ಚಾಮರಾಜನಗರ: ಜಿಲ್ಲೆಯ ಇಬ್ಬರು ಐಎಫ್ಎಸ್ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿ ಬುಧವಾರ ಸಂಜೆ ಆದೇಶ ಹೊರಡಿಸಿದೆ. ಮಲೆ ಮಹದೇಶ್ವರ ವನ್ಯಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ.ಏಡುಕುಂಡಲು ಹಾಗೂ ಬಿಳಿಗಿರಿರಂಗನಾಥಸ್ವಾಮಿ ದೇವಾಲಯ (ಬಿಆರ್ಟಿ) ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಜಿ.ಸಂತೋಷ್ಕುಮಾರ್ ಅವರನ್ನು ವರ್ಗಾಯಿಸಲಾಗಿದೆ..
ಸಂತೋಷ್ ಅವರನ್ನು ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿಧಾಮಕ್ಕೆ, ವಿ.ಏಡುಕುಂಡಲು ಅವರನ್ನು ಕೋಲಾರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಜನಪ್ರಿಯ ಹಾಗೂ ಹಲವು ಅಭಿವೃದ್ಧಿ ಕಾರ್ಯಗಳ ಮೂಲಕ ಜನರ ಮನ ಗೆದ್ದಿದ್ದ ಹಾಗು ಕ್ರಿಯಾಶೀಲ ಅಧಿಕಾರಿ ಏಡುಕುಂಡಲು ಅವರ ವರ್ಗಾವಣೆಗೆ ಜನರು ಅಸಮಾಧಾನ ಹೊರಹಾಕಿದ್ದಾರೆ.
ಮೈಸೂರು ಕಾರ್ಯ ಯೋಜನೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ ದೀಪಾ ಜೆ. ಕಾಂಟ್ರಾಕ್ಟರ್ ಅವರನ್ನು ಬಿಆರ್ಟಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ವರ್ಗಾಯಿಸಲಾಗಿದೆ. ಈ ಹಿಂದೆ, ಸಚಿವ ಉಮೇಶ್ ಕತ್ತಿ ಬಂದಿದ್ದ ವೇಳೆ ಏಡುಕುಂಡಲು ಅವರನ್ನು ಸದ್ಯಕ್ಕೆ ವರ್ಗಾವಣೆ ಮಾಡಬಾರದು ಎಂದು ರೈತ ಮುಖಂಡರು ಒತ್ತಾಯಿಸಿ ಮನವಿ ಪತ್ರ ಕೊಟ್ಟಿದ್ದರು.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…