ಜಿಲ್ಲೆಗಳು

ಸಾವಿಗೆ ಶರಣಾದ ಉಪನ್ಯಾಸಕಿ ಚಂದನಾ ಡೆತ್ ನೋಟ್ ನಲ್ಲಿ ಏನಿದೆ?

ಚಾಮರಾಜನಗರ :  ತಮ್ಮ ಜನ್ಮ ದಿನದಂದೇ, ಕಾಲೇಜು ಉಪನ್ಯಾಸಕಿಯೋರ್ವರು ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದ ಘಟನೆ ನಗರದಲ್ಲಿ ಮಂಗಳವಾರ ನಡೆದಿತ್ತು.
ನಗರದ ಜೆ ಎಸ್ ಎಸ್ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕಿ ಚಂದನಾ (26) ಮೃತಪಟ್ಟಿದ್ದು ಇದೀಗ ಅವರು ಬರೆದಿರುವ ಡೆತ್‌ನೋಟ್‌ ಪತ್ತೆಯಾಗಿದೆ.

ಚಂದನಾ ಡೆತ್ ನೋಟ್ ನಲ್ಲಿ ಏನಿದೆ?

ಚಂದನಾ ಬರೆದಿದ್ದಾರೆ ಎನ್ನಲಾದ ಡೆತ್‌ನೋಟ್‌ನಲ್ಲಿ ನನ್ನ ಸಾವಿಗೆ ನಾನೇ ಕಾರಣ ಬರೆದಿದೆ. ‘ಯಾಕೆ ಯಾರೂ ನನ್ನ ಅರ್ಥ ಮಾಡಿಕೊಳ್ಳುತ್ತಿಲ್ಲ. ನನ್ನ ಜೊತೆ ಒಬ್ಬೊಬ್ಬರು ಒಂದೊಂದು ಥರ ನಡೆದುಕೊಳ್ಳುತ್ತಿದ್ದೀರಾ? ನಾನು ಯಾರ ಪರ ಇರಲಿ, ಯಾರ ಮಾತು ಕೇಳಿಲಿ? ಎಂದು ಗೊತ್ತಾಗುತ್ತಿಲ್ಲ. ನಾನು ಏನು ಅಂದುಕೊಂಡರೂ ಮಾಡಲು ಆಗುತ್ತಿಲ್ಲ, ಮಾಡೋಕ್ಕೆ ಬಿಡುತ್ತಿಲ್ಲ. ಎಲ್ಲರೂ ಹೇಳಿದ್ದನ್ನು ಕೇಳಿ ಸಾಕಾಗಿದೆ. ಮುಂದೆ ಏನು ಮಾಡಬೇಕು? ಹೇಗೆ ಇರಬೇಕು? ಎಲ್ಲ ಪ್ರಶ್ನೆಯಾಗಿಯೇ ಉಳಿದಿದೆ. ನನ್ನ ಮೈಂಡ್ ಫುಲ್ ಬ್ಯಾಂಕ್ ಆಗಿದೆ. ಏನು ಮಾಡೋಕು ಆಗುತ್ತಿಲ್ಲ.

‘ಈ ಕಡೆ ಕಾಲೇಜು, ಆ ಕಡೆ ಮನೆ. ಎರಡೂ ಕಡೆ ಒ ಹೇಗೆ ಇರೋದಿಕ್ಕೆ ಆಗುತ್ತೆ? ಕೆಲಸ ಹೊಸದು. ಮಕ್ಕಳಿ ಅರ್ಥ ಆಗೋ ಹಾಗೆ ಪಾಠ ಮಾಡಬೇಕು, ಓದಬೇಕು ನೋಟ್ಸ್ ಮಾಡಬೇಕು. ನಾನು ಓದೋದು ನಿಧಾನ. ಯುಟ್ಯೂಬ್ ಹೇಗೆ ಮ್ಯಾನೇಜ್ ಮಾಡಬೇಕು ಗೊತ್ತಾಗುತ್ತಿಲ್ಲ. ಅದಕ್ಕೆ ನಾನು ಮನೆಗೂ ಬರ್ತಾ ಇರಲಿಲ್ಲ. ಸಾರಿ ಪಪ್ಪಾ.. ನನಗೆ ಆಗುತ್ತಿಲ್ಲ. ಯಾರೂ ನನ್ನ ಅರ್ಥ ಮಾಡಿಕೊಳ್ಳುತ್ತಿಲ್ಲ. ನಿಮ್ಮದೇ ಆದ ದೃಷ್ಟಿಯಲ್ಲಿ ನೋಡ್ತೀರ. ಸಾರಿ ಫ್ರೆಂಡ್ಸ್ ಆಲ್… ನಾನು ಯಾರನ್ನೂ ಪ್ರೀತಿ ಮಾಡ್ತಿಲ್ಲ. ನನ್ನ ಸಾವಿಗೆ ನಾನೇ ಕಾರಣ’.

‘ಮೇಘ ಅಕ್ಕ ಯಾರಿಗೂ ಹಿಂಸೆ ಕೊಡಬೇಡ. ಅನು ಅಕ್ಕ ಸಾರಿ ಕಣೆ, ನೀನು ನನಗೆ ಎಲ್ಲ ಮಾಡಿದ್ರೂ ಯೂ ಆರ್ ಮೈ ಬೆಸ್ಟ್. ನಿತ್ಯ ಚೆನ್ನಾಗಿ ಓದಿ ಒಳ್ಳೆಯ ಕೆಲಸ ತೆಗೆದುಕೊ. ಈ ಕೆಲಸ ಬೇಡ. ಆರೋಗ್ಯ ಹಾಳಾಗುತ್ತೆ. ಅಜ್ಜಿ, ಅಮ್ಮ ಎಲ್ಲರೂ ಚೆನ್ನಾಗಿರಿ. ರಮ್ಯ ಮೇಡಂ ಸಾರಿ… ಮಿಸ್ ಯು ಆಲ್’ ಎಂದು ಡೆತ್‌ ನೋಟ್‌ನಲ್ಲಿ ಬರೆಯಲಾಗಿದೆ.

andolanait

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

10 mins ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

13 mins ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

19 mins ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

23 mins ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

31 mins ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

24 hours ago