ಚಾಮರಾಜನಗರ: ನಗರದ ಹೊರವಲಯದಲ್ಲಿರುವ ಸಿಮ್ಸ್ ಆಸ್ಪತ್ರೆಯಲ್ಲಿ ಭಿಕ್ಷುಕನೊಬ್ಬನ ಮೃತದೇಹವನ್ನು ವಾರಸುದಾರರ ಸಮ್ಮುಖದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಿ ಪೊಲೀಸರು ಮಾನವೀಯತೆ ಮೆರೆದಿದ್ದಾರೆ.
ಹನೂರು ಪಟ್ಟಣದಲ್ಲಿ ಪೇಪರ್, ಬಾಟಲ್ ಹಾಗೂ ಇತರೆ ಸಾಮಗ್ರಿಗಳನ್ನು ಹಾಯ್ದು ಕೊಂಡು ಅನಾಥನಂತೆ ಬದುಕು ಸಾಗಿಸುತ್ತಿದ್ದ ತಂಗರಾಜ್ ಎಂಬಾತನೇ ಮೃತ ವ್ಯಕ್ತಿ. ಶನಿವಾರ ರಾತ್ರಿ ಹನೂರು ಪಟ್ಟಣದ ಎಂ.ಎಂ.ಹಿಲ್ಸ್ ರಸ್ತೆಯಲ್ಲಿ ಮಲಗಿದ ಸ್ಥಿತಿಯಲ್ಲಿ ಭಾನುವಾರ ಸಾವನ್ನಪ್ಪಿದ್ದು ಮೃತದೇಹವನ್ನು ಹನೂರು ಪೋಲೀಸ್ ಠಾಣೆಯ ಎ.ಎಸ್.ಐ ಮಧು ಕುಮಾರ್ ಅವರ ನೇತೃತ್ವದಲ್ಲಿ ಸಿಮ್ಸ್ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು.
ಬೆಳಿಗ್ಗೆಯಿಂದ ಮೃತ ದೇಹದ ವಾರಸುದಾರರಿಗಾಗಿ ಹುಡುಕಾಟ ಆರಂಭಿಸಿದ್ದರು, ತಂಗರಾಜ್ ದೂರದ ಸಂಬಂಧಿ ಪಾಪಮ್ಮ ಮಧ್ಯಾಹ್ನದ ಹೊತ್ತಿಗೆ ಮೃತದೇಹವನ್ನು ಗುರುತುಮಾಡಿದ್ದು ಅಂತ್ಯ ಸಂಸ್ಕಾರ ಮಾಡುವಂತೆ ಸೂಚನೆ ನೀಡಿದ್ದಾರೆ. ಅದರಂತೆ ಕಡು ಬಡವರಾದ ಪಾಪಮ್ಮ ಅವರ ನೇತೃತ್ವದಲ್ಲಿ ರಾತ್ರಿ ೮ ರ ಸಮಯದಲ್ಲಿ ಎ.ಎಸ್.ಐ.ಮಧು ಕುಮಾರ್ ಹಾಗೂ ಹೆಡ್ ಕಾನ್ಸ್ಟೇಬಲ್ ನಂದ ಕುಮಾರ್ ಅವರು ಮುಂದೆ ನಿಂತು ಅಂತ್ಯ ಸಂಸ್ಕಾರ ನೆರವೇರಿಸಿ ಮಾನವೀಯತೆ ಮೆರೆದಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಹನೂರು ಪಟ್ಟಣ ಪೊಲೀಸ್ ಠಾಣೆಯ ಎ ಎಸ್ ಐ ಮಧುಕುಮಾರ್ ಅವರು ಹನೂರು ಪಟ್ಟಣದಲ್ಲಿ ತಂಗರಾಜ್ ಎಂಬ ಭಿಕ್ಷುಕ ಭಾನುವಾರ ಸಾವನ್ನಪ್ಪಿದ್ದ, ವಾರಸುದಾರರನ್ನು ಗುರುತಿಸುವುದು ಹಾಗೂ ಹಳ್ಳ ಕೀಳುವ ಜೆಸಿಬಿ ಸಿಗದ ಕಾರಣ ಅಂತ್ಯಸಂಸ್ಕಾರ ತಡವಾಯಿತು. ಒಟ್ಟಿನಲ್ಲಿ ವಿಧಿ ವಿಧಾನಗಳ ಮೂಲಕ ಅಂತ್ಯ ಸಂಸ್ಕಾರ ನೆರವೇರಿಸಿದೆವು ಎಂದರು.
ರಾಜಕಾರಣಿಗಳು ಪ್ರತಿನಿತ್ಯ ತಮ್ಮ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವ, ವೈಯಕ್ತಿಕ ಪ್ರಚಾರ ಸಂಬಂಧ ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್, ಪೋಸ್ಟರ್, ಬ್ಯಾನರ್ಗಳನ್ನು ಅಳವಡಿಸಿ…
ಕಳೆದ ೨೫ ವರ್ಷಗಳಲ್ಲಿ ಷೇರುಪೇಟೆ ಸೇರಿದಂತೆ ಉಳಿದೆಲ್ಲ ಸ್ಥಿರಾಸ್ತಿಗಳ ಮೇಲಿನ ಹೂಡಿಕೆಗಿಂತ ಚಿನ್ನ ಮತ್ತು ಬೆಳ್ಳಿಯ ಮೇಲಿನ ಹೂಡಿಕೆ ಅತಿ…
ಮೈಸೂರಿನ ಕೆ.ಆರ್. ಆಸ್ಪತ್ರೆಯ ಕಲ್ಲು ಬಿಲ್ಡಿಂಗ್ ಬಳಿ ಕೋತಿಗಳ ಹಾವಳಿ ಮಿತಿ ಮೀರಿದ್ದು, ರೋಗಿಗಳ ಸಂಬಂಧಿಕರು ತರುವ ಊಟ, ತಿಂಡಿ…
ದಕ್ಷಿಣಕಾಶಿ ಎಂದೇ ಪ್ರಖ್ಯಾತವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ದೇಶ ವಿದೇಶಗಳಿಂದ ಭಕ್ತಾದಿಗಳು ಆಗಮಿಸುತ್ತಾರೆ. ಸರ್ಕಾರಿ ರಜಾ ದಿನಗಳಲ್ಲಿ ಭಕ್ತರ ಸಂಖ್ಯೆ…
ನವೀನ್ ಡಿಸೋಜ ಖಾಸಗಿ ಸಹಭಾಗಿತ್ವದಲ್ಲಿ ಆರಂಭಕ್ಕೆ ಸಚಿವ ಸಂಪುಟದಲ್ಲಿ ಒಪ್ಪಿಗೆ; ಟ್ರಾಫಿಕ್ ಕಿರಿಕಿರಿಗೂ ಕಡಿವಾಣ ಮಡಿಕೇರಿ: ನಗರದ ರಾಜಾಸೀಟ್ ಆವರಣದಲ್ಲಿ…
ಮಂಜು ಕೋಟೆ ಕೋಟೆ: ಹಿಮಾಲಯ, ಇನ್ನಿತರ ಪ್ರದೇಶಗಳಿಂದ ವಲಸೆ ಬಂದಿರುವ ಹಕ್ಕಿಗಳು; ಪರಿಸರ ಪ್ರಿಯರಲ್ಲಿ ಸಂತ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿರುವ ಜಲಾಶಯಗಳ…