ಹನೂರು: ಸಮರ್ಪಕ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿರುವ ಘಟನೆ ಹನೂರು ತಾಲ್ಲೂಕಿನ ಜಡೇಗೌಡನದೊಡ್ಡಿ ಗ್ರಾಮದಲ್ಲಿ ಮಂಗಳವಾರ ಜರುಗಿದೆ.
ಪಿಜಿಪಾಳ್ಯ ಗ್ರಾಪಂ ವ್ಯಾಪ್ತಿಯ ಜಡೇಗೌಡನದೊಡ್ಡಿ ಗ್ರಾಮದಲ್ಲಿ ಟಿಸಿ ಗೆ ಅಳವಡಿಸಿರುವ ಕೇಬಲ್ ದುರಸ್ತಿಗೊಂಡು 5ತಿಂಗಳು ಕಳೆದಿದ್ದರೂ ಸಹ ಇದುವರೆಗೂ ಸಮಸ್ಯೆ ಬಗೆ ಹರಿಸದೇ ಇರುವುದರಿಂದ ಗ್ರಾಮಸ್ಥರು ಕಗ್ಗತ್ತಲಲ್ಲಿ ಜೀವನ ನಡೆಸುವಂತಹ ಪರಿಸ್ಥಿತಿ ಬಂದೊದಗಿದೆ.
ಗ್ರಾಮದಲ್ಲಿ 45ಕ್ಕೂ ಹೆಚ್ಚು ಕುಟುಂಬಗಳಿದ್ದು ಸುಮಾರು 170 ಜನಸಂಖ್ಯೆಯನ್ನು ಹೊಂದಿದೆ.ಗ್ರಾಮವು ಮಲೆಮಹದೇಶ್ವರ ವನ್ಯಧಾಮದ ಕಾಡಂಚಿನಲ್ಲಿರುವುದರಿಂದ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದೆ. ಸೋಮವಾರ ತಡರಾತ್ರಿ ಆನೆಗಳ ಹಿಂಡು ಗ್ರಾಮಕ್ಕೆ ಬಂದು ಅಪಾರ ಪ್ರಮಾಣದ ಬೆಳೆ ನಾಶಪಡಿಸಿವೆ ಅಲ್ಲದೆ ಸೋಲಾರ್ ತಂತಿ ಮುರಿದು ಹಾಕಿದ್ದು ಲಕ್ಷಾಂತರ ರೂ ನಷ್ಟವಾಗಿದೆ ಎಂದು ರುದ್ರೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗ್ರಾಮದ ಮಲ್ಲಮ್ಮ ಮಾತನಾಡಿ ನಮ್ಮ ಹಾಡಿಯಲ್ಲಿ ಕುಡಿಯುವ ನೀರಿಗೂ ಸಹ ತೀವ್ರ ತೊಂದರೆಯಾಗಿದೆ. ಗಾಳಿ ಮಳೆ ಬೀಳುವ ಸಂದರ್ಭದಲ್ಲಿ ವಿದ್ಯುತ್ ಇಲ್ಲದೆ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ.ವಿದ್ಯುತ್ ಇಲ್ಲದೇ ಇರುವುದರಿಂದ ಮೊಬೈಲ್ ಚಾರ್ಜ್ ನ್ನು ಸಹ ಮಾಡಿಕೊಳ್ಳಲು ಸಾಧ್ಯವಾಗದೆ ಪರಿತಪಿಸುವಂತಾಗಿದೆ, ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೂ ಸಹ ತೊಂದರೆಯಾಗಿದ್ದು ಈ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದ್ದರೂ ಸಹ ಯಾವುದೇ ಪ್ರಯೋಜನವಿಲ್ಲ ಈ ಹಿನ್ನೆಲೆ ಗ್ರಾಮದಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದಾಗಿ ಆಂದೋಲನ ಪತ್ರಿಕೆಗೆ ತಿಳಿಸಿದ್ದಾರೆ .
ಜಡೇಗೌಡನದೊಡ್ಡಿ ಗ್ರಾಮದಲ್ಲಿ ಕೇಬಲ್ ದುರಸ್ತಿಗೊಂಡಿರುವ ಬಗ್ಗೆ ಕಿರಿಯ ಅಭಿಯಂತರರು ನನ್ನ ಗಮನಕ್ಕೆ ತಂದಿರಲಿಲ್ಲ ಇದೀಗ ನೀವು (ಮಾಧ್ಯಮದವರು)ಗಮನಕ್ಕೆ ತಂದಿದ್ದು ಈ ದಿನವೇ ಸಮಸ್ಯೆಯನ್ನು ಬಗೆಹರಿಸುತ್ತೇನೆ.
ಶಂಕರ್ .ಎಇಇ ಸೆಸ್ಕಾಂ ಹನೂರು ಉಪ ವಿಭಾಗ
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…