ಚಾಮರಾಜನಗರ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಚಾಮರಾಜನಗರ ಇವರ ವತಿಯಿಂದ ನಾಳೆ ( ಆ.18 ಗುರುವಾರ) ಸಂಜೆ 5 ಗಂಟೆಗೆ ಚಾಮರಾಜನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಅಮೃತ ವರ್ಷ ಬೆಳ್ಳಿಯ ಸ್ಪರ್ಶ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು. ಚಾಮರಾಜನಗರ ಜಿಲ್ಲೆಯಲ್ಲಿರುವ ಸ್ವಾತಂತ್ರ್ಯ ಹೋರಾಟದ ಕುರಿತು ವಿಶೇಷ ಉಪನ್ಯಾಸ ನಡೆಯಲಿದೆ.
ಜಿಲ್ಲೆ ಗಾಂಧಿವಾದಿಗಳಾದ ಸಿ.ಪಿ ಹುಚ್ಚೇಗೌಡ ಅವರು ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ. ಅಧ್ಯಕ್ಷತೆಯನನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಶೈಲ ಕುಮಾರ್ ವಹಿಸಲಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿರುವ ಸ್ವಾತಂತ್ರ್ಯ ಹೋರಾಟದ ಕುರಿತು ವಿಶೇಷ ಉಪನ್ಯಾಸವನ್ನು ಸಾಹಿತಿಗಳು ಹಾಗೂ ಚಿಂತಕರಾದ ಕೆ.ವೆಂಕಟರಾಜು ಅವರು ನಡೆಸಿಕೊಡಲಿದ್ದಾರೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಜಿಲ್ಲೆಯ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ರಂಗಸ್ವಾಮಿ ಅವರ ಪುತ್ರ ಕರ್ನಾಟಕ ಸೇನಾ ಪಡೆಯ ರಾಜ್ಯಾಧ್ಯಕ್ಷರಾದ ಚಾ.ರಂ.ಶ್ರೀನಿವಾಸಗೌಡ ಹಾಗೂ ಜಿಲ್ಲೆಯ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಶಂಕರಪ್ಪ ದೊಡ್ಡರಾಯಪೇಟೆ ಅವರು ಪುತ್ರರಾದ ಪರಿಸರವಾದಿ ಪುಣಜನೂರು ದೊರೆಸ್ವಾಮಿ ಭಾಗವಹಿಸಲಿದ್ದಾರೆ.
ಚಾಮರಾಜನಗರ ಜಿಲ್ಲೆಯಲ್ಲಿ ಸುಮಾರು 23 ಮಂದಿ ಸ್ವಾತಂತ್ರ್ಯ ಹೋರಾಟಗಾರರಿದ್ದು, ಅವರಲ್ಲಿ ತೋಟಪ್ಪ, ಲಲಿತಾ ಜಿ,ಮಾದಪ್ಪ ಕಾಗಲವಾಡಿ ಇವರುಗಳು ಮಾತ್ರ ಬದುಕುಳಿದಿದ್ದಾರೆ.
\
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಂತರರಾಜ್ಯ ಪಾಲಾರ್ ಚೆಕ್ಪೋಸ್ಟ್ನಲ್ಲಿ ಒಂಟಿ ಸಲಗದ ದಾಂಧಲೆಗೆ ಅರಣ್ಯ…
ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು…
ಹಾಸನ: ಕಾರೊಂದು ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿ ಪಲ್ಟಿಯಾದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ…
ವಾಷಿಂಗ್ಟನ್: ಯುದ್ಧಕ್ಕೆ ಸಂಬಂಧಿಸಿದಂತೆ ಅಮೇರಿಕಾ ಪ್ರಜೆಗಳನ್ನು ಉದ್ದೇಶಿಸಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಷಣ ಮಾಡಿದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು ವಿಶ್ವ ಹಿಂದೂ ಪರಿಷತ್ ವತಿಯಿಂದ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ. ನಗರದಾದ್ಯಂತ ಕೇಸರಿ ಬಾವುಟ, ಬ್ಯಾನರ್,…
ವಾಷಿಂಗ್ಟನ್: ಇನ್ನು ಎರಡು ಅಥವಾ ಮೂರು ವಾರಗಳಲ್ಲಿ ಯುದ್ಧ ಅಂತ್ಯಗೊಳ್ಳಲಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ದೇಶವನ್ನು…