ಜಿಲ್ಲೆಗಳು

ಭಿಕ್ಷುಕನ ಅಂತ್ಯಕ್ರಿಯೆ; ಮಾನವೀಯತೆ ಮೆರೆದ ಪೊಲೀಸರು

ಚಾಮರಾಜನಗರ: ನಗರದ ಹೊರವಲಯದಲ್ಲಿರುವ ಸಿಮ್ಸ್ ಆಸ್ಪತ್ರೆಯಲ್ಲಿ ಭಿಕ್ಷುಕನೊಬ್ಬನ ಮೃತದೇಹವನ್ನು ವಾರಸುದಾರರ ಸಮ್ಮುಖದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಿ ಪೊಲೀಸರು ಮಾನವೀಯತೆ ಮೆರೆದಿದ್ದಾರೆ.

ಹನೂರು ಪಟ್ಟಣದಲ್ಲಿ ಪೇಪರ್, ಬಾಟಲ್ ಹಾಗೂ ಇತರೆ ಸಾಮಗ್ರಿಗಳನ್ನು ಹಾಯ್ದು ಕೊಂಡು ಅನಾಥನಂತೆ ಬದುಕು ಸಾಗಿಸುತ್ತಿದ್ದ ತಂಗರಾಜ್ ಎಂಬಾತನೇ ಮೃತ ವ್ಯಕ್ತಿ. ಶನಿವಾರ ರಾತ್ರಿ ಹನೂರು ಪಟ್ಟಣದ ಎಂ.ಎಂ.ಹಿಲ್ಸ್ ರಸ್ತೆಯಲ್ಲಿ ಮಲಗಿದ ಸ್ಥಿತಿಯಲ್ಲಿ ಭಾನುವಾರ ಸಾವನ್ನಪ್ಪಿದ್ದು ಮೃತದೇಹವನ್ನು ಹನೂರು ಪೋಲೀಸ್ ಠಾಣೆಯ ಎ.ಎಸ್.ಐ ಮಧು ಕುಮಾರ್ ಅವರ ನೇತೃತ್ವದಲ್ಲಿ ಸಿಮ್ಸ್ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು.

ಬೆಳಿಗ್ಗೆಯಿಂದ ಮೃತ ದೇಹದ ವಾರಸುದಾರರಿಗಾಗಿ ಹುಡುಕಾಟ ಆರಂಭಿಸಿದ್ದರು, ತಂಗರಾಜ್ ದೂರದ ಸಂಬಂಧಿ ಪಾಪಮ್ಮ ಮಧ್ಯಾಹ್ನದ ಹೊತ್ತಿಗೆ ಮೃತದೇಹವನ್ನು ಗುರುತುಮಾಡಿದ್ದು ಅಂತ್ಯ ಸಂಸ್ಕಾರ ಮಾಡುವಂತೆ ಸೂಚನೆ ನೀಡಿದ್ದಾರೆ. ಅದರಂತೆ ಕಡು ಬಡವರಾದ ಪಾಪಮ್ಮ ಅವರ ನೇತೃತ್ವದಲ್ಲಿ ರಾತ್ರಿ ೮ ರ ಸಮಯದಲ್ಲಿ ಎ.ಎಸ್.ಐ.ಮಧು ಕುಮಾರ್ ಹಾಗೂ ಹೆಡ್ ಕಾನ್ಸ್ಟೇಬಲ್ ನಂದ ಕುಮಾರ್ ಅವರು ಮುಂದೆ ನಿಂತು ಅಂತ್ಯ ಸಂಸ್ಕಾರ ನೆರವೇರಿಸಿ ಮಾನವೀಯತೆ ಮೆರೆದಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಹನೂರು ಪಟ್ಟಣ ಪೊಲೀಸ್ ಠಾಣೆಯ ಎ ಎಸ್ ಐ ಮಧುಕುಮಾರ್ ಅವರು ಹನೂರು ಪಟ್ಟಣದಲ್ಲಿ ತಂಗರಾಜ್ ಎಂಬ ಭಿಕ್ಷುಕ ಭಾನುವಾರ ಸಾವನ್ನಪ್ಪಿದ್ದ, ವಾರಸುದಾರರನ್ನು ಗುರುತಿಸುವುದು ಹಾಗೂ ಹಳ್ಳ ಕೀಳುವ ಜೆಸಿಬಿ ಸಿಗದ ಕಾರಣ ಅಂತ್ಯಸಂಸ್ಕಾರ ತಡವಾಯಿತು. ಒಟ್ಟಿನಲ್ಲಿ ವಿಧಿ ವಿಧಾನಗಳ ಮೂಲಕ ಅಂತ್ಯ ಸಂಸ್ಕಾರ ನೆರವೇರಿಸಿದೆವು ಎಂದರು.

andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

8 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

8 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

8 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

11 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

11 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

11 hours ago