ಚಾಮರಾಜನಗರ: ನಗರದ ಹೊರವಲಯದಲ್ಲಿರುವ ಸಿಮ್ಸ್ ಆಸ್ಪತ್ರೆಯಲ್ಲಿ ಭಿಕ್ಷುಕನೊಬ್ಬನ ಮೃತದೇಹವನ್ನು ವಾರಸುದಾರರ ಸಮ್ಮುಖದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಿ ಪೊಲೀಸರು ಮಾನವೀಯತೆ ಮೆರೆದಿದ್ದಾರೆ.
ಹನೂರು ಪಟ್ಟಣದಲ್ಲಿ ಪೇಪರ್, ಬಾಟಲ್ ಹಾಗೂ ಇತರೆ ಸಾಮಗ್ರಿಗಳನ್ನು ಹಾಯ್ದು ಕೊಂಡು ಅನಾಥನಂತೆ ಬದುಕು ಸಾಗಿಸುತ್ತಿದ್ದ ತಂಗರಾಜ್ ಎಂಬಾತನೇ ಮೃತ ವ್ಯಕ್ತಿ. ಶನಿವಾರ ರಾತ್ರಿ ಹನೂರು ಪಟ್ಟಣದ ಎಂ.ಎಂ.ಹಿಲ್ಸ್ ರಸ್ತೆಯಲ್ಲಿ ಮಲಗಿದ ಸ್ಥಿತಿಯಲ್ಲಿ ಭಾನುವಾರ ಸಾವನ್ನಪ್ಪಿದ್ದು ಮೃತದೇಹವನ್ನು ಹನೂರು ಪೋಲೀಸ್ ಠಾಣೆಯ ಎ.ಎಸ್.ಐ ಮಧು ಕುಮಾರ್ ಅವರ ನೇತೃತ್ವದಲ್ಲಿ ಸಿಮ್ಸ್ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು.
ಬೆಳಿಗ್ಗೆಯಿಂದ ಮೃತ ದೇಹದ ವಾರಸುದಾರರಿಗಾಗಿ ಹುಡುಕಾಟ ಆರಂಭಿಸಿದ್ದರು, ತಂಗರಾಜ್ ದೂರದ ಸಂಬಂಧಿ ಪಾಪಮ್ಮ ಮಧ್ಯಾಹ್ನದ ಹೊತ್ತಿಗೆ ಮೃತದೇಹವನ್ನು ಗುರುತುಮಾಡಿದ್ದು ಅಂತ್ಯ ಸಂಸ್ಕಾರ ಮಾಡುವಂತೆ ಸೂಚನೆ ನೀಡಿದ್ದಾರೆ. ಅದರಂತೆ ಕಡು ಬಡವರಾದ ಪಾಪಮ್ಮ ಅವರ ನೇತೃತ್ವದಲ್ಲಿ ರಾತ್ರಿ ೮ ರ ಸಮಯದಲ್ಲಿ ಎ.ಎಸ್.ಐ.ಮಧು ಕುಮಾರ್ ಹಾಗೂ ಹೆಡ್ ಕಾನ್ಸ್ಟೇಬಲ್ ನಂದ ಕುಮಾರ್ ಅವರು ಮುಂದೆ ನಿಂತು ಅಂತ್ಯ ಸಂಸ್ಕಾರ ನೆರವೇರಿಸಿ ಮಾನವೀಯತೆ ಮೆರೆದಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಹನೂರು ಪಟ್ಟಣ ಪೊಲೀಸ್ ಠಾಣೆಯ ಎ ಎಸ್ ಐ ಮಧುಕುಮಾರ್ ಅವರು ಹನೂರು ಪಟ್ಟಣದಲ್ಲಿ ತಂಗರಾಜ್ ಎಂಬ ಭಿಕ್ಷುಕ ಭಾನುವಾರ ಸಾವನ್ನಪ್ಪಿದ್ದ, ವಾರಸುದಾರರನ್ನು ಗುರುತಿಸುವುದು ಹಾಗೂ ಹಳ್ಳ ಕೀಳುವ ಜೆಸಿಬಿ ಸಿಗದ ಕಾರಣ ಅಂತ್ಯಸಂಸ್ಕಾರ ತಡವಾಯಿತು. ಒಟ್ಟಿನಲ್ಲಿ ವಿಧಿ ವಿಧಾನಗಳ ಮೂಲಕ ಅಂತ್ಯ ಸಂಸ್ಕಾರ ನೆರವೇರಿಸಿದೆವು ಎಂದರು.
ಇಸ್ಲಾಮಾಬಾದ್ : ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧವನ್ನು ಕೊನೆಗೊಳಿಸುವ ಉದ್ದೇಶದಿಂದ ಇಸ್ಲಾಮಾಬಾದ್ನಲ್ಲಿ ಆಯೋಜಿಸಲಾಗಿರುವ ಐತಿಹಾಸಿಕ ಶಾಂತಿ ಮಾತುಕತೆಗೆ ಇರಾನ್…
– 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 3 ಕೋಟಿ ಡೆಪಾಸಿಟ್ ಪತ್ತೆ ಬೆಳಗಾವಿ : ಇಲ್ಲಿನ ನಗರಾಭಿವೃದ್ಧಿ…
ಕಾಂಗೀರ ಬೋಪಣ್ಣ ವಿರಾಜಪೇಟೆ : ಪುರಸಭೆ ವ್ಯಾಪ್ತಿಗೆ ಒಳಪಡುವ ೨ ಐತಿಹಾಸಿಕ ಕೆರೆಗಳು ಒತ್ತುವರಿಯಾಗಿರುವ ಆರೋಪ ಕೇಳಿ ಬಂದಿದ್ದು, ಈ…
ರೈತರು, ಕೂಲಿ ಕಾರ್ಮಿಕರ ಮಕ್ಕಳೇ ಟಾಪರ್ಸ್ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು ತಾಲ್ಲೂಕಿನ…
ಡಿಎಚ್ಒ ಡಾ.ಪಿ.ಸಿ.ಕುಮಾರಸ್ವಾಮಿ ನೇತೃತ್ವದಲ್ಲಿ ಕ್ಷಯರೋಗ ಮುಕ್ತ ಗ್ರಾಪಂ ಅಭಿಯಾನ ಮೈಸೂರು : ಜಿಲ್ಲೆಯಲ್ಲಿ ಕ್ಷಯ ರೋಗ ಮತ್ತು ಸಾವಿನ ಪ್ರಮಾಣ…
ಭಾರತದ ಜನಗಣತಿ ಕಾಯ್ದೆ ೧೯೪೮ರ ಪ್ರಕಾರ ಈ ಬಾರಿಯ ಜನಗಣತಿ ೨೦೨೭ರ ಕಾರ್ಯವು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಈ ಜನಗಣತಿಯು…