ಜಿಲ್ಲೆಗಳು

ಚಾ.ನಗರ : ನಗರಸಭೆಯಿಂದ ಹರಿದ, ಏರುಪೇರು ಅಳತೆಯ ತ್ರಿವರ್ಣ ಧ್ವಜಗಳ ಪೂರೈಕೆ

ಚಾಮರಾಜನಗರ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನದ ಪ್ರಯುಕ್ತ ರಾಷ್ಟ್ರಧ್ವಜಗಳನ್ನು ಹಾರಿಸಲು ಮುಂದಾದ ನಗರದ ವರ್ತಕರಿಗೆ ನಗರಸಭೆ ಕಳಪೆ ರಾಷ್ಟ್ರಧ್ವಜ ಪೂರೈಸಿದೆ ಎಂದು ವರ್ತಕ ಚಿದಾನಂದ ಗಣೇಶ್ ತಿಳಿಸಿದರು.

ಚಾಮರಾಜನಗರ ವರ್ತಕರ ಸಂಘದಿಂದ 5 ಸಾವಿರ ಹಣ ಕೊಟ್ಟು 200ಕ್ಕೂ ಹೆಚ್ಚು ಧ್ವಜವನ್ನು ಚಾಮರಾಜನಗರ ನಗರಸಭೆಯಿಂದ ತರಿಸಿಕೊಳ್ಳಲಾಗಿದೆ. ಆದರೆ ಹರಿದ, ಅಳತೆ ಏರುಪಾರಾಗಿರುವ, ಬಣ್ಣ ಮಾಸಿದ ತ್ರಿವರ್ಣ ಧ್ವಜಗಳನ್ನು ಪೂರೈಸಿ ವರ್ತಕರ ಕೆಂಗಣ್ಣಿಗೆ ಗುರಿಯಾಗಿದೆ.

ಈ ಸಂಬಂಧ ವರ್ತಕರ ಸಂಘದ ಚಿದಾನಂದ ಗಣೇಶ್ ಮಾತನಾಡಿ, ನಗರಸಭೆಯಿಂದ ಎಲ್ಲಾ ವರ್ತಕರಿಗೆ‌‌ ವಿತರಿಸಲು 200ಕ್ಕೂ ಹೆಚ್ಚು ರಾಷ್ಟ್ರಧ್ವಜಗಳನ್ನು ಖರೀದಿಸಿದ್ದೆವು.‌

ಆದರೆ‌‌ 200ರಲ್ಲಿ 15 ರಿಂದ 20 ಧ್ವಜಗಳು ಮಾತ್ರ ಹಾರಿಸಲು ಯೋಗ್ಯವಾಗಿವೆ. ನಗರಸಭೆ ಸಿಬ್ಬಂದಿ ಹೇಗೆ ತಂದರೋ, ಧ್ವಜ ನಿರ್ಮಾಣ ಮಾಡುವವರು ಎಷ್ಟು ನಿರ್ಲಕ್ಷ್ಯ ವಹಿಸಿದ್ದಾರೋ ಎಂದು ಆಕ್ರೋಶ ಹೊರಹಾಕಿದರು.

 

andolanait

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

7 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

7 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

8 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

8 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

20 hours ago