ನು ಪೂರೈಸಿ ವರ್ತಕರ ಕೆಂಗಣ್ಣಿಗೆ ಗುರಿಯಾಗಿದೆ.
ಈ ಸಂಬಂಧ ವರ್ತಕರ ಸಂಘದ ಚಿದಾನಂದ ಗಣೇಶ್ ಮಾತನಾಡಿ, ನಗರಸಭೆಯಿಂದ ಎಲ್ಲಾ ವರ್ತಕರಿಗೆ ವಿತರಿಸಲು 200ಕ್ಕೂ ಹೆಚ್ಚು ರಾಷ್ಟ್ರಧ್ವಜಗಳನ್ನು ಖರೀದಿಸಿದ್ದೆವು.
ಆದರೆ 200ರಲ್ಲಿ 15 ರಿಂದ 20 ಧ್ವಜಗಳು ಮಾತ್ರ ಹಾರಿಸಲು ಯೋಗ್ಯವಾಗಿವೆ. ನಗರಸಭೆ ಸಿಬ್ಬಂದಿ ಹೇಗೆ ತಂದರೋ, ಧ್ವಜ ನಿರ್ಮಾಣ ಮಾಡುವವರು ಎಷ್ಟು ನಿರ್ಲಕ್ಷ್ಯ ವಹಿಸಿದ್ದಾರೋ ಎಂದು ಆಕ್ರೋಶ ಹೊರಹಾಕಿದರು.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…