ಚಾಮರಾಜನಗರ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಚಾಮರಾಜನಗರ ಇವರ ವತಿಯಿಂದ ನಾಳೆ ( ಆ.18 ಗುರುವಾರ) ಸಂಜೆ 5 ಗಂಟೆಗೆ ಚಾಮರಾಜನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಅಮೃತ ವರ್ಷ ಬೆಳ್ಳಿಯ ಸ್ಪರ್ಶ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು. ಚಾಮರಾಜನಗರ ಜಿಲ್ಲೆಯಲ್ಲಿರುವ ಸ್ವಾತಂತ್ರ್ಯ ಹೋರಾಟದ ಕುರಿತು ವಿಶೇಷ ಉಪನ್ಯಾಸ ನಡೆಯಲಿದೆ.
ಜಿಲ್ಲೆ ಗಾಂಧಿವಾದಿಗಳಾದ ಸಿ.ಪಿ ಹುಚ್ಚೇಗೌಡ ಅವರು ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ. ಅಧ್ಯಕ್ಷತೆಯನನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಶೈಲ ಕುಮಾರ್ ವಹಿಸಲಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿರುವ ಸ್ವಾತಂತ್ರ್ಯ ಹೋರಾಟದ ಕುರಿತು ವಿಶೇಷ ಉಪನ್ಯಾಸವನ್ನು ಸಾಹಿತಿಗಳು ಹಾಗೂ ಚಿಂತಕರಾದ ಕೆ.ವೆಂಕಟರಾಜು ಅವರು ನಡೆಸಿಕೊಡಲಿದ್ದಾರೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಜಿಲ್ಲೆಯ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ರಂಗಸ್ವಾಮಿ ಅವರ ಪುತ್ರ ಕರ್ನಾಟಕ ಸೇನಾ ಪಡೆಯ ರಾಜ್ಯಾಧ್ಯಕ್ಷರಾದ ಚಾ.ರಂ.ಶ್ರೀನಿವಾಸಗೌಡ ಹಾಗೂ ಜಿಲ್ಲೆಯ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಶಂಕರಪ್ಪ ದೊಡ್ಡರಾಯಪೇಟೆ ಅವರು ಪುತ್ರರಾದ ಪರಿಸರವಾದಿ ಪುಣಜನೂರು ದೊರೆಸ್ವಾಮಿ ಭಾಗವಹಿಸಲಿದ್ದಾರೆ.
ಚಾಮರಾಜನಗರ ಜಿಲ್ಲೆಯಲ್ಲಿ ಸುಮಾರು 23 ಮಂದಿ ಸ್ವಾತಂತ್ರ್ಯ ಹೋರಾಟಗಾರರಿದ್ದು, ಅವರಲ್ಲಿ ತೋಟಪ್ಪ, ಲಲಿತಾ ಜಿ,ಮಾದಪ್ಪ ಕಾಗಲವಾಡಿ ಇವರುಗಳು ಮಾತ್ರ ಬದುಕುಳಿದಿದ್ದಾರೆ.
\
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…