ಜಿಲ್ಲೆಗಳು

ಸಾವಿಗೆ ಶರಣಾದ ಉಪನ್ಯಾಸಕಿ ಚಂದನಾ ಡೆತ್ ನೋಟ್ ನಲ್ಲಿ ಏನಿದೆ?

ಚಾಮರಾಜನಗರ :  ತಮ್ಮ ಜನ್ಮ ದಿನದಂದೇ, ಕಾಲೇಜು ಉಪನ್ಯಾಸಕಿಯೋರ್ವರು ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದ ಘಟನೆ ನಗರದಲ್ಲಿ ಮಂಗಳವಾರ ನಡೆದಿತ್ತು.
ನಗರದ ಜೆ ಎಸ್ ಎಸ್ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕಿ ಚಂದನಾ (26) ಮೃತಪಟ್ಟಿದ್ದು ಇದೀಗ ಅವರು ಬರೆದಿರುವ ಡೆತ್‌ನೋಟ್‌ ಪತ್ತೆಯಾಗಿದೆ.

ಚಂದನಾ ಡೆತ್ ನೋಟ್ ನಲ್ಲಿ ಏನಿದೆ?

ಚಂದನಾ ಬರೆದಿದ್ದಾರೆ ಎನ್ನಲಾದ ಡೆತ್‌ನೋಟ್‌ನಲ್ಲಿ ನನ್ನ ಸಾವಿಗೆ ನಾನೇ ಕಾರಣ ಬರೆದಿದೆ. ‘ಯಾಕೆ ಯಾರೂ ನನ್ನ ಅರ್ಥ ಮಾಡಿಕೊಳ್ಳುತ್ತಿಲ್ಲ. ನನ್ನ ಜೊತೆ ಒಬ್ಬೊಬ್ಬರು ಒಂದೊಂದು ಥರ ನಡೆದುಕೊಳ್ಳುತ್ತಿದ್ದೀರಾ? ನಾನು ಯಾರ ಪರ ಇರಲಿ, ಯಾರ ಮಾತು ಕೇಳಿಲಿ? ಎಂದು ಗೊತ್ತಾಗುತ್ತಿಲ್ಲ. ನಾನು ಏನು ಅಂದುಕೊಂಡರೂ ಮಾಡಲು ಆಗುತ್ತಿಲ್ಲ, ಮಾಡೋಕ್ಕೆ ಬಿಡುತ್ತಿಲ್ಲ. ಎಲ್ಲರೂ ಹೇಳಿದ್ದನ್ನು ಕೇಳಿ ಸಾಕಾಗಿದೆ. ಮುಂದೆ ಏನು ಮಾಡಬೇಕು? ಹೇಗೆ ಇರಬೇಕು? ಎಲ್ಲ ಪ್ರಶ್ನೆಯಾಗಿಯೇ ಉಳಿದಿದೆ. ನನ್ನ ಮೈಂಡ್ ಫುಲ್ ಬ್ಯಾಂಕ್ ಆಗಿದೆ. ಏನು ಮಾಡೋಕು ಆಗುತ್ತಿಲ್ಲ.

‘ಈ ಕಡೆ ಕಾಲೇಜು, ಆ ಕಡೆ ಮನೆ. ಎರಡೂ ಕಡೆ ಒ ಹೇಗೆ ಇರೋದಿಕ್ಕೆ ಆಗುತ್ತೆ? ಕೆಲಸ ಹೊಸದು. ಮಕ್ಕಳಿ ಅರ್ಥ ಆಗೋ ಹಾಗೆ ಪಾಠ ಮಾಡಬೇಕು, ಓದಬೇಕು ನೋಟ್ಸ್ ಮಾಡಬೇಕು. ನಾನು ಓದೋದು ನಿಧಾನ. ಯುಟ್ಯೂಬ್ ಹೇಗೆ ಮ್ಯಾನೇಜ್ ಮಾಡಬೇಕು ಗೊತ್ತಾಗುತ್ತಿಲ್ಲ. ಅದಕ್ಕೆ ನಾನು ಮನೆಗೂ ಬರ್ತಾ ಇರಲಿಲ್ಲ. ಸಾರಿ ಪಪ್ಪಾ.. ನನಗೆ ಆಗುತ್ತಿಲ್ಲ. ಯಾರೂ ನನ್ನ ಅರ್ಥ ಮಾಡಿಕೊಳ್ಳುತ್ತಿಲ್ಲ. ನಿಮ್ಮದೇ ಆದ ದೃಷ್ಟಿಯಲ್ಲಿ ನೋಡ್ತೀರ. ಸಾರಿ ಫ್ರೆಂಡ್ಸ್ ಆಲ್… ನಾನು ಯಾರನ್ನೂ ಪ್ರೀತಿ ಮಾಡ್ತಿಲ್ಲ. ನನ್ನ ಸಾವಿಗೆ ನಾನೇ ಕಾರಣ’.

‘ಮೇಘ ಅಕ್ಕ ಯಾರಿಗೂ ಹಿಂಸೆ ಕೊಡಬೇಡ. ಅನು ಅಕ್ಕ ಸಾರಿ ಕಣೆ, ನೀನು ನನಗೆ ಎಲ್ಲ ಮಾಡಿದ್ರೂ ಯೂ ಆರ್ ಮೈ ಬೆಸ್ಟ್. ನಿತ್ಯ ಚೆನ್ನಾಗಿ ಓದಿ ಒಳ್ಳೆಯ ಕೆಲಸ ತೆಗೆದುಕೊ. ಈ ಕೆಲಸ ಬೇಡ. ಆರೋಗ್ಯ ಹಾಳಾಗುತ್ತೆ. ಅಜ್ಜಿ, ಅಮ್ಮ ಎಲ್ಲರೂ ಚೆನ್ನಾಗಿರಿ. ರಮ್ಯ ಮೇಡಂ ಸಾರಿ… ಮಿಸ್ ಯು ಆಲ್’ ಎಂದು ಡೆತ್‌ ನೋಟ್‌ನಲ್ಲಿ ಬರೆಯಲಾಗಿದೆ.

andolanait

Recent Posts

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

1 hour ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

4 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

4 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌| ಮೇ 31 ಭಾನುವಾರ

4 hours ago

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

17 hours ago