ಜಿಲ್ಲೆಗಳು

ಸಮರ್ಪಕ ವಿದ್ಯುತ್ ಪೂರೖೆಕೆಗೆ ಒತ್ತಾಯಿಸಿ ಗ್ರಾಮಸ್ಥರ ಪ್ರತಿಭಟನೆ

ಹನೂರು: ಸಮರ್ಪಕ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿರುವ ಘಟನೆ ಹನೂರು ತಾಲ್ಲೂಕಿನ ಜಡೇಗೌಡನದೊಡ್ಡಿ ಗ್ರಾಮದಲ್ಲಿ ಮಂಗಳವಾರ ಜರುಗಿದೆ.

ಪಿಜಿಪಾಳ್ಯ ಗ್ರಾಪಂ ವ್ಯಾಪ್ತಿಯ ಜಡೇಗೌಡನದೊಡ್ಡಿ ಗ್ರಾಮದಲ್ಲಿ ಟಿಸಿ ಗೆ ಅಳವಡಿಸಿರುವ ಕೇಬಲ್ ದುರಸ್ತಿಗೊಂಡು 5ತಿಂಗಳು ಕಳೆದಿದ್ದರೂ ಸಹ ಇದುವರೆಗೂ ಸಮಸ್ಯೆ ಬಗೆ ಹರಿಸದೇ ಇರುವುದರಿಂದ ಗ್ರಾಮಸ್ಥರು ಕಗ್ಗತ್ತಲಲ್ಲಿ ಜೀವನ ನಡೆಸುವಂತಹ ಪರಿಸ್ಥಿತಿ ಬಂದೊದಗಿದೆ.

ಗ್ರಾಮದಲ್ಲಿ 45ಕ್ಕೂ ಹೆಚ್ಚು ಕುಟುಂಬಗಳಿದ್ದು ಸುಮಾರು 170 ಜನಸಂಖ್ಯೆಯನ್ನು ಹೊಂದಿದೆ.ಗ್ರಾಮವು ಮಲೆಮಹದೇಶ್ವರ ವನ್ಯಧಾಮದ  ಕಾಡಂಚಿನಲ್ಲಿರುವುದರಿಂದ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದೆ. ಸೋಮವಾರ ತಡರಾತ್ರಿ ಆನೆಗಳ ಹಿಂಡು ಗ್ರಾಮಕ್ಕೆ ಬಂದು ಅಪಾರ ಪ್ರಮಾಣದ ಬೆಳೆ ನಾಶಪಡಿಸಿವೆ ಅಲ್ಲದೆ ಸೋಲಾರ್ ತಂತಿ ಮುರಿದು ಹಾಕಿದ್ದು ಲಕ್ಷಾಂತರ ರೂ ನಷ್ಟವಾಗಿದೆ ಎಂದು ರುದ್ರೇಗೌಡ  ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಮದ ಮಲ್ಲಮ್ಮ ಮಾತನಾಡಿ ನಮ್ಮ ಹಾಡಿಯಲ್ಲಿ ಕುಡಿಯುವ ನೀರಿಗೂ ಸಹ ತೀವ್ರ ತೊಂದರೆಯಾಗಿದೆ. ಗಾಳಿ ಮಳೆ ಬೀಳುವ ಸಂದರ್ಭದಲ್ಲಿ ವಿದ್ಯುತ್ ಇಲ್ಲದೆ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ.ವಿದ್ಯುತ್ ಇಲ್ಲದೇ ಇರುವುದರಿಂದ ಮೊಬೈಲ್ ಚಾರ್ಜ್ ನ್ನು ಸಹ ಮಾಡಿಕೊಳ್ಳಲು ಸಾಧ್ಯವಾಗದೆ ಪರಿತಪಿಸುವಂತಾಗಿದೆ, ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೂ ಸಹ ತೊಂದರೆಯಾಗಿದ್ದು ಈ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದ್ದರೂ ಸಹ ಯಾವುದೇ ಪ್ರಯೋಜನವಿಲ್ಲ ಈ ಹಿನ್ನೆಲೆ ಗ್ರಾಮದಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದಾಗಿ ಆಂದೋಲನ ಪತ್ರಿಕೆಗೆ ತಿಳಿಸಿದ್ದಾರೆ .

ಜಡೇಗೌಡನದೊಡ್ಡಿ ಗ್ರಾಮದಲ್ಲಿ ಕೇಬಲ್ ದುರಸ್ತಿಗೊಂಡಿರುವ ಬಗ್ಗೆ ಕಿರಿಯ ಅಭಿಯಂತರರು ನನ್ನ ಗಮನಕ್ಕೆ ತಂದಿರಲಿಲ್ಲ ಇದೀಗ ನೀವು (ಮಾಧ್ಯಮದವರು)ಗಮನಕ್ಕೆ ತಂದಿದ್ದು ಈ ದಿನವೇ  ಸಮಸ್ಯೆಯನ್ನು ಬಗೆಹರಿಸುತ್ತೇನೆ.

ಶಂಕರ್ .ಎಇಇ ಸೆಸ್ಕಾಂ  ಹನೂರು ಉಪ  ವಿಭಾಗ

 

andolanait

Recent Posts

ಓದುಗರ ಪತ್ರ: ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಸರಗೂರು ತಾಲ್ಲೂಕಿನ ಮುಳ್ಳೂರು, ಚಾಮಲಾಪುರ, ಕುಂದೂರು, ಕಲ್ಲಂಬಾಳು, ನಂಜೀಪುರ, ಕಟ್ಟೆಹುಣಸೂರು ಈ ಗ್ರಾಮಗಳ ಮಾರ್ಗವಾಗಿ ಹೆಚ್ಚಿನ ಸರ್ಕಾರಿ ಬಸ್ಸುಗಳ ಸಂಚಾರವಿಲ್ಲದೆ…

1 min ago

ದಿ ಕೇರಳ ಸ್ಟೋರಿ-2 : ಸತ್ಯ V/S ಅಜೆಂಡಾ..!

ವಿವಾದಾಸ್ಪದ ‘ದಿ ಕೇರಳ ಸ್ಟೋರಿ-೨ ಗೋಸ್ ಬಿಯಾಂಡ್’ ಚಲನಚಿತ್ರ ಪ್ರದರ್ಶನಕ್ಕೆ ಕೇರಳದ ಹೈಕೋರ್ಟ್‌ನ ವಿಭಾಗೀಯ ಪೀಠ ಶುಕ್ರವಾರ ಹಸಿರು ನಿಶಾನೆ…

3 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕಾವೇರುತ್ತಿರುವ ತಮಿಳುನಾಡು ವಿಧಾನಸಭೆ ಚುನಾವಣೆ

ತಮಿಳುನಾಡಿನಲ್ಲಿ ಬೇಸಿಗೆಯ ಸುಡು ಬಿಸಿಲಿಸಿನ ನಡುವೆ ವಿಧಾನಸಭೆಯ ಚುನಾವಣೆಯ ಕಾವು ದಿನೇ ದಿನೇ ಏರುತ್ತಿದೆ. ಚುನಾವಣೆಯು ಏಪ್ರಿಲ್ ಕೊನೆಯ ವಾರದೊಳಗೆ…

10 mins ago

ರಂಜಾನ್ ಅಂದರೆ ಹಬ್ಬವಲ್ಲ ; ಹಬ್ಬದ ಮೊದಲಿನ ಉಪವಾಸ

ಖದೀಜಾ ಉಮೈರಾ ರಂಜಾನಿಗೆ ಒಂದು ಹಬ್ಬದ ಗುಣವಿದೆ. ಹಾಗಾಗಿ ನಮಗೆಲ್ಲಾ ಅದು ಹಬ್ಬದಂತೆ ಭಾಸವಾಗುವುದು ಸಹಜ. ಇದು ಇಸ್ಲಾಮಿಕ್ ಕ್ಯಾಲೆಂಡರಿನ…

16 mins ago

ಡಾ.ಬೃಂದಾ ಸುಹಾಸ್ ಸೈಕ್ಲಿಂಗ್ ಧ್ಯಾನ

ಅಕ್ಷತಾ ಸೈಕ್ಲಿಂಗ್‌ನಲ್ಲಿ ‘ಸೂಪರ್ ರಾಂಡೋನಿಯರ್’ ಬಿರುದಾಂಕಿತ ಮೈಸೂರಿನ ಮೊದಲ ಮಹಿಳೆ ಡಾ.ಬೃಂದಾ ಗೋಧಿ. ಡಾ.ಬೃಂದಾ ಮೈಸೂರಿನ ಜೆಎಸ್‌ಎಸ್ ದಂತ ವೈದ್ಯಕೀಯ…

20 mins ago

ಕ್ಷೀಣವಾಗುತ್ತಿರುವ ಟ್ರಿಣ್ ಟ್ರಿಣ್ ಸದ್ದು

ಚಂದ್ರಶೇಖರ್ ಮೂರ್ತಿ ಕೆ.ಎಸ್. ಮೈಸೂರಿಗರಿಗೆ ಬೇಡವಾದರೇ ಈ ಹಸಿರು ಸುಂದರಿಯರು ಸಾಂಸ್ಕ ತಿಕ ಪರಂಪರೆ ಹೊಂದಿರುವ ಮೈಸೂರಿ ನಲ್ಲಿ ಪರಿಸರ…

25 mins ago