ಜಿಲ್ಲೆಗಳು

ಹುಲಿ ಯೋಜನೆ ಘೋಷಣೆ ಮಾಡುವುದರಿಂದ ನಮ್ಮ ಮೂಲಭೂತ ಸೌಲಭ್ಯ ‍‍& ಹಕ್ಕುಗಳ ಮೇಲೆ ತೊಂದರೆಯಾಗುತ್ತದೆ : ಡಾ.ಮಾದೇಗೌಡ

ಚಾಮರಾಜನಗರ : ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿಂದು ಬುಡಕಟ್ಟು ಸಮುದಾಯದ ಜನರು ಸಮಾವೇಶಗೊಂಡು ಆದಿವಾಸಿಗಳ ದಿನಾಚರಣೆ ಕಾರ್ಯಕ್ರಮವನ್ನು ಬಹಳ ಸಂಭ್ರಮದಿಂದ ಆಚರಿಸಿದರು.

ಜಿಲ್ಲಾ ಬುಡಕಟ್ಟು ಗಿರಿಜನ ಅಭಿವೃದ್ಧಿ ಸಂಘದಿಂದ  ನಡೆದ ಅಂತಾರಾಷ್ಟ್ರೀಯ ಆದಿವಾಸಿ ಬುಡಕಟ್ಟು ಸಮುದಾಯದ ಜನರು ಸಮಾವೇಶಗೊಂಡು ತಮ್ಮ ಆದಿವಾಸಿ ಸಂಪ್ರದಾಯದಂತೆ ತಾಳಕ್ಕೆ ಹೆಜ್ಜೆ ಹಾಕಿ ಸಂಭ್ರಮಿಸಿದರು.

 

ಗಿರಿಜನರ ಅಂತಾರಾಷ್ಟ್ರೀಯ ದಿನಾಚರಣೆ ಕುರಿತು ಮಾತನಾಡಿದ ಸಂಘದ ಅಧ್ಯಕ್ಷ ಡಾ.ಮಾದೇಗೌಡ 28ನೇ ವರ್ಷದ ಆದಿವಾಸಿ ಗಳ ದಿನಾಚರಣೆ ಪ್ರಪಂಚದಾದ್ಯಂತ ಇರುವ ಆದಿವಾಸಿಗಳನ್ನು ಗುರುತಿಸಿ ಅವರ ಹಕ್ಕುಗಳಿಗೆ ಬೆಲೆ ಕೊಡಬೇಕು ಮತ್ತು ಸಂಸ್ಕೃತಿಯನ್ನು ಕಾಪಾಡುವ ನಿಟ್ಟಿನಲ್ಲಿ ಮುಲಭುತ ಸೌಲಭ್ಯಗಳ ಜೊತೆಗೆ ಅರಣ್ಯದ ಹಕ್ಕುಗಳನ್ನು ಕೊಡಬೇಕು. ಆದಿವಾಸಿಗಳಿಗಾಗಿ ವಿಶ್ವಸಂಸ್ಥೆ ಈ ದಿನವನ್ನು ಘೋಷಣೆ ಮಾಡಿದೆ.ʼಮಹಿಳೆಯರ ಬೆಳವಣಿಗೆ ಮತ್ತು ಅವರ ಸಂಸ್ಕೃತಿಗೆ ಅವರ ಪಾತ್ರ;ʼ ಎಂದು ಈಓ ವರ್ಷದ ಘೋಷ ವಾಖ್ಯವಾಗಿದ್ದು,. ಈ ನಿಟ್ಟಿನಲ್ಲಿ ನಾವು ಇಂದು ಆದಿವಾಸಿಗಳ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ ಎಂದರು. ನಾವು 56 ಪೋಡೊಗಳಲ್ಲಿ ಸುಮಾರು ಸುಮಾರು 15000 ಜನರು ವಾಸ ಮಾಡುತ್ತಿದ್ದೇವೆ. ಈಗ ಹುಲಿ ಯೋಜನೆಯನ್ನು ಘೋಷಣೆ ಮಾಡುವುದರಿಂದ ನಮಗೆ ಮೂಲಭೂತ ಸೌಲಭ್ಯಗಳು ಮತ್ತು ಹಕ್ಕುಗಳ ಮೇಲೆ ತೊಂದರೆಯಾಗುತ್ತದೆ ಹೀಗಾಗಿ ನಮಗೆ ಹುಲಿ ಯೋಜನೆಯನನು ಘೋಷಣೆ ಮಾಡುವ ಅವಶ್ಯಕತೆ ಇಲ್ಲ ಎಂದರು. ವನ್ಯಜೀವಿಧಾಮವನ್ನೆ ಮುಂದುವರಿಸಬೇಕೆಂಬುದು ನಮ್ಮ ಅಭಿಪ್ರಾಯ ಎಂದರು.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

4 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

4 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

4 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

4 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

4 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

4 hours ago