ಜಿಲ್ಲೆಗಳು

ಭಿಕ್ಷುಕನ ಅಂತ್ಯಕ್ರಿಯೆ; ಮಾನವೀಯತೆ ಮೆರೆದ ಪೊಲೀಸರು

ಚಾಮರಾಜನಗರ: ನಗರದ ಹೊರವಲಯದಲ್ಲಿರುವ ಸಿಮ್ಸ್ ಆಸ್ಪತ್ರೆಯಲ್ಲಿ ಭಿಕ್ಷುಕನೊಬ್ಬನ ಮೃತದೇಹವನ್ನು ವಾರಸುದಾರರ ಸಮ್ಮುಖದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಿ ಪೊಲೀಸರು ಮಾನವೀಯತೆ ಮೆರೆದಿದ್ದಾರೆ.

ಹನೂರು ಪಟ್ಟಣದಲ್ಲಿ ಪೇಪರ್, ಬಾಟಲ್ ಹಾಗೂ ಇತರೆ ಸಾಮಗ್ರಿಗಳನ್ನು ಹಾಯ್ದು ಕೊಂಡು ಅನಾಥನಂತೆ ಬದುಕು ಸಾಗಿಸುತ್ತಿದ್ದ ತಂಗರಾಜ್ ಎಂಬಾತನೇ ಮೃತ ವ್ಯಕ್ತಿ. ಶನಿವಾರ ರಾತ್ರಿ ಹನೂರು ಪಟ್ಟಣದ ಎಂ.ಎಂ.ಹಿಲ್ಸ್ ರಸ್ತೆಯಲ್ಲಿ ಮಲಗಿದ ಸ್ಥಿತಿಯಲ್ಲಿ ಭಾನುವಾರ ಸಾವನ್ನಪ್ಪಿದ್ದು ಮೃತದೇಹವನ್ನು ಹನೂರು ಪೋಲೀಸ್ ಠಾಣೆಯ ಎ.ಎಸ್.ಐ ಮಧು ಕುಮಾರ್ ಅವರ ನೇತೃತ್ವದಲ್ಲಿ ಸಿಮ್ಸ್ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು.

ಬೆಳಿಗ್ಗೆಯಿಂದ ಮೃತ ದೇಹದ ವಾರಸುದಾರರಿಗಾಗಿ ಹುಡುಕಾಟ ಆರಂಭಿಸಿದ್ದರು, ತಂಗರಾಜ್ ದೂರದ ಸಂಬಂಧಿ ಪಾಪಮ್ಮ ಮಧ್ಯಾಹ್ನದ ಹೊತ್ತಿಗೆ ಮೃತದೇಹವನ್ನು ಗುರುತುಮಾಡಿದ್ದು ಅಂತ್ಯ ಸಂಸ್ಕಾರ ಮಾಡುವಂತೆ ಸೂಚನೆ ನೀಡಿದ್ದಾರೆ. ಅದರಂತೆ ಕಡು ಬಡವರಾದ ಪಾಪಮ್ಮ ಅವರ ನೇತೃತ್ವದಲ್ಲಿ ರಾತ್ರಿ ೮ ರ ಸಮಯದಲ್ಲಿ ಎ.ಎಸ್.ಐ.ಮಧು ಕುಮಾರ್ ಹಾಗೂ ಹೆಡ್ ಕಾನ್ಸ್ಟೇಬಲ್ ನಂದ ಕುಮಾರ್ ಅವರು ಮುಂದೆ ನಿಂತು ಅಂತ್ಯ ಸಂಸ್ಕಾರ ನೆರವೇರಿಸಿ ಮಾನವೀಯತೆ ಮೆರೆದಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಹನೂರು ಪಟ್ಟಣ ಪೊಲೀಸ್ ಠಾಣೆಯ ಎ ಎಸ್ ಐ ಮಧುಕುಮಾರ್ ಅವರು ಹನೂರು ಪಟ್ಟಣದಲ್ಲಿ ತಂಗರಾಜ್ ಎಂಬ ಭಿಕ್ಷುಕ ಭಾನುವಾರ ಸಾವನ್ನಪ್ಪಿದ್ದ, ವಾರಸುದಾರರನ್ನು ಗುರುತಿಸುವುದು ಹಾಗೂ ಹಳ್ಳ ಕೀಳುವ ಜೆಸಿಬಿ ಸಿಗದ ಕಾರಣ ಅಂತ್ಯಸಂಸ್ಕಾರ ತಡವಾಯಿತು. ಒಟ್ಟಿನಲ್ಲಿ ವಿಧಿ ವಿಧಾನಗಳ ಮೂಲಕ ಅಂತ್ಯ ಸಂಸ್ಕಾರ ನೆರವೇರಿಸಿದೆವು ಎಂದರು.

andolanait

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

5 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

5 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

5 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

5 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

5 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

5 hours ago