ಜಿಲ್ಲೆಗಳು

ಆದಿವಾಸಿಗಳ ಆರೋಗ್ಯ ಕಾಳಜಿಗೆ ಸಿಮ್ಸ್​​ನಲ್ಲಿ ಪ್ರತ್ಯೇಕ ಸೆಲ್ ; ಚಾ.ನಗರದಲ್ಲಿ ಪ್ರಥಮ ಬಾರಿಗೆ ಪ್ರಯೋಗ

ಚಾಮರಾಜನಗರ: ಆದಿವಾಸಿಗಳು ಆಸ್ಪತ್ರೆಗೆ ಬಂದ ವೇಳೆ ಅವರಿಗೆ ಸೂಕ್ತ ಮಾರ್ಗದರ್ಶನ, ವಿಶೇಷ ಕಾಳಜಿ ವಹಿಸಲು ಕೋಶವೊಂದು (ಸೆಲ್) ಸಿಮ್ಸ್​​ನಲ್ಲಿ ಸ್ಥಾಪನೆಯಾಗುತ್ತಿದೆ. ಈ‌ ರೀತಿಯ ಪ್ರಯತ್ನ ರಾಜ್ಯದಲ್ಲಿ ಇದೇ ಮೊದಲಾಗಿದೆ.

ಸರ್ಕಾರ ಈಗಾಗಲೇ ಈ ಘಟಕ ಸ್ಥಾಪನೆಗೆ 12 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿದೆ. “ಆರೋಗ್ಯ ಮಿತ್ರ” ಎಂಬ ಬುಡಕಟ್ಟು ಜನಾಂಗದ ವ್ಯಕ್ತಿಯೋರ್ವ ಘಟಕದಲ್ಲಿದ್ದು, ಆದಿವಾಸಿಗಳು ಆಸ್ಪತ್ರೆಗೆ ಬಂದ ವೇಳೆ ಅವರಿಗೆ ಮಾರ್ಗದರ್ಶನ, ಆರೈಕೆ, ಸಂಬಂಧಪಟ್ಟ ವೈದ್ಯರ ಬಳಿಗೆ ಕರೆದೊಯ್ಯುವ ಕೆಲಸ ಮಾಡಲಿದ್ದಾನೆ ನೌಕರಘಟಕ ಸ್ಥಾಪನೆಯಿಂದಾಗಿ‌‌ ಆದಿವಾಸಿಗಳ ಆರೋಗ್ಯದ ಮೇಲೆ ಸಂಶೋಧನೆ ನಡೆಸುವುದು, ಅವರಿಗೆ ಹೆಚ್ಚು ಬಾಧಿಸುವ ಕಾಯಿಲೆಗಳು, ಹೆಚ್ಚು ಆಸ್ಪತ್ರೆಗೆ ಬರುವ ಸಂದರ್ಭಗಳು ಮತ್ತು ಅವರ ಆರೋಗ್ಯದ ಬಗ್ಗೆ ಸಮಗ್ರ ಅಧ್ಯಯನ ಮಾಡಲು ಈ‌ ಕೋಶ ಸಹಕಾರಿಯಾಗಲಿದೆ ಎಂದು ಡಾ.ಸಂಜೀವ್ ಅವರು ಆಂದೋಲನಕ್ಕೆ ಮಾಹಿತಿ ನೀಡಿದರು.

andolanait

Recent Posts

ವಿದ್ಯಾರ್ಥಿಗಳ ಶಾಲಾ ಪ್ರವಾಸದಲ್ಲಿ ಸುರಕ್ಷತೆಗೆ ಆದ್ಯತೆ : ಸಚಿವ ಮಧು ಬಂಗಾರಪ್ಪ ಭರವಸೆ

ಬೆಂಗಳೂರು : ಶಾಲಾ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುವ ಮುನ್ನ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…

5 mins ago

AUS vs ZIM : ಬಲಿಷ್ಠ ಆಸ್ಟ್ರೇಲಿಯಾಕ್ಕೆ ಸೋಲಿನ ರುಚಿ ತೋರಿಸಿದ ಜಿಂಬಾಬ್ವೆ:

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಗ್ರೂಪ್ ಬಿ ಪಂದ್ಯದಲ್ಲಿ ಜಿಂಬಾಬ್ವೆ ತಂಡವು ಆಸ್ಟ್ರೇಲಿಯಾದ ವಿರುದ್ಧ ಅದ್ಭುತ…

18 mins ago

ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ಮಗಳು !

ತುಮಕೂರು : ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ‌ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ…

1 hour ago

ಆರೋಗ್ಯ ಇಲಾಖೆಯ ಅಧಿಕಾರಿ ಅಬಕಾರಿ ಡಿಸಿಯಾಗಿ ನಿಯೋಜನೆ : ನಿಯಮ ಉಲ್ಲಂಘನೆ ಆರೋಪ

ಮಂಡ್ಯ : ಇತ್ತೀಚೆಗೆ ಹಲವು ಇಲಾಖಾ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಸರ್ಕಾರ ಆದೇಶ ಹೊರಡಿಸಿದ್ದು, ಅದರಲ್ಲಿ ಮಂಡ್ಯ ಜಿಲ್ಲಾ ಆರೋಗ್ಯ…

2 hours ago

ಸಿದ್ದರಾಮಯ್ಯ ಅವರೇ ಐದು ವರ್ಷ ಮುಂದುವರಿಯುವ ಆಸೆ ಇದೆ : ಶಾಸಕ ಕೆ.ಹರೀಶ್‌ ಗೌಡ

ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ…

3 hours ago

ಭೀಕರ ಸರಣಿ ಅಪಘಾತ : ಬೆಂಗಳೂರಿನ 6 ವಿದ್ಯಾರ್ಥಿಗಳು ಸೇರಿ 7 ಮಂದಿ ಸಾವು

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿ (NH-648) ಮತ್ತು…

3 hours ago