ಚಾಮರಾಜನಗರ: ನಗರದ ಹೊರವಲಯದಲ್ಲಿರುವ ಸಿಮ್ಸ್ ಆಸ್ಪತ್ರೆಯಲ್ಲಿ ಭಿಕ್ಷುಕನೊಬ್ಬನ ಮೃತದೇಹವನ್ನು ವಾರಸುದಾರರ ಸಮ್ಮುಖದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಿ ಪೊಲೀಸರು ಮಾನವೀಯತೆ ಮೆರೆದಿದ್ದಾರೆ.
ಹನೂರು ಪಟ್ಟಣದಲ್ಲಿ ಪೇಪರ್, ಬಾಟಲ್ ಹಾಗೂ ಇತರೆ ಸಾಮಗ್ರಿಗಳನ್ನು ಹಾಯ್ದು ಕೊಂಡು ಅನಾಥನಂತೆ ಬದುಕು ಸಾಗಿಸುತ್ತಿದ್ದ ತಂಗರಾಜ್ ಎಂಬಾತನೇ ಮೃತ ವ್ಯಕ್ತಿ. ಶನಿವಾರ ರಾತ್ರಿ ಹನೂರು ಪಟ್ಟಣದ ಎಂ.ಎಂ.ಹಿಲ್ಸ್ ರಸ್ತೆಯಲ್ಲಿ ಮಲಗಿದ ಸ್ಥಿತಿಯಲ್ಲಿ ಭಾನುವಾರ ಸಾವನ್ನಪ್ಪಿದ್ದು ಮೃತದೇಹವನ್ನು ಹನೂರು ಪೋಲೀಸ್ ಠಾಣೆಯ ಎ.ಎಸ್.ಐ ಮಧು ಕುಮಾರ್ ಅವರ ನೇತೃತ್ವದಲ್ಲಿ ಸಿಮ್ಸ್ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು.
ಬೆಳಿಗ್ಗೆಯಿಂದ ಮೃತ ದೇಹದ ವಾರಸುದಾರರಿಗಾಗಿ ಹುಡುಕಾಟ ಆರಂಭಿಸಿದ್ದರು, ತಂಗರಾಜ್ ದೂರದ ಸಂಬಂಧಿ ಪಾಪಮ್ಮ ಮಧ್ಯಾಹ್ನದ ಹೊತ್ತಿಗೆ ಮೃತದೇಹವನ್ನು ಗುರುತುಮಾಡಿದ್ದು ಅಂತ್ಯ ಸಂಸ್ಕಾರ ಮಾಡುವಂತೆ ಸೂಚನೆ ನೀಡಿದ್ದಾರೆ. ಅದರಂತೆ ಕಡು ಬಡವರಾದ ಪಾಪಮ್ಮ ಅವರ ನೇತೃತ್ವದಲ್ಲಿ ರಾತ್ರಿ ೮ ರ ಸಮಯದಲ್ಲಿ ಎ.ಎಸ್.ಐ.ಮಧು ಕುಮಾರ್ ಹಾಗೂ ಹೆಡ್ ಕಾನ್ಸ್ಟೇಬಲ್ ನಂದ ಕುಮಾರ್ ಅವರು ಮುಂದೆ ನಿಂತು ಅಂತ್ಯ ಸಂಸ್ಕಾರ ನೆರವೇರಿಸಿ ಮಾನವೀಯತೆ ಮೆರೆದಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಹನೂರು ಪಟ್ಟಣ ಪೊಲೀಸ್ ಠಾಣೆಯ ಎ ಎಸ್ ಐ ಮಧುಕುಮಾರ್ ಅವರು ಹನೂರು ಪಟ್ಟಣದಲ್ಲಿ ತಂಗರಾಜ್ ಎಂಬ ಭಿಕ್ಷುಕ ಭಾನುವಾರ ಸಾವನ್ನಪ್ಪಿದ್ದ, ವಾರಸುದಾರರನ್ನು ಗುರುತಿಸುವುದು ಹಾಗೂ ಹಳ್ಳ ಕೀಳುವ ಜೆಸಿಬಿ ಸಿಗದ ಕಾರಣ ಅಂತ್ಯಸಂಸ್ಕಾರ ತಡವಾಯಿತು. ಒಟ್ಟಿನಲ್ಲಿ ವಿಧಿ ವಿಧಾನಗಳ ಮೂಲಕ ಅಂತ್ಯ ಸಂಸ್ಕಾರ ನೆರವೇರಿಸಿದೆವು ಎಂದರು.
ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…
ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…
ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…
ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ…
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…
ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…