ಜಿಲ್ಲೆಗಳು

ಹುಲಿ ಯೋಜನೆ ಘೋಷಣೆ ಮಾಡುವುದರಿಂದ ನಮ್ಮ ಮೂಲಭೂತ ಸೌಲಭ್ಯ ‍‍& ಹಕ್ಕುಗಳ ಮೇಲೆ ತೊಂದರೆಯಾಗುತ್ತದೆ : ಡಾ.ಮಾದೇಗೌಡ

ಚಾಮರಾಜನಗರ : ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿಂದು ಬುಡಕಟ್ಟು ಸಮುದಾಯದ ಜನರು ಸಮಾವೇಶಗೊಂಡು ಆದಿವಾಸಿಗಳ ದಿನಾಚರಣೆ ಕಾರ್ಯಕ್ರಮವನ್ನು ಬಹಳ ಸಂಭ್ರಮದಿಂದ ಆಚರಿಸಿದರು.

ಜಿಲ್ಲಾ ಬುಡಕಟ್ಟು ಗಿರಿಜನ ಅಭಿವೃದ್ಧಿ ಸಂಘದಿಂದ  ನಡೆದ ಅಂತಾರಾಷ್ಟ್ರೀಯ ಆದಿವಾಸಿ ಬುಡಕಟ್ಟು ಸಮುದಾಯದ ಜನರು ಸಮಾವೇಶಗೊಂಡು ತಮ್ಮ ಆದಿವಾಸಿ ಸಂಪ್ರದಾಯದಂತೆ ತಾಳಕ್ಕೆ ಹೆಜ್ಜೆ ಹಾಕಿ ಸಂಭ್ರಮಿಸಿದರು.

 

ಗಿರಿಜನರ ಅಂತಾರಾಷ್ಟ್ರೀಯ ದಿನಾಚರಣೆ ಕುರಿತು ಮಾತನಾಡಿದ ಸಂಘದ ಅಧ್ಯಕ್ಷ ಡಾ.ಮಾದೇಗೌಡ 28ನೇ ವರ್ಷದ ಆದಿವಾಸಿ ಗಳ ದಿನಾಚರಣೆ ಪ್ರಪಂಚದಾದ್ಯಂತ ಇರುವ ಆದಿವಾಸಿಗಳನ್ನು ಗುರುತಿಸಿ ಅವರ ಹಕ್ಕುಗಳಿಗೆ ಬೆಲೆ ಕೊಡಬೇಕು ಮತ್ತು ಸಂಸ್ಕೃತಿಯನ್ನು ಕಾಪಾಡುವ ನಿಟ್ಟಿನಲ್ಲಿ ಮುಲಭುತ ಸೌಲಭ್ಯಗಳ ಜೊತೆಗೆ ಅರಣ್ಯದ ಹಕ್ಕುಗಳನ್ನು ಕೊಡಬೇಕು. ಆದಿವಾಸಿಗಳಿಗಾಗಿ ವಿಶ್ವಸಂಸ್ಥೆ ಈ ದಿನವನ್ನು ಘೋಷಣೆ ಮಾಡಿದೆ.ʼಮಹಿಳೆಯರ ಬೆಳವಣಿಗೆ ಮತ್ತು ಅವರ ಸಂಸ್ಕೃತಿಗೆ ಅವರ ಪಾತ್ರ;ʼ ಎಂದು ಈಓ ವರ್ಷದ ಘೋಷ ವಾಖ್ಯವಾಗಿದ್ದು,. ಈ ನಿಟ್ಟಿನಲ್ಲಿ ನಾವು ಇಂದು ಆದಿವಾಸಿಗಳ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ ಎಂದರು. ನಾವು 56 ಪೋಡೊಗಳಲ್ಲಿ ಸುಮಾರು ಸುಮಾರು 15000 ಜನರು ವಾಸ ಮಾಡುತ್ತಿದ್ದೇವೆ. ಈಗ ಹುಲಿ ಯೋಜನೆಯನ್ನು ಘೋಷಣೆ ಮಾಡುವುದರಿಂದ ನಮಗೆ ಮೂಲಭೂತ ಸೌಲಭ್ಯಗಳು ಮತ್ತು ಹಕ್ಕುಗಳ ಮೇಲೆ ತೊಂದರೆಯಾಗುತ್ತದೆ ಹೀಗಾಗಿ ನಮಗೆ ಹುಲಿ ಯೋಜನೆಯನನು ಘೋಷಣೆ ಮಾಡುವ ಅವಶ್ಯಕತೆ ಇಲ್ಲ ಎಂದರು. ವನ್ಯಜೀವಿಧಾಮವನ್ನೆ ಮುಂದುವರಿಸಬೇಕೆಂಬುದು ನಮ್ಮ ಅಭಿಪ್ರಾಯ ಎಂದರು.

andolanait

Recent Posts

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

4 mins ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

27 mins ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

1 hour ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

3 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

4 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

5 hours ago