ಜಿಲ್ಲೆಗಳು

ಸಮರ್ಪಕ ವಿದ್ಯುತ್ ಪೂರೖೆಕೆಗೆ ಒತ್ತಾಯಿಸಿ ಗ್ರಾಮಸ್ಥರ ಪ್ರತಿಭಟನೆ

ಹನೂರು: ಸಮರ್ಪಕ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿರುವ ಘಟನೆ ಹನೂರು ತಾಲ್ಲೂಕಿನ ಜಡೇಗೌಡನದೊಡ್ಡಿ ಗ್ರಾಮದಲ್ಲಿ ಮಂಗಳವಾರ ಜರುಗಿದೆ.

ಪಿಜಿಪಾಳ್ಯ ಗ್ರಾಪಂ ವ್ಯಾಪ್ತಿಯ ಜಡೇಗೌಡನದೊಡ್ಡಿ ಗ್ರಾಮದಲ್ಲಿ ಟಿಸಿ ಗೆ ಅಳವಡಿಸಿರುವ ಕೇಬಲ್ ದುರಸ್ತಿಗೊಂಡು 5ತಿಂಗಳು ಕಳೆದಿದ್ದರೂ ಸಹ ಇದುವರೆಗೂ ಸಮಸ್ಯೆ ಬಗೆ ಹರಿಸದೇ ಇರುವುದರಿಂದ ಗ್ರಾಮಸ್ಥರು ಕಗ್ಗತ್ತಲಲ್ಲಿ ಜೀವನ ನಡೆಸುವಂತಹ ಪರಿಸ್ಥಿತಿ ಬಂದೊದಗಿದೆ.

ಗ್ರಾಮದಲ್ಲಿ 45ಕ್ಕೂ ಹೆಚ್ಚು ಕುಟುಂಬಗಳಿದ್ದು ಸುಮಾರು 170 ಜನಸಂಖ್ಯೆಯನ್ನು ಹೊಂದಿದೆ.ಗ್ರಾಮವು ಮಲೆಮಹದೇಶ್ವರ ವನ್ಯಧಾಮದ  ಕಾಡಂಚಿನಲ್ಲಿರುವುದರಿಂದ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದೆ. ಸೋಮವಾರ ತಡರಾತ್ರಿ ಆನೆಗಳ ಹಿಂಡು ಗ್ರಾಮಕ್ಕೆ ಬಂದು ಅಪಾರ ಪ್ರಮಾಣದ ಬೆಳೆ ನಾಶಪಡಿಸಿವೆ ಅಲ್ಲದೆ ಸೋಲಾರ್ ತಂತಿ ಮುರಿದು ಹಾಕಿದ್ದು ಲಕ್ಷಾಂತರ ರೂ ನಷ್ಟವಾಗಿದೆ ಎಂದು ರುದ್ರೇಗೌಡ  ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಮದ ಮಲ್ಲಮ್ಮ ಮಾತನಾಡಿ ನಮ್ಮ ಹಾಡಿಯಲ್ಲಿ ಕುಡಿಯುವ ನೀರಿಗೂ ಸಹ ತೀವ್ರ ತೊಂದರೆಯಾಗಿದೆ. ಗಾಳಿ ಮಳೆ ಬೀಳುವ ಸಂದರ್ಭದಲ್ಲಿ ವಿದ್ಯುತ್ ಇಲ್ಲದೆ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ.ವಿದ್ಯುತ್ ಇಲ್ಲದೇ ಇರುವುದರಿಂದ ಮೊಬೈಲ್ ಚಾರ್ಜ್ ನ್ನು ಸಹ ಮಾಡಿಕೊಳ್ಳಲು ಸಾಧ್ಯವಾಗದೆ ಪರಿತಪಿಸುವಂತಾಗಿದೆ, ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೂ ಸಹ ತೊಂದರೆಯಾಗಿದ್ದು ಈ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದ್ದರೂ ಸಹ ಯಾವುದೇ ಪ್ರಯೋಜನವಿಲ್ಲ ಈ ಹಿನ್ನೆಲೆ ಗ್ರಾಮದಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದಾಗಿ ಆಂದೋಲನ ಪತ್ರಿಕೆಗೆ ತಿಳಿಸಿದ್ದಾರೆ .

ಜಡೇಗೌಡನದೊಡ್ಡಿ ಗ್ರಾಮದಲ್ಲಿ ಕೇಬಲ್ ದುರಸ್ತಿಗೊಂಡಿರುವ ಬಗ್ಗೆ ಕಿರಿಯ ಅಭಿಯಂತರರು ನನ್ನ ಗಮನಕ್ಕೆ ತಂದಿರಲಿಲ್ಲ ಇದೀಗ ನೀವು (ಮಾಧ್ಯಮದವರು)ಗಮನಕ್ಕೆ ತಂದಿದ್ದು ಈ ದಿನವೇ  ಸಮಸ್ಯೆಯನ್ನು ಬಗೆಹರಿಸುತ್ತೇನೆ.

ಶಂಕರ್ .ಎಇಇ ಸೆಸ್ಕಾಂ  ಹನೂರು ಉಪ  ವಿಭಾಗ

 

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

4 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

4 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

4 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

4 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

5 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

5 hours ago