ಚಾಮರಾಜನಗರ: ಜಿಲ್ಲೆಯ ಇಬ್ಬರು ಐಎಫ್ಎಸ್ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿ ಬುಧವಾರ ಸಂಜೆ ಆದೇಶ ಹೊರಡಿಸಿದೆ. ಮಲೆ ಮಹದೇಶ್ವರ ವನ್ಯಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ.ಏಡುಕುಂಡಲು ಹಾಗೂ ಬಿಳಿಗಿರಿರಂಗನಾಥಸ್ವಾಮಿ ದೇವಾಲಯ (ಬಿಆರ್ಟಿ) ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಜಿ.ಸಂತೋಷ್ಕುಮಾರ್ ಅವರನ್ನು ವರ್ಗಾಯಿಸಲಾಗಿದೆ..
ಸಂತೋಷ್ ಅವರನ್ನು ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿಧಾಮಕ್ಕೆ, ವಿ.ಏಡುಕುಂಡಲು ಅವರನ್ನು ಕೋಲಾರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಜನಪ್ರಿಯ ಹಾಗೂ ಹಲವು ಅಭಿವೃದ್ಧಿ ಕಾರ್ಯಗಳ ಮೂಲಕ ಜನರ ಮನ ಗೆದ್ದಿದ್ದ ಹಾಗು ಕ್ರಿಯಾಶೀಲ ಅಧಿಕಾರಿ ಏಡುಕುಂಡಲು ಅವರ ವರ್ಗಾವಣೆಗೆ ಜನರು ಅಸಮಾಧಾನ ಹೊರಹಾಕಿದ್ದಾರೆ.
ಮೈಸೂರು ಕಾರ್ಯ ಯೋಜನೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ ದೀಪಾ ಜೆ. ಕಾಂಟ್ರಾಕ್ಟರ್ ಅವರನ್ನು ಬಿಆರ್ಟಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ವರ್ಗಾಯಿಸಲಾಗಿದೆ. ಈ ಹಿಂದೆ, ಸಚಿವ ಉಮೇಶ್ ಕತ್ತಿ ಬಂದಿದ್ದ ವೇಳೆ ಏಡುಕುಂಡಲು ಅವರನ್ನು ಸದ್ಯಕ್ಕೆ ವರ್ಗಾವಣೆ ಮಾಡಬಾರದು ಎಂದು ರೈತ ಮುಖಂಡರು ಒತ್ತಾಯಿಸಿ ಮನವಿ ಪತ್ರ ಕೊಟ್ಟಿದ್ದರು.
ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…
ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…
ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…
ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…
ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…