ಚಾಮರಾಜನಗರ: ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ ಅಂಕಶೆಟ್ಟಿಪುರದಲ್ಲಿ ಮನೆಗಳು ಹಾನಿಯಾಗಿದ್ದು, ಗ್ರಾಮಕ್ಕೆ ಬಿಜೆಪಿ ರೈತ ಮುಖಂಡ ಮಲ್ಲೇಶ್ ಅವರು ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು.
ಮಳೆಯಿಂದ ಮನೆಗಳಲ್ಲಿ ನೀರು ತುಂಬಿಕೊoಡಿದ್ದು ಗ್ರಾಮಸ್ಥರು ಪರದಾಡುವಂತಾಗಿದೆ. ಮನೆಯ ಒಳಗಡೆ ವಾಸವಿರಲು ಭಯ ಪಡುತ್ತಿದ್ದು ಕನಿಷ್ಠ ಅಡುಗೆ ಮಾಡಿಕೊಂಡು ಊಟ ಮಾಡಲು ಸಹ ಸಾಧ್ಯವಿಲ್ಲದಂತಹ ಪರಿಸ್ಥಿತಿ ಉಂಟಾಗಿದೆ. ಈ ಎಲ್ಲವನ್ನು ವೀಕ್ಷಿಸಿದರು.
ಮನೆ ಹಾಗೂ ಗೋಡೆ ಕುಸಿತಗೊಂಡು ತೊಂದರೆಗೆ ಒಳಗಾದ ಗ್ರಾಮಸ್ಥರನ್ನು ಭೇಟಿ ಮಾಡಿ ಅವರಿಗೆ ತಲಾ ೫ ಸಾವಿರ, ೧೦ ಸಂತ್ರಸ್ತರಿಗೆ ೫೦ ಸಾವಿರ ರೂ. ನೆರವು ನೀಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಶನಿವಾರ ನಗರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಸೋಮಣ್ಣ ಆಗಮಿಸಲಿದ್ದಾರೆ. ಅವರೊಡನೆ ಈ ಸಂಬoಧ ಚರ್ಚಿಸಿ ಪರಿಹಾರ ದೊರಕಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ಸೋಮಣ್ಣ, ಉಮೇಶ್, ಮಹಾದೇವಸ್ವಾಮಿ, ಶಿವಣ್ಣ, ಕೊತ್ತಲವಾಡಿ ಕುಮಾರ್, ಅರಕಲವಾಡಿ ಮಹೇಶ್, ಕಟ್ನವಾಡಿ ಸುಭಾಷ್ ಪಟೇಲ್ ಇತರರಿದ್ದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…